ಕೊರೊನಾ ನಿರ್ಬಂಧದ ನಡುವೆ ಚಾರ್ ಧಾಮ್ ಯಾತ್ರೆಗೆ ಅವಕಾಶ
ಉತ್ತರಾಖಂಡ, ಜೂನ್ 14: ಕೊರೊನಾ ಪ್ರಕರಣಗಳ ಇಳಿಕೆ ಬೆನ್ನಲ್ಲೇ ಉತ್ತರಾಖಂಡದಲ್ಲಿ ಚಾರ್ ಧಾಮ್ ಯಾತ್ರೆಗೆ ಅವಕಾಶ ಕಲ್ಪಿಸಲಾಗಿದೆ. ಜೂನ್ 15ರಿಂದ ಚಮೋಲಿ, ರುದ್ರಪ್ರಯಾಗ ಹಾಗೂ ಉತ್ತರಕಾಶಿಯಲ್ಲಿ ಯಾತ್ರೆಗೆ ಸ್ಥಳೀಯರಿಗೆ ಅವಕಾಶ ಮಾಡಿಕೊಟ್ಟಿರುವುದಾಗಿ ರಾಜ್ಯ ಸರ್ಕಾರ ಸೋಮವಾರ ಘೋಷಣೆ ಮಾಡಿದೆ.
ರುದ್ರಪ್ರಯಾಗ ಜಿಲ್ಲೆಯಲ್ಲಿ ಕೇದಾರನಾಥ ದೇಗುಲ, ಚಮೋಲಿಯಲ್ಲಿ ಬದ್ರಿನಾಥ್ ಹಾಗೂ ಉತ್ತರಕಾಶಿಯಲ್ಲಿನ ಯಮುನೋತ್ರಿ, ಗಂಗೋತ್ರಿ ದೇಗುಲಗಳಲ್ಲಿ ಜೂನ್ 15ರಿಂದ ಭಕ್ತರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ದೇವಸ್ಥಾನಕ್ಕೆ ಬರುವ ಸ್ಥಳೀಯರು ತಮ್ಮ ಕೊರೊನಾ ನೆಗೆಟಿವ್ ವರದಿ ತರುವುದು ಕಡ್ಡಾಯ ಎಂದು ಕ್ಯಾಬಿನೆಟ್ ಸಚಿವ ಹಾಗೂ ಸರ್ಕಾರದ ಆಯುಕ್ತ ಸುಬೋಧ್ ಉನಿಯಾಲ್ ತಿಳಿಸಿದ್ದಾರೆ.
ಜೂನ್ 15ರಿಂದ ಜೂನ್ 22ರವರೆಗೆ ಉತ್ತರಾಖಂಡದಲ್ಲಿ ಕೆಲವು ಸಡಿಲಿಕೆಗಳೊಂದಿಗೆ ಕೊರೊನಾ ಕರ್ಫ್ಯೂ ವಿಸ್ತರಿಸಲಾಗಿದೆ. ಮದುವೆಗೆ ಹಾಗೂ ಅಂತ್ಯಸಂಸ್ಕಾರಕ್ಕೆ ಸೇರಬೇಕಾದ ಜನರ ಸಂಖ್ಯೆಯನ್ನು 20 ರಿಂದ 50ಕ್ಕೆ ಏರಿಸಲಾಗಿದೆ.

ಈಚೆಗಷ್ಟೆ ಪ್ರವಾಸೋದ್ಯಮ ಸಚಿವ ಸತ್ಪಾಲ್ ಮಹಾರಾಜ್, "ಚಾರ್ ಧಾಮ್ ಯಾತ್ರೆಯನ್ನು ಹಂತ ಹಂತವಾಗಿ ತೆರೆಯಲಾಗುತ್ತದೆ. ಮೊದಲು ಸ್ಥಳೀಯರಿಗೆ ಅವಕಾಶ ನೀಡಿ ನಂತರ ಹೊರಗಿನವರಿಗೆ ಅವಕಾಶ ಕಲ್ಪಿಸಲಾಗುತ್ತದೆ," ಎಂದು ಹೇಳಿದ್ದರು.
ಕೊರೊನಾ ಕಾರಣವಾಗಿ ಮೇ 14ರಿಂದ ನಡೆಯಬೇಕಿದ್ದ ಯಾತ್ರೆಗೆ ಏಪ್ರಿಲ್ 29ರಂದು ತಡೆ ನೀಡಲಾಗಿತ್ತು. ಆನ್ಲೈನ್ ಮೂಲಕವೇ ಬದ್ರಿನಾಥ್, ಕೇದಾರನಾಥ, ಯಮುನೋತ್ರಿ ಹಾಗೂ ಗಂಗೋತ್ರಿ ದೇವಾಲಯಗಳ ದರ್ಶನಕ್ಕೆ ಅವಕಾಶ ನೀಡಲಾಗಿತ್ತು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications