ಉಜ್ಬೇಜಿಸ್ತಾನ್ ಮಕ್ಕಳ ಸಾವು ಪ್ರಕರಣ: ನೋಯ್ಡಾ ಕಂಪೆನಿ 3 ಉದ್ಯೋಗಿಗಳ ಬಂಧನ
ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (ಸಿಡಿಎಸ್ಸಿಒ)ನ ಡ್ರಗ್ಸ್ ಇನ್ಸ್ಪೆಕ್ಟರ್ ದೂರಿನ ಮೇರೆಗೆ ನೋಯ್ಡಾದ ಮರಿಯನ್ ಬಯೋಟೆಕ್ನ ಇಬ್ಬರು ನಿರ್ದೇಶಕರು ಸೇರಿದಂತೆ ಐವರು ಅಧಿಕಾರಿಗಳ ವಿರುದ್ಧ ಗುರುವಾರ ತಡರಾತ್ರಿ ಎಫ್ಐಆರ್ ದಾಖಲಿಸಿದೆ.
ಲಕ್ನೋ, ಮಾರ್ಚ್ 3: ಕಳೆದ ವರ್ಷ ಉಜ್ಬೇಕಿಸ್ತಾನ್ನಲ್ಲಿ ಭಾರತದ ಕೆಮ್ಮಿನ ಸಿರಪ್ ಸೇವಿಸಿ 18 ಮಕ್ಕಳು ಸಾವಿಗೆ ಕಾರಣವಾಯಿತು ಎಂದು ಆರೋಪಿಸಲಾದ ನೋಯ್ಡಾ ಮೂಲದ ಫಾರ್ಮಾಸ್ಯುಟಿಕಲ್ ಸಂಸ್ಥೆಯ ಮೂವರು ಉದ್ಯೋಗಿಗಳನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (ಸಿಡಿಎಸ್ಸಿಒ)ನ ಡ್ರಗ್ಸ್ ಇನ್ಸ್ಪೆಕ್ಟರ್ ದೂರಿನ ಮೇರೆಗೆ ನೋಯ್ಡಾದ ಮರಿಯನ್ ಬಯೋಟೆಕ್ನ ಇಬ್ಬರು ನಿರ್ದೇಶಕರು ಸೇರಿದಂತೆ ಐವರು ಅಧಿಕಾರಿಗಳ ವಿರುದ್ಧ ಗುರುವಾರ ತಡರಾತ್ರಿ ಎಫ್ಐಆರ್ ದಾಖಲಿಸಿದ ನಂತರ ಈ ಮೂವರು ವ್ಯಕ್ತಿಗಳ ಬಂಧನ ನಡೆದಿವೆ.

ಕೇಂದ್ರ ಮತ್ತು ಉತ್ತರ ಪ್ರದೇಶ ರಾಜ್ಯ ಔಷಧ ಅಧಿಕಾರಿಗಳು ಮರಿಯನ್ ಬಯೋಟೆಕ್ನ ಔಷಧಗಳ ಮಾದರಿಗಳನ್ನು ಪರಿಶೀಲಿಸಿದ್ದು, ಅವುಗಳಲ್ಲಿ 22 ಕಲಬೆರಕೆ ಮತ್ತು ನಕಲಿ ಎಂದು ದೂರುದಾರ ಡ್ರಗ್ ಇನ್ಸ್ಪೆಕ್ಟರ್ ಹೇಳಿದ್ದಾರೆ.
ಎಫ್ಐಆರ್ನಲ್ಲಿ ಹೆಸರಿಸಲಾದ ಮೂವರನ್ನು ಬಂಧಿಸಲಾಗಿದೆ. ಆದರೆ ಕಂಪನಿಯ ಇಬ್ಬರು ನಿರ್ದೇಶಕರು ತಲೆಮರೆಸಿಕೊಂಡಿದ್ದಾರೆ. ಬಂಧಿತರಲ್ಲಿ ಆಪರೇಷನ್ ಹೆಡ್ ತುಹಿನ್ ಭಟ್ಟಾಚಾರ್ಯ, ಉತ್ಪಾದನಾ ರಸಾಯನಶಾಸ್ತ್ರಜ್ಞ ಅತುಲ್ ರಾವತ್ ಮತ್ತು ವಿಶ್ಲೇಷಣಾತ್ಮಕ ರಸಾಯನಶಾಸ್ತ್ರಜ್ಞ ಮೂಲ್ ಸಿಂಗ್ ಸೇರಿದ್ದಾರೆ ಎಂದು ಹಂತ 3ರ ಪೊಲೀಸ್ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ನೋಯ್ಡಾದ ಸೆಕ್ಟರ್ 67ರಲ್ಲಿ ತನ್ನ ಕಚೇರಿಯನ್ನು ಹೊಂದಿರುವ ಮೇರಿಯನ್ ಬಯೋಟೆಕ್, ಕಳೆದ ವರ್ಷ ಡಿಸೆಂಬರ್ನಲ್ಲಿ ಕೆಮ್ಮು ಸಿರಪ್ ಡಾಕ್ 1 ಗಾಗಿ ತನಿಖೆ ಅಡಿಯಲ್ಲಿ ಬಂದಿತ್ತು. ಉಜ್ಬೇಕಿಸ್ತಾನ್ನಲ್ಲಿ ಈ ಕಂಪೆನಿಯ ಸಿರಪ್ ಅನ್ನು ಸೇವಿಸಿದ 18 ಮಕ್ಕಳು ಸಾವನ್ನಪ್ಪಿದರು ಎಂದು ಶಂಕಿಸಲಾಗಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications