Breaking: ಉತ್ತರಕಾಶಿಯಲ್ಲಿ 3.1 ತೀವ್ರತೆ ಭೂಕಂಪನ
ಉತ್ತರಕಾಶಿ, ಡಿಸೆಂಬರ್ 19: ಉತ್ತರಾಖಂಡದ ಉತ್ತರಕಾಶಿಯಲ್ಲಿ ಸೋಮವಾರ ಮುಂಜಾನೆ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, 3.1 ತೀವ್ರತೆಯ ಕಂಪನವು 1:50ರ ಸುಮಾರಿಗೆ ಸಂಭವಿಸಿದೆ.
ಉತ್ತರಕಾಶಿಯಲ್ಲಿ ಸಂಭವಿಸಿದ ಭೂಕಂಪನದ ಕೇಂದ್ರಬಿಂದುವು ಉತ್ತರಕಾಶಿಯ ಪೂರ್ವ-ಆಗ್ನೇಯಕ್ಕೆ 24 ಕಿಮೀ ದೂರದಲ್ಲಿರುವ ತೆಹ್ರಿ ಗರ್ವಾಲ್ ಜಿಲ್ಲೆಯಲ್ಲಿ 5 ಕಿಮೀ ಆಳದಲ್ಲಿದೆ ಎಂದು ತಿಳಿದು ಬಂದಿದೆ.
ಕಳೆದ ನವೆಂಬರ್ 9ರಂದು ತೆಹ್ರಿ ಪ್ರದೇಶದಲ್ಲಿ ಸಂಭವಿಸಿದ 4.5 ತೀವ್ರತೆಯ ಭೂಕಂಪದಿಂದ ಉತ್ತರಾಖಂಡವು ಕೊನೆಯದಾಗಿ ಆಘಾತಕ್ಕೊಳಗಾಯಿತು. ಕಳೆದ ಒಂದು ದಶಕದಲ್ಲಿ ಗುಡ್ಡಗಾಡು ರಾಜ್ಯವು 700 ಸಣ್ಣ ಭೂಕಂಪಗಳಿಂದ ತತ್ತರಿಸಿದೆ. ವಿಶ್ವದ ಅತ್ಯಂತ ಭೂಕಂಪನಶೀಲವಾಗಿರುವ ಹಿಮಾಲಯದ ಬೆಲ್ಟ್ನಲ್ಲಿ ಒಂದು ದೊಡ್ಡ ಭೂಕಂಪದ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಮೂರು ದಿನದ ಹಿಂದೆ ಹಿಮಾಚಲದಲ್ಲಿ ಕಂಪನ:
ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ವೇಳೆಯಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿತ್ತು. ಶುಕ್ರವಾರ ರಾತ್ರಿ 10.02ರ ಸುಮಾರಿಗೆ ಕಂಪನದ ಅನುಭವವಾಗಿದ್ದು, ಕಿನ್ನೌರ್ನ ನಾಕೋ ಬಳಿಯ ಚಾಂಗೊ ನಿಚ್ಲಾ ಭೂಕಂಪದ ಕೇಂದ್ರಬಿಂದು ಎಂದು ವಿಪತ್ತು ನಿರ್ವಹಣಾ ವಿಶೇಷ ಕಾರ್ಯದರ್ಶಿ ಸುದೇಶ್ ಮೊಕ್ತಾ ತಿಳಿಸಿದ್ದಾರೆ.
ಈ ಭೂಕಂಪದ ಆಳವು 5 ಕಿಮೀ ಉತ್ತರದಲ್ಲಿ 31.931 ಡಿಗ್ರಿ ಮತ್ತು ಪೂರ್ವದಲ್ಲಿ 78.638 ಡಿಗ್ರಿ ಎಂದು ಗೊತ್ತಾಗಿದೆ. ಈ ಕಂಪನ ಸಂಭವಿಸಿದ ಕೆಲವು ಸೆಕೆಂಡುಗಳಲ್ಲಿ ಜನರು ಆತಂಕಗೊಂಡಿದ್ದರು. ಭೂಮಿ ಕಂಪಿನಿಸ ಅನುಭವ ಆಗುತ್ತಿದ್ದಂತೆ ಜನರು ತಮ್ಮ ಮನೆಗಳಿಂದ ಹೊರಗೆ ಓಡಿ ಬಂದರು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications