ಹಿಮಪ್ರವಾಹಕ್ಕೆ ತಪೋವನ್ ಹೈಡ್ರೋಪವರ್ ಯೋಜನೆ ನಾಶ
ಡೆಹ್ರಾಡೂನ್, ಫೆಬ್ರವರಿ 8: ಉತ್ತರಾಖಂಡ್ ರಾಜ್ಯದ ಚಮೋಲಿ ಜಿಲ್ಲೆಯ ಹಿಮಪರ್ವತಗಳಲ್ಲಿ ಭಾನುವಾರ ಉಂಟಾದ ಭಾರಿ ಹಿಮಪಾತ ಹಾಗೂ ನಂತರ ತ್ವರಿತ ಪ್ರವಾಹಕ್ಕೆ ಸಿಲುಕಿ ನಿರ್ಮಾಣ ಹಂತದ ತಪೋವನ್ ಹೈಡ್ರೋಪವರ್ ಯೋಜನೆ ಸಂಪೂರ್ಣ ನಾಶವಾಗಿದೆ ಎಂದು ತಿಳಿದು ಬಂದಿದೆ.
ದೇವ ಭೂಮಿ ಉತ್ತರಾಖಂಡ್ ರಾಜ್ಯದಲ್ಲಿ ಹರಿಯುವ ನದಿಗಳಲ್ಲಿ ನೀರಿನ ಮಟ್ಟ ತ್ವರಿತಗತಿಯಲ್ಲಿ ಏರಿಕೆ ಕಂಡು ಪ್ರವಾಹ ಭೀತಿ ಉಂಟಾಗಿದೆ. ದೌಲಿಗಂಗಾ ನದಿ ನೀರಿನ ಮಟ್ಟದ ಅಪಾಯದ ಮೀರಿ ಹರಿಯುತ್ತಿದ್ದು, ನದಿಪಾತ್ರದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸೇರಿಸಲಾಗಿದೆ.
ಭಾರಿ ಹಿಮಪಾತ, ನದಿಪ್ರವಾಹದಿಂದಈ ನಡುವೆ ಎನ್ ಟಿಪಿಸಿ ನಿರ್ವಹಣೆಯ ನಿರ್ಮಾಣ ಹಂತದಲ್ಲಿದ್ದ ಋಷಿಗಂಗಾ ಹೈಡ್ರೋಪವರ್ ಯೋಜನೆ ಹಾಗೂ ತಪೋವನ್ ಜಲವಿದ್ಯುತ್ ಯೋಜನೆಗಾಗಿ ನಿರ್ಮಿಸಿದ್ದ ಬ್ಯಾರೇಜ್ ಧ್ವಂಸಗೊಂಡಿದೆ. ತಪೋವನ್ ಯೋಜನೆ ಪ್ರದೇಶದ ಸುರಂಗದಲ್ಲಿ ಸಿಲುಕಿದ್ದ 12 ಕಾರ್ಮಿಕರನ್ನು ರಕ್ಷಿಸಲಾಗಿದೆ. ಭಾನುವಾರ 7 ಗಂಟೆ ರಕ್ಷಣಾ ಕಾರ್ಯ ನಡೆಸಲಾಗಿತ್ತು, 14 ಮಂದಿ ಶವ ಪತ್ತೆಯಾಗಿದೆ ಇನ್ನೂ ಅನೇಕ ಮಂದಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ ಎಂದು ಐಟಿಬಿಪಿ ಅಧಿಕಾರಿಗಳು ಹೇಳಿದ್ದಾರೆ.

ತಪೋವನ್ ವಿಷ್ಣುಗಡ್ ಪವರ್ ಘಟಕ ಜಲವಿದ್ಯುತ್ ಯೋಜನೆಯಾಗಿದ್ದು, 520ಮೆಗಾವ್ಯಾಟ್ ಉತ್ಪಾದನೆ ಗುರಿ ಹೊಂದಿತ್ತು. ಚಮೋಲಿ ಜಿಲ್ಲೆಯ ಧೌಲಿಗಂಗಾ ನದಿ ನೀರನ್ನು ಬಳಸಿಕೊಂಡು ವಿದ್ಯುತ್ ಉತ್ಪಾದನೆಗೆ ಎನ್ಟಿಪಿಸಿ ಮುಂದಾಗಿತ್ತು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications