ಕೊರೊನಿಲ್ ನಿಷೇಧಿಸಲು ಅರ್ಜಿ: ಬಾಬಾ ರಾಮದೇವ್ಗೆ ಕೋರ್ಟ್ ನೋಟಿಸ್
ಡೆಹ್ರಾಡೂನ್, ಜುಲೈ 1: ಕೊರೊನಾ ವೈರಸ್ ಔಷಧಿ ಎಂದು ಹೇಳಲಾಗುತ್ತಿರುವ ಪತಂಜಲಿ ಕೊರೊನಿಲ್ ಔಷಧಿಯನ್ನು ನಿಷೇಧಿಸುವಂತೆ ಉತ್ತರಾಖಂಡ್ ಹೈ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
Recommended Video
ಅರ್ಜಿ ಸ್ವೀಕರಿಸಿರುವ ಉತ್ತರಾಖಂಡ್ ನ್ಯಾಯಾಲಯ ಪತಂಜಲಿ ಸಂಸ್ಥೆ ಮಾಲೀಕ ಯೋಗಗುರು ಬಾಬಾ ರಾಮದೇವ್, ದಿವ್ಯ ಫಾರ್ಮಸಿ, ನಿಮ್ಸ್ ವಿಶ್ವವಿದ್ಯಾಲಯ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೆ ವಿವರಣೆ ನೀಡುವಂತೆ ನೋಟಿಸ್ ಜಾರಿ ಮಾಡಿದೆ.
ಪತಂಜಲಿಯ ದಿವ್ಯಾ ಫಾರ್ಮಸಿ ರೋಗನಿರೋಧಕ ವರ್ಧಕಗಳಿಗಾಗಿ ರಾಜ್ಯ ಸರ್ಕಾರದಿಂದ ಅನುಮತಿ ಕೋರಿದೆ. ಆದರೆ, ಬಾಬಾ ರಾಮದೇವ್ ಕೊರೊನಿಲ್ ಆಯುರ್ವೇದ ಔಷಧಿಯನ್ನು ಕೋವಿಡ್ -19ಗೆ ಔಷಧಿ ಎಂದು ಹೇಳುವ ಮೂಲಕ ಜನರ ದಾರಿ ತಪ್ಪಿಸಿದ್ದಾರೆ ಎಂದು ವಕೀಲ ಮಣಿ ಕುಮಾರ್ ಆರೋಪಿಸಿದ್ದಾರೆ.
Uttarakhand High Court issues notice to Yoga guru Ramdev, Divya Pharmacy, NIMS University, the Centre and the state government on a plea which sought a ban on Ayurvedic medicine Coronil. pic.twitter.com/kuE09RLU4S
— ANI (@ANI) July 1, 2020
ಈ ಸಂಬಂಧ ''ಆಯುಷ್ ಸಚಿವಾಲಯ ಅಥವಾ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್), ರಾಜ್ಯ ಮಟ್ಟದಲ್ಲಿ ಮತ್ತು ಕೇಂದ್ರ ಸರ್ಕಾರದ ಮಟ್ಟದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಅಗತ್ಯವಾದ ಅನುಮತಿ ಸಹ ಪಡೆದಿಲ್ಲ' ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮತ್ತೊಂದೆಡೆ ಕೊರೊನಿಲ್ ಔಷಧಿ ಕುರಿತು ಸ್ಪಷ್ಟನೆ ನೀಡಿರುವ ಬಾಬಾ ರಾಮದೇವ್ ''ಕೊರೊನಿಲ್ ಕುರಿತು ಯಾವುದೇ ವಿವಾದಗಳಿಲ್ಲ, ಇದು ನನ್ನ ವಿರುದ್ಧದ ಪ್ರಚಾರವಷ್ಟೇ. ಕೊರೊನಿಲ್ ಕೆಲಸಗಳನ್ನು ಕಾನೂನಿನ ಪ್ರಕಾರ ಮಾಡಲಾಗಿದೆ. ಆಯುಷ್ ಸಚಿವಾಲಯವೂ ನಮ್ಮ ಪ್ರಯತ್ನವನ್ನು ಶ್ಲಾಘಿಸಿದೆ'' ಎಂದಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications