ಮೊದಲು ಜಾಗ ಖಾಲಿ ಮಾಡಿ: ಪಾಕಿಸ್ತಾನಕ್ಕೆ ಎಚ್ಚರಿಕೆ ಕೊಟ್ಟ ಭಾರತ
ಅಮೆರಿಕದ ಪಾಡ್ಕ್ಯಾಸ್ಟರ್ ಲೆಕ್ಸ್ ಫ್ರೀಡ್ಮನ್ ಅವರೊಂದಿಗೆ ಪಾಡ್ಕ್ಯಾಸ್ಟ್ನಲ್ಲಿ ಪಾಕಿಸ್ತಾನದ ಜೊತೆ ಶಾಂತಿ ಸೌಹಾರ್ದತೆ ಕಾಪಾಡಲು ಮಾಡಿದ ಪ್ರಯತ್ನಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಪಾಕಿಸ್ತಾನ ಟೀಕೆ ಮಾಡಿದ್ದು, ಭಾರತ ಇದಕ್ಕೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದೆ. ಶಾಂತಿಯನ್ನು ಮೂಡಿಸುವ ಪ್ರತಿಯೊಂದು ಪ್ರಯತ್ನ ಹಗೆತನ ಮತ್ತು ದ್ರೋಹದಿಂದ ಕೂಡಿತ್ತು ಎನ್ನುವ ಪ್ರಧಾನಿ ಮೋದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಪಾಕಿಸ್ತಾನ ಇದನ್ನು ದಾರಿತಪ್ಪಿಸುವ ಮತ್ತು ಏಕಪಕ್ಷೀಯ ಹೇಳಿಕೆ ಎಂದು ಕರೆದಿದೆ.
ಪಾಕಿಸ್ತಾನದ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಶಾಂತಿ ಮತ್ತು ಭದ್ರತೆಗೆ ಪಾಕಿಸ್ತಾನವೇ ಅತಿದೊಡ್ಡ ತಡೆಯಾಗಿದೆ. ಪಾಕಿಸ್ತಾನ ಅಕ್ರಮವಾಗಿ ಆಕ್ರಮಣ ಮಾಡಿರುವ ಭಾರತದ ಪ್ರದೇಶವನ್ನು ಖಾಲಿ ಮಾಡುವಂತೆ ಎಚ್ಚರಿಕೆ ಕೊಟ್ಟಿದೆ.

ಪಾಕಿಸ್ತಾನ ಮತ್ತು ಪ್ರಧಾನಿ ಮೋದಿ ಅವರ ಪಾಡ್ಕ್ಯಾಸ್ಟ್ನ ಟೀಕೆಗಳನ್ನು ಉಲ್ಲೇಖಿಸದೆ ಮಾತನಾಡಿದ ಜೈಸ್ವಾಲ್, ಭಾರತದ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಪಾಕಿಸ್ತಾನ ಮತ್ತೊಮ್ಮೆ ಕೆಲವು ಹೇಳಿಕೆಗಳನ್ನು ನೀಡಿದೆ ಎನ್ನುವುದು ಗಮನಕ್ಕೆ ಬಂದಿದೆ. ಪಾಕಿಸ್ತಾನ ಗಡಿಯಾಚೆ ಭಯೋತ್ಪಾದನೆಗೆ ಸತತವಾಗಿ ಉತ್ತೇಜನ ಕೊಡುತ್ತಿದೆ ಎನ್ನುವುದು ಜಗತ್ತಿಗೆ ತಿಳಿದ ವಿಚಾರವಾಗಿದೆ. ಇದರಿಂದಲೇ ಈ ಭಾಗದಲ್ಲಿ ಶಾಂತಿ ಮತ್ತು ಭದ್ರತೆಗೆ ಸಮಸ್ಯೆಯಾಗಿದೆ. ಪಾಕಿಸ್ತಾನ ಅಕ್ರಮವಾಗಿ ಆಕ್ರಮಿಸಿರುವ ಭಾರತದ ಭೂಭಾಗವನ್ನು ಮೊದಲು ಖಾಲಿ ಮಾಡಲಿ ಎಂದು ಹೇಳಿದರು.
ಭಾರತಕ್ಕೆ ಭೇಟಿ ನೀಡಿದ ಅಮೆರಿಕದ ರಾಷ್ಟ್ರಿಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಎಎನ್ಐಗೆ ನೀಡಿದ ಸಂದರ್ಶನಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಪ್ರಾಯೋಜಿತ ದಾಳಿ ಬಗ್ಗೆ ಮಾತನಾಡಿ ಇಸ್ಲಾಮಿಕ್ ಭಯೋತ್ಪಾದನೆ ಎಂದು ಉಲ್ಲೇಖಿಸಿದ್ದು, ಜೈಸ್ವಾಲ್ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಇಸ್ಲಾಮಿ ಭಯೋತ್ಪಾದನೆ ಭಾರತ ಮತ್ತು ಅಮೆರಿಕ ಹಾಗೂ ಮಧ್ಯಪ್ರಾಚ್ಯದ ಹಲವಾರು ದೇಶಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ತುಳಸಿ ಗಬ್ಬಾರ್ಡ್ ಹೇಳಿದ್ದರು.
ಪ್ರಧಾನಿ ಮೋದಿ ಹೇಳಿದ್ದೇನು?
ಸೋಮವಾರ ಪ್ರಧಾನಿ ನರೇಂದ್ರ ಮೋದಿ ತುಳಸಿ ಗಬ್ಬಾರ್ಡ್ ಅವರನ್ನು ಭೇಟಿ ಮಾಡಿದ್ದರು. ಭಾರತ ಮತ್ತು ಅಮೆರಿಕ ಭಯೋತ್ಪಾದನೆಯನ್ನು ಎದುರಿಸಲು ಮತ್ತು ಕಡಲ ಮತ್ತು ಸೈಬರ್ ಭದ್ರತಾ ಸಹಕಾರವನ್ನು ಹೆಚ್ಚಿಸಲು ಬದ್ದವಾಗಿವೆ ಎಂದು ಹೇಳಿದರು.
ಮೋದಿ ಹೇಳಿಕೆಗೆ ಪಾಕಿಸ್ತಾನದ ವಿದೇಶಾಂಗ ಕಚೇರಿ ಸೋಮವಾರ ಪ್ರತಿಕ್ರಿಯೆ ನೀಡಿದ್ದು, ಭಾರತದ ಶಾಂತಿ ಪ್ರಯತ್ನಗಳನ್ನು ಪಾಕಿಸ್ತಾನ ವಿಫಲಗೊಳಿಸುತ್ತಿದೆ ಎಂಬ ಪ್ರಧಾನಿ ಮೋದಿ ಅವರ ಹೇಳಿಕೆಗಳು ದಾರಿತಪ್ಪಿಸುವ ಮತ್ತು ಏಕಪಕ್ಷೀಯವಾಗಿದೆ ಎಂದಿದೆ. ಭಾರತವು ವಿದೇಶಿ ಪ್ರದೇಶಗಳಲ್ಲಿ ಗುರಿಯಾಗಿಟ್ಟುಕೊಂಡ ಹತ್ಯೆಗಳು, ವಿಧ್ವಂಸಕ ಕೃತ್ಯಗಳು ಮತ್ತು ಭಯೋತ್ಪಾದನೆಯನ್ನು ಆಯೋಜಿಸುತ್ತಿದೆ ಎಂದು ಅದು ಆರೋಪಿಸಿದೆ.
-
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ












Click it and Unblock the Notifications