Train Collision: ಎರಡು ರೈಲುಗಳ ನಡುವೆ ಡಿಕ್ಕಿ, 60 ಜನರಿಗೆ ಗಾಯ
ಉತ್ತರಾಖಂಡ: ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಈ ದುರಂತದಲ್ಲಿ 60 ಜನರಿಗೆ ಗಾಯವಾಗಿದೆ. ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ವಿಷ್ಣುಗಢ-ಪಿಪಲ್ಕೋಟಿ ಜಲವಿದ್ಯುತ್ ಯೋಜನೆ ಸುರಂಗ ಮಾರ್ಗದಲ್ಲಿ ಈ ದುರಂತ ಸಂಭವಿಸಿದೆ. 2 ಲೋಕೋ ಟ್ರೈನ್ಗಳ ನಡುವೆ ಡಿಕ್ಕಿ ಸಂಭವಿಸಿದೆ. ಪಿಪಲ್ಕೋಟಿ ಸುರಂಗದ ಮೂಲಕ ಜನರನ್ನು ಕರೆದುಕೊಂಡು ಹೋಗುವ ಸಮಯದಲ್ಲಿ ದುರಂತ ಸಂಭವಿಸಿದ್ದು, ಈ ಘಟನೆ ಬೆಚ್ಚಿ ಬೀಳಿಸಿದೆ.
ವಿಷ್ಣುಗಢ-ಪಿಪಲ್ಕೋಟಿ ಜಲವಿದ್ಯುತ್ ಯೋಜನೆ ಮಹತ್ವದ ಪ್ರಾಜೆಕ್ಟ್ ಆಗಿದ್ದು, ಬರೋಬ್ಬರಿ 444 ಮೆಗಾವ್ಯಾಟ್ ಜಲವಿದ್ಯುತ್ ಯೋಜನೆಯನ್ನ ಉತ್ತರಾಖಂಡದ ಚಮೋಲಿ ಜಿಲ್ಲೆಯ ಹೆಲಾಂಗ್ ಬಳಿ ಕೈಗೆತ್ತಿಕೊಳ್ಳಲಾಗಿದೆ. ಟಿಎಚ್ಡಿಸಿ ಕೈಗೆತ್ತಿಕೊಂಡಿರುವ ಈ ಯೋಜನೆ ದೇಶದ ಗಮನ ಸೆಳೆಯುತ್ತಿದೆ. ಹೀಗಿದ್ದಾಗ ಕಾರ್ಮಿಕರು, ಅಧಿಕಾರಿಗಳು ಮತ್ತು ನಿರ್ಮಾಣ ಕಾರ್ಯಕ್ಕೆ ಬೇಕಾದ ಸಾಮಗ್ರಿ ಸಾಗಿಸಲು ಸುರಂಗದ ಒಳಗೆ ಲೋಕೋ ಟ್ರೈನ್ ಬಳಕೆ ಮಾಡಲಾಗುತ್ತಿದೆ. ಆದರೆ ಪಿಪಲ್ಕೋಟಿ ಸುರಂಗದೊಳಗೆ ಜನರನ್ನ ಸಾಗಿಸುತ್ತಿದ್ದ ಒಂದು ರೈಲು ಸಾಮಗ್ರಿಗಳನ್ನ ಸಾಗಿಸುತ್ತಿದ್ದ ಇನ್ನೊಂದು ರೈಲಿಗೆ ಡಿಕ್ಕಿಯಾಗಿ ಭೀಕರ ದುರಂತ ಸಂಭವಿಸಿದೆ.

ವಿದ್ಯುತ್ ಉತ್ಪಾದನೆಗೆ ಮಹತ್ವದ ಯೋಜನೆ
ಅಂದಹಾಗೆ ಈ ಯೋಜನೆ 4 ಟರ್ಬೈನ್ಗಳ ಮೂಲಕ 111 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಿದ್ದು, ದೇಶದ ವಿದ್ಯುತ್ ಸ್ವಾವಲಂಬನೆಗೆ ಮಹತ್ವದ ಕೊಡುಗೆ ನೀಡುವ ನಿರೀಕ್ಷೆಯು ಕೂಡ ಇದೆ. ಪ್ರಮುಖವಾಗಿ ಉತ್ತರಾಖಂಡದ ಪಾಲಿಗೆ ಈ ಯೋಜನೆ ಅತ್ಯಗತ್ಯ ಎನ್ನಬಹುದು. ಇದೇ ಕಾರಣಕ್ಕೆ ವೇಗವಾಗಿ ಕಾಮಗಾರಿ ಮುಗಿಸಲು ಕ್ರಮ ಕೈಗೊಳ್ಳಲಾಗಿದೆ, ಆದರೆ ಇಂತಹ ಸಮಯದಲ್ಲಿ ದಿಢೀರ್ ದುರಂತ ಸಂಭವಿಸಿದ್ದು ಪರಿಹಾರ ಕಾರ್ಯಾಚರಣೆ ನಡೆಸಲಾಗುತ್ತಿದೆ. ಅಧಿಕಾರಿಗಳು ಈ ಘಟನೆ ಹಿನ್ನೆಲೆ ಸ್ಥಳ ಪರಿಶೀಲನೆ ಮಾಡಿದ್ದು, ತನಿಖೆ ಆರಂಭಿಸಲಾಗಿದೆ.
ಸ್ಥಳೀಯ ಆಸ್ಪತ್ರೆಗಳಲ್ಲಿ ಮುಂದುವರಿದ ಚಿಕಿತ್ಸೆ
ಇನ್ನು ಈ ದುರಂತದ ಬಗ್ಗೆ ಮಾಹಿತಿ ನೀಡಿರುವ ಚಮೋಲಿಯ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್, 10 ಗಾಯಾಳುಗಳನ್ನು ಚಿಕಿತ್ಸೆಗಾಗಿ ಗೋಪೇಶ್ವರ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದಿದ್ದಾರೆ. ಹಾಗೇ ಚಮೋಲಿ ಎಸ್ಪಿ ಸುರ್ಜೀತ್ ಸಿಂಗ್ ಮಾಹಿತಿ ನೀಡಿ, 42 ಜನರನ್ನು ಈಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಹಾಗೇ 5 ಜನರಿಗೆ ಮೂಳೆ ಮುರಿದಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ. ಈ ದುರಂತಕ್ಕೆ ತಾಂತ್ರಿಕ ಕಾರಣ ಇದೆಯಾ? ಅಥವಾ ಘಟನೆ ಸಂಭವಿಸಿದ್ದು ಹೇಗೆ? ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications