ಉತ್ತರಾಖಂಡ; ರಿಸೆಪ್ಷನಿಸ್ಟ್ ಹತ್ಯೆ, ಅಂತ್ಯಕ್ರಿಯೆಗೆ ಒಪ್ಪದ ಕುಟುಂಬ
ಡೆಹಾರಾಡೂನ್, ಸೆ. 25; ಉತ್ತರಾಖಂಡದಲ್ಲಿ 19 ವರ್ಷದ ಯುವತಿಯ ಹತ್ಯೆಯ ತನಿಖೆಯು ನಡೆಯುತ್ತಿರುವ ಬೆನ್ನಲ್ಲೇ, ಭಾನುವಾರದಂದು ಹೆದ್ದಾರಿ ತಡೆದು ಬೃಹತ್ ಸಂಖ್ಯೆಯ ಪ್ರತಿಭಟನಾಕಾರರು ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ.
ಕೊಲೆಯಾಗಿರುವ ರಿಸೆಪ್ಷನಿಸ್ಟ್ ದೇಹವನ್ನು ಶವಪರೀಕ್ಷೆಗಾಗಿ ಕೊಂಡೊಯ್ಯಲಾದ ಆಸ್ಪತ್ರೆಯ ಬಳಿ ಬದರಿನಾಥ್-ಋಷಿಕೇಶ ಹೆದ್ದಾರಿಯನ್ನು ತಡೆದು ಭಾರೀ ಪ್ರತಿಭಟನೆ ನಡೆಸಿದ್ದಾರೆ.
ಬಿಜೆಪಿಯ ಉಚ್ಚಾಟಿತ ನಾಯಕ ವಿನೋದ್ ಆರ್ಯ ಅವರ ಪುತ್ರ ಪುಲ್ಕಿತ್ ಆರ್ಯ ಮತ್ತು ಅವರ ಒಡೆತನದ ರೆಸಾರ್ಟ್ನ ಸಿಬ್ಬಂದಿ ರಿಸೆಪ್ಷನಿಸ್ಟ್ ಅಂಕಿತ ಭಂಡಾರಿಯನ್ನು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಯುವತಿಯ ಮೃತದೇಹವನ್ನು ರಾಜ್ಯ ವಿಪತ್ತು ನಿರ್ವಹಣಾ ಪಡೆ ಶನಿವಾರ ಚಿಲ್ಲಾ ಕಾಲುವೆಯಿಂದ ಹೊರತೆಗೆದಿದೆ. ಈ ಘಟನೆ ಭಾರೀ ಆಕ್ರೋಶವನ್ನು ಉಂಟುಮಾಡಿದೆ.
ಭಾನುವಾರ ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಬೃಹತ್ ಪ್ರತಿಭಟನಾಕಾರರು ಸಂತ್ರಸ್ತೆಯ ಶವ ಪರೀಕ್ಷೆ ನಡೆಯುತ್ತಿರುವ ಆಸ್ಪತ್ರೆಯ ಬಳಿಯ ಶವಾಗಾರದ ಮುಂದೆ ಬದರಿನಾಥ್-ಋಷಿಕೇಶ ಹೆದ್ದಾರಿಯನ್ನು ತಡೆದಿದ್ದಾರೆ. ಪೊಲೀಸರ ಪ್ರಕಾರ, ಸ್ಥಳೀಯ ಆಡಳಿತವು ಟ್ರಾಫಿಕ್ ಜಾಮ್ ಅನ್ನು ತೆರವುಗೊಳಿಸಲು ಪ್ರಯತ್ನಿಸುತ್ತಿದೆ.

ತಾತ್ಕಾಲಿಕ ಶವಪರೀಕ್ಷೆ ವರದಿ ಒಪ್ಪದ ಸಂತ್ರಸ್ತೆ ಕುಟುಂಬ
ಸಂತ್ರಸ್ತೆಯ ಕುಟುಂಬದ ಸದಸ್ಯರು ಅಂತಿಮ ಶವಪರೀಕ್ಷೆ ವರದಿಯನ್ನು ನೀಡುವವರೆಗೆ ಆಕೆಯ ದೇಹವನ್ನು ಅಂತ್ಯಸಂಸ್ಕಾರ ಮಾಡಲು ನಿರಾಕರಿಸಿದ್ದಾರೆ. ಆಕೆಯ ತಂದೆ ತಾತ್ಕಾಲಿಕ ಶವಪರೀಕ್ಷೆ ವರದಿಯಿಂದ ತೃಪ್ತರಾಗಿಲ್ಲ ಎಂದು ಹೇಳಿದ್ದಾರೆ.
ತಾತ್ಕಾಲಿಕ ಶವಪರೀಕ್ಷೆ ವರದಿಯಲ್ಲಿ ವಿವರಗಳ ಕೊರತೆಯಿದೆ ಎಂದು ಆಕೆಯ ಸಹೋದರ ಉಲ್ಲೇಖಿಸಿದ್ದಾರೆ. ಭಾನುವಾರ ಬೆಳಗ್ಗೆ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿತ್ತು. ಪ್ರಾಥಮಿಕ ಶವಪರೀಕ್ಷೆ ವರದಿಯಲ್ಲಿ, ಮೊಂಡಾದಾ ವಸ್ತುವಿನಿಂದಾದ ಗಾಯಗಳ ಉಲ್ಲೆಖವಿದೆ. ಇದರ ಜೊತೆಗೆ ಆಕೆಯ ಸಾವು ನೀರಿನಲ್ಲಿ ಮುಳುಗಿ ಆಗಿದೆ ಎಂದು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.

ಪ್ರಕರಣದಲ್ಲಿ ಬಿಜೆಪಿ ನಾಯಕನ ಮಗ ಪ್ರಮುಖ ಆರೋಪಿ
ಮೃತ ಅಂಕಿತಾರನ್ನು ವೇಶ್ಯಾವಾಟಿಕೆಗೆ ಬಲವಂತಪಡಿಸುವ ಪ್ರಯತ್ನಗಳು ನಡೆದಿವೆ ಎಂಬ ಅಂಶವನ್ನು ದೃಢಪಡಿಸುವ ವಾಟ್ಸಾಪ್ ಚಾಟ್ಗಳನ್ನು ಪೊಲೀಸರಿಗೆ ಲಭ್ಯವಾಗಿವೆ.
ಶುಕ್ರವಾರ, ಪ್ರಮುಖ ಆರೋಪಿ ಅಮಾನತುಗೊಂಡ ಬಿಜೆಪಿ ನಾಯಕ ವಿನೋದ್ ಆರ್ಯ ಅವರ ಪುತ್ರ ಪುಲ್ಕಿತ್ ಆರ್ಯ ಮತ್ತು ರಿಷಿಕೇಶದಲ್ಲಿರುವ ಅವರ ಒಡೆತನದ ರೆಸಾರ್ಟ್ನ ಇಬ್ಬರು ಸಿಬ್ಬಂದಿಯಾದ ರೆಸಾರ್ಟ್ ಮ್ಯಾನೇಜರ್ ಸೌರಭ್ ಭಾಸ್ಕರ್ ಮತ್ತು ಸಹಾಯಕ ವ್ಯವಸ್ಥಾಪಕ ಅಂಕಿತ್ ಗುಪ್ತಾ ಅವರನ್ನು ಪ್ರಕರಣದಲ್ಲಿ ಬಂಧಿಸಲಾಗಿದೆ. ಎಲ್ಲರಿಗೂ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸಾಕ್ಷ್ಯ ನಾಶ ಮಾಡಲು ರೆಸಾರ್ಟ್ ನೆಲಸಮ ಎಂದ ಮೃತಳ ಸಹೋದರ
ಮುಖ್ಯಮಂತ್ರಿ ಪುಷ್ಕರ್ ಧಾಮಿ ಅವರು ಕೆಡವಲು ಆದೇಶ ನೀಡಿದ ನಂತರ ಯುವತಿ ಕೆಲಸ ಮಾಡುತ್ತಿದ್ದ ರೆಸಾರ್ಟ್ ಅನ್ನು ನೆಲಸಮಗೊಳಿಸಲಾಯಿತು. ಶನಿವಾರ, ಕೋಪಗೊಂಡ ಸ್ಥಳೀಯರು ರೆಸಾರ್ಟ್ನ ಅವಶೇಷಗಳಿಗೆ ಬೆಂಕಿ ಹಚ್ಚಿದ್ದಾರೆ.
ಆಪಾದಿತ ರೆಸಾರ್ಟ್ನ ಉರುಳಿಸುವಿಕೆಯು "ಸಾಕ್ಷ್ಯವನ್ನು ನಾಶಮಾಡುವ ಪ್ರಯತ್ನವಾಗಿರಬಹುದು" ಎಂದು ಮೃತಳ ಸಹೋದರ ಆರೋಪಿಸಿದ್ದಾರೆ.

ರೆಸಾರ್ಟ್ನ ಎಲ್ಲಾ ಉದ್ಯೋಗಿಗಳ ವಿಚಾರಣೆ ನಡೆಸುತ್ತಿರುವ ಪೊಲಿಸರು
ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶನಿವಾರ ಮೃತಳ ತಂದೆಯೊಂದಿಗೆ ಫೋನ್ ಮೂಲಕ ಮಾತನಾಡಿ ಆರೋಪಿಗಳಿಗೆ ಶಿಕ್ಷೆಯ ಭರವಸೆ ನೀಡಿದ್ದಾರೆ. ಇದಕ್ಕೂ ಮುನ್ನ ಡಿಜಿಪಿ ಅಶೋಕ್ ಕುಮಾರ್ ಅವರೊಂದಿಗೆ ಕರೆ ಮಾಡಿ ಮಾತನಾಡಿದ್ದರು. ಬರ್ಬರ ಹತ್ಯೆಗೆ ಸಂಬಂಧಿಸಿದಂತೆ ಕೈಗೊಳ್ಳಲಾಗುತ್ತಿರುವ ಕ್ರಮದ ಬಗ್ಗೆ ಸಿಎಂ ಧಾಮಿ ಅವರು ರಾಜ್ಯಪಾಲರಿಗೆ ಮಾಹಿತಿ ನೀಡಿದ್ದಾರೆ.
ಉತ್ತರಾಖಂಡ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.
ಇತ್ತ, ವಿಶೇಷ ತನಿಖಾ ತಂಡದ (ಎಸ್ಐಟಿ) ಮುಖ್ಯಸ್ಥರು ಅವರು ಯುವತಿ ಕೆಲಸ ಮಾಡುತ್ತಿದ್ದ "ರೆಸಾರ್ಟ್ನ ಪ್ರತಿಯೊಬ್ಬ ಉದ್ಯೋಗಿ" ಯನ್ನು ಪೊಲೀಸ್ ಠಾಣೆಗೆ ಕರೆದು ವಿಚಾರಣೆ ನಡೆಸುತ್ತಿದ್ದಾರೆ. ರೆಸಾರ್ಟ್ನ ಸಂಪೂರ್ಣ ಹಿನ್ನೆಲೆ ವಿಶ್ಲೇಷಣೆ ನಡೆಸುತ್ತಿದ್ದಾರೆ ಎಂದು ಡಿಐಜಿ ಪಿಆರ್ ದೇವಿ ತಿಳಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications