ಮರಕ್ಕೆ ಕಟ್ಟಿ ಹಾಕಿ ವಡೋದರ ಬಿಜೆಪಿ ಕಾರ್ಪೊರೇಟರ್ ಮೇಲೆ ಹಲ್ಲೆ
ವಡೋದರ, ಅಕ್ಟೋಬರ್ 4: ವಡೋದರ ನಗರ ಪಾಲಿಕೆಯ ಬಿಜೆಪಿ ಕಾರ್ಪೊರೇಟರ್ ಹಶ್ಮುಖ್ ಪಟೇಲ್ ರನ್ನು ಮರಕ್ಕೆ ಕಟ್ಟಿ ಹಾಕಿ ಅವರದ್ದೇ ವಾರ್ಡ್ ನಿವಾಸಿಗಳು ಥಳಿಸಿದ್ದಾರೆ.
ನಗರ ಪಾಲಿಕೆ ಸ್ಲಂನಲ್ಲಿದ್ದ ಮನೆಗಳನ್ನು ಕೆಡವಿ ಬೇರೆ ಮನೆಗಳನ್ನು ಅಲ್ಲಿನ ನಿವಾಸಿಗಳಿಗೆ ವಿತರಿಸಿತ್ತು. ಆದರೆ ಇದರ ಬಗ್ಗೆ ಅಸಮಧಾನಗೊಂಡಿರುವ ನಾಗರಿಕರು ಕಾರ್ಪೊರೇಟರ್ ರನ್ನೇ ಮರಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ.

ವಡೋದರದ ಬಾಪೊಡ್ ಕೆರೆ ಸಮೀಪ ಇರುವ ನವಿ ನಗ್ರಿ ನಿವಾಸಿಗಳನ್ನು ಕಳೆದ ಮೇನಲ್ಲಿ ಸ್ಥಳಾಂತರ ಮಾಡಲಾಗಿತ್ತು. ಸುಪ್ರಿಂ ಕೋರ್ಟ್ ಆದೇಶದ ಮೇಲೆ ಈ ಕ್ರಮ ಕೈಗೊಳ್ಳಲಾಗಿತ್ತು. ಸ್ಥಳಾಂತರ ಮಾಡಿದ ನಿವಾಸಿಗಳಿಗೆ 2 ಕಿಲೋಮೀಟರ್ ದೂರದಲ್ಲಿ ಪುನರ್ವಸತಿ ಕಲ್ಪಿಸಲಾಗಿತ್ತು.
"ಎಂದಿನಂತರ ನಾನು ವಾರ್ಡ್ ನಂಬರ್ 5ರಲ್ಲಿ ಸುತ್ತಾಡಲು ಹೋಗಿದ್ದಾಗ ನಿವಾಸಿಗಳು ಕೆರೆ ಪಕ್ಕ ಮತ್ತೆ ಮನೆ ಕಟ್ಟಿಕೊಳ್ಳುತ್ತಿರುವುದು ಕಾಣಿಸಿತು," ಎಂದು ಪಟೇಲ್ ಹೇಳಿದ್ದಾರೆ. ಈ ವೇಳೆ ಜಗಳ ನಡೆದು ನಿವಾಸಿಗಳನ್ನು ಪಟೇಲ್ ರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ.

ಕಾರ್ಪೊರೇಟರ್ ಗೆ ಕಾಲು ಮತ್ತು ಕೈಗೆ ಗಾಯವಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಪಟೇಲ್ ಮೇಲೆ ಹಲ್ಲೆ ನಡೆಸಿರುವ ವಿಡಿಯೋಗಳು ಎಲ್ಲೆಡೆ ವೈರಲ್ ಆಗಿವೆ.
ಹಲ್ಲೆ ಮಾಡಿರುವುದನ್ನು ನಾಗರಿಕರು ತಳ್ಳಿ ಹಾಕಿದ್ದಾರೆ. ಆದರೆ, ಘಟನೆಗೆ ಸಂಬಂಧಿಸಿದಂತೆ ಪೊಲೀಸರು 34 ಮಹಿಳೆಯರು ಸೇರಿ 64 ನಿವಾಸಿಗಳನ್ನು ಬಂಧಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ವಡೋದರ ನಗರ ಪಾಲಿಕೆ ಕಮಿಷನರ್ ವಿನೋದ್ ರಾವ್, ಈ ಘಟನೆ ಹಿಂದೆ ಏನೋ ಪ್ರಚೋದನೆ ಇರುವಂತೆ ಕಾಣಿಸುತ್ತಿದೆ. ಪಾಲಿಕೆ ಕಡೆಯಿಂದ 118 ಕುಟುಂಬಗಳಿಕೆ ಪಕ್ಕಾ ಮನೆಗಳನ್ನು ಹಸ್ತಾಂತರಿಸಲಾಗಿದೆ ಎಂದು ಹೇಳಿದ್ದಾರೆ.
ಆದರೆ ಹೊಸ ಮನೆಗಳಲ್ಲಿ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications