ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಡಿಯೋ: ಮಾತಾ ವೈಷ್ಣೋದೇವಿ ಮಂದಿರದಲ್ಲಿ ಪೂಜಾ ವಿಧಾನ

|
Google Oneindia Kannada News

ಡೆಹ್ರಾಡೂನ್, ಜೂನ್.08: ಭಾರತದಲ್ಲಿ ಕೊರೊನಾ ವೈರಸ್ ಸೋಂಕು ಹರಡುವಿಕೆ ಭೀತಿ ನಡುವೆಯೂ ಧಾರ್ಮಿಕ ಕೇಂದ್ರಗಳನ್ನು ತೆರೆಯುವುದಕ್ಕೆ ಅನುಮತಿ ನೀಡಲಾಗಿದೆ. ಮಹಾಮಾರಿ ಅಂಟಿಕೊಳ್ಳದಂತೆ ಮುನ್ನೆಚ್ಚರಿಕೆ ವಹಿಸಲು ಕೇಂದ್ರ ಗೃಹ ಸಚಿವಾಲಯವು ಮಾರ್ಗಸೂಚಿಗಳನ್ನು ಹೊರಡಿಸಿದೆ.

Recommended Video

ಚಿರಂಜೀವಿಯ ಅಂತಮ ದರ್ಶನ ಪಡೆದ ರವಿಚಂದ್ರನ್ ಕುಟುಂಬ | Chiranjeevi Sarja | Ravi chandran | Oneindia Kannada

ಉತ್ತರಾಖಂಡ್ ಸರ್ಕಾರವು ಸ್ಥಳೀಯ ದೇವಸ್ಥಾನ, ಮಂದಿರ, ಮಸೀದಿ ಮತ್ತು ಚರ್ಚ್ ಗಳನ್ನು ತೆರೆಯುವುದಕ್ಕೆ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ಡೆಹ್ರಾಡೂನ್ ನಲ್ಲಿ ಇರುವ ಮಾತಾ ವೈಷ್ಣೋದೇವಿ ಗುಫಾ ಯೋಗ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಬೆಳಗ್ಗೆ 7 ಗಂಟೆಯಿಂದ ರಾತ್ರಿ 7 ಗಂಟೆವರೆಗೂ ದೇವರ ದರ್ಶನ ಪಡೆಯುವುದಕ್ಕೆ ಭಕ್ತರಿಗೆ ಅವಕಾಶ ನೀಡಲಾಗಿದೆ. ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ದೇವಸ್ಥಾನಗಳತ್ತ ಮುಖ ಮಾಡುತ್ತಿದ್ದಾರೆ. ಇದರ ಜೊತೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಕಂಟೇನ್ಮೆಂಟ್ ವಲಯಗಳಲ್ಲಿ ದೇವಸ್ಥಾನಗಳನ್ನು ತೆರೆಯದಿರಲು ಉತ್ತರಾಖಂಡ್ ಸರ್ಕಾರವು ಸೂಚನೆ ನೀಡಿದೆ.

ದೇವಸ್ಥಾನ, ಮಸೀದಿಗಳಲ್ಲಿ ಮಾಸ್ಕ್ ತೊಟ್ಟ ಭಕ್ತರಿಂದ ಪ್ರಾರ್ಥನೆ ಶುರು! ದೇವಸ್ಥಾನ, ಮಸೀದಿಗಳಲ್ಲಿ ಮಾಸ್ಕ್ ತೊಟ್ಟ ಭಕ್ತರಿಂದ ಪ್ರಾರ್ಥನೆ ಶುರು!

Uttarakhand: Prayers being offered at Mata Vaishno Devi Gufa Yog Mandir in Dehradun.


ಉತ್ತರಾಖಂಡ್ ನಲ್ಲಿ ಕೊರೊನಾ ವೈರಸ್ ಸ್ಥಿತಿಗತಿ:

ಉತ್ತರಾಖಂಡ್ ನಲ್ಲಿ ನೊವೆಲ್ ಕೊರೊನಾ ವೈರಸ್ ಸೋಂಕನ್ನು ಸರ್ಕಾರ ಸಮರ್ಥವಾಗಿ ಎದುರಿಸಿದೆ. ಮಹಾಮಾರಿ ಹರಡುವಿಕೆಗೆ ಕಡಿವಾಣ ಹಾಕಿರುವುದ ಅಂಕಿ-ಅಂಶಗಳಲ್ಲಿ ಸಾಬೀತಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ 2.5 ಲಕ್ಷದ ಗಡಿ ದಾಟಿದೆ. ಆದರೆ ಉತ್ತರಾಖಂಡ್ ನಲ್ಲಿ ಇದುವರೆಗೂ 1,352 ಮಂದಿಗೆ ಕೊರೊನಾ ವೈರಸ್ ಸೋಂಕು ತಗಲಿದ್ದು, ಈ ಪೈಕಿ 528 ಮಂದಿ ಈಗಾಗಲೇ ಗುಣಮುಖರಾಗಿದ್ದಾರೆ. ಬಾಕಿ ಉಳಿದಿರುವ 809 ಮಂದಿ ಸೋಂಕಿತರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.

English summary
Uttarakhand: Prayers being offered at Mata Vaishno Devi Gufa Yog Mandir in Dehradun.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X