ಮರಕ್ಕೆ ಕಟ್ಟಿ ಹಾಕಿ ವಡೋದರ ಬಿಜೆಪಿ ಕಾರ್ಪೊರೇಟರ್ ಮೇಲೆ ಹಲ್ಲೆ
ವಡೋದರ, ಅಕ್ಟೋಬರ್ 4: ವಡೋದರ ನಗರ ಪಾಲಿಕೆಯ ಬಿಜೆಪಿ ಕಾರ್ಪೊರೇಟರ್ ಹಶ್ಮುಖ್ ಪಟೇಲ್ ರನ್ನು ಮರಕ್ಕೆ ಕಟ್ಟಿ ಹಾಕಿ ಅವರದ್ದೇ ವಾರ್ಡ್ ನಿವಾಸಿಗಳು ಥಳಿಸಿದ್ದಾರೆ.
ನಗರ ಪಾಲಿಕೆ ಸ್ಲಂನಲ್ಲಿದ್ದ ಮನೆಗಳನ್ನು ಕೆಡವಿ ಬೇರೆ ಮನೆಗಳನ್ನು ಅಲ್ಲಿನ ನಿವಾಸಿಗಳಿಗೆ ವಿತರಿಸಿತ್ತು. ಆದರೆ ಇದರ ಬಗ್ಗೆ ಅಸಮಧಾನಗೊಂಡಿರುವ ನಾಗರಿಕರು ಕಾರ್ಪೊರೇಟರ್ ರನ್ನೇ ಮರಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ.

ವಡೋದರದ ಬಾಪೊಡ್ ಕೆರೆ ಸಮೀಪ ಇರುವ ನವಿ ನಗ್ರಿ ನಿವಾಸಿಗಳನ್ನು ಕಳೆದ ಮೇನಲ್ಲಿ ಸ್ಥಳಾಂತರ ಮಾಡಲಾಗಿತ್ತು. ಸುಪ್ರಿಂ ಕೋರ್ಟ್ ಆದೇಶದ ಮೇಲೆ ಈ ಕ್ರಮ ಕೈಗೊಳ್ಳಲಾಗಿತ್ತು. ಸ್ಥಳಾಂತರ ಮಾಡಿದ ನಿವಾಸಿಗಳಿಗೆ 2 ಕಿಲೋಮೀಟರ್ ದೂರದಲ್ಲಿ ಪುನರ್ವಸತಿ ಕಲ್ಪಿಸಲಾಗಿತ್ತು.
"ಎಂದಿನಂತರ ನಾನು ವಾರ್ಡ್ ನಂಬರ್ 5ರಲ್ಲಿ ಸುತ್ತಾಡಲು ಹೋಗಿದ್ದಾಗ ನಿವಾಸಿಗಳು ಕೆರೆ ಪಕ್ಕ ಮತ್ತೆ ಮನೆ ಕಟ್ಟಿಕೊಳ್ಳುತ್ತಿರುವುದು ಕಾಣಿಸಿತು," ಎಂದು ಪಟೇಲ್ ಹೇಳಿದ್ದಾರೆ. ಈ ವೇಳೆ ಜಗಳ ನಡೆದು ನಿವಾಸಿಗಳನ್ನು ಪಟೇಲ್ ರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ.

ಕಾರ್ಪೊರೇಟರ್ ಗೆ ಕಾಲು ಮತ್ತು ಕೈಗೆ ಗಾಯವಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಪಟೇಲ್ ಮೇಲೆ ಹಲ್ಲೆ ನಡೆಸಿರುವ ವಿಡಿಯೋಗಳು ಎಲ್ಲೆಡೆ ವೈರಲ್ ಆಗಿವೆ.
ಹಲ್ಲೆ ಮಾಡಿರುವುದನ್ನು ನಾಗರಿಕರು ತಳ್ಳಿ ಹಾಕಿದ್ದಾರೆ. ಆದರೆ, ಘಟನೆಗೆ ಸಂಬಂಧಿಸಿದಂತೆ ಪೊಲೀಸರು 34 ಮಹಿಳೆಯರು ಸೇರಿ 64 ನಿವಾಸಿಗಳನ್ನು ಬಂಧಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ವಡೋದರ ನಗರ ಪಾಲಿಕೆ ಕಮಿಷನರ್ ವಿನೋದ್ ರಾವ್, ಈ ಘಟನೆ ಹಿಂದೆ ಏನೋ ಪ್ರಚೋದನೆ ಇರುವಂತೆ ಕಾಣಿಸುತ್ತಿದೆ. ಪಾಲಿಕೆ ಕಡೆಯಿಂದ 118 ಕುಟುಂಬಗಳಿಕೆ ಪಕ್ಕಾ ಮನೆಗಳನ್ನು ಹಸ್ತಾಂತರಿಸಲಾಗಿದೆ ಎಂದು ಹೇಳಿದ್ದಾರೆ.
ಆದರೆ ಹೊಸ ಮನೆಗಳಲ್ಲಿ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications