ಬಿಸಿಲಿನ ಶಾಖಕ್ಕೆ ಬೇಸತ್ತು ಎಸಿ ಹೆಲ್ಮೆಟ್ ಮೊರೆಹೋದ ಟ್ರಾಫಿಕ್ ಪೊಲೀಸರು-ಎಲ್ಲಿ?
ದೇಶದ ಕೆಲವೆಡೆ ಮಾತ್ರ ಮಳೆರಾಯ ತಂಪೆರೆಯುತ್ತಿದ್ದು, ಬಹುತೇಕ ಭಾಗಗಳಲ್ಲಿ ತಾಪಮಾನದ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಇನ್ನು ಸೂರ್ಯನ ಶಾಖದ ಹೊಡೆತಕ್ಕೆ ಜನರು ಬೆಂಡಾಗಿದ್ದಾರೆ. ಅಲ್ಲದ ಮನೆಯಿಂದ ಹೊರಗಡೆ ಬರಲು ಭಯ ಪಡುತ್ತಿದ್ದಾರೆ. ಮತ್ತೊಂದೆಡೆ ಟ್ರಾಫಿಕ್ ಪೊಲೀಸರಂತೂ ಯಾವಾಗಲೂ ಬಿಸಿಲಿನಲ್ಲೇ ಇರಬೇಕಾಗುತ್ತದೆ. ಈ ಸಮಸ್ಯೆಯಿಂದ ತಪ್ಪಿಸಿಕೊಳ್ಳಲು ದೇಶದ ಈ ಭಾಗದಲ್ಲಿ ಪೊಲೀಸರು ಹೊಸ ಮಾರ್ಗವನ್ನು ಅನುಸರಿಸಿದ್ದಾರೆ. ಹಾಗಾದರೆ ಆ ಮಾರ್ಗ ಯಾವುದು ಎಂದು ಇಲ್ಲಿ ತಿಳಿಯಿರಿ.
ಎಸಿ ಹೆಲ್ಮೆಟ್ ವಿಶೇಷತೆ: ಬೇಸಿಗೆಯ ತಾಪದಿಂದ ತಪ್ಪಿಸಿಕೊಳ್ಳಲು ವಡೋದರಾ ಸಂಚಾರ ಪೊಲೀಸರು ಸೂಕ್ತ ಪರಿಹಾರವನ್ನು ಕಂಡುಕೊಂಡಿದ್ದಾರೆ. ಇಲ್ಲಿ ಪೊಲೀಸ್ ಇಲಾಖೆಯಿಂದ ಇದೀಗ ತನ್ನ ಸಿಬ್ಬಂದಿಗೆ ಎಸಿಯುಳ್ಳ ವಿಶೇಷ ಹೆಲ್ಮೆಟ್ಗಳನ್ನು ಕೊಡಲಾಗುತ್ತಿದೆ. ಈ ಹೊಸ AC ಹೆಲ್ಮೆಟ್ಗಳನ್ನು 40-42 ಡಿಗ್ರಿ ಸೆಲ್ಸಿಯಸ್ನ ಗರಿಷ್ಠ ತಾಪಮಾನದ ಸಮಯದಲ್ಲೂ ತಮ್ಮನ್ನು ತಂಪಾಗಿಸುವಂತೆ ವಿನ್ಯಾಸಗೊಳಿಸಲಾಗಿದೆ.

ಹೇಗೆಲ್ಲ ಪ್ರಯೋಜನಾ ಆಗಲಿದೆ?: ಈ ಹೆಲ್ಮೆಟ್ಗಳನ್ನು ವಿವಿಧ ವಿಶೇಷ ವೈಶಿಷ್ಟ್ಯಗಳೊಂದಿಗೆ ತಯಾರು ಮಾಡಲಾಗುದೆ. ಪೊಲೀಸರು ಸೂರ್ಯನ ಶಾಖದಿಂದ ತಮ್ಮ ಕಣ್ಣು, ತಲೆಯನ್ನು ರಕ್ಷಿಸಿಕೊಳ್ಳಲಿ ಇದು ಸಹಕಾರಿಯಾಗಲಿದೆ. ಇನ್ನು ಇದು ಚಾರ್ಜಿಂಗ್ ಪಾಯಿಂಟ್ ಹೊಂದಿದ್ದು, ಪೂರ್ಣ ಚಾರ್ಜ್ ಇದ್ದರೆ, ಈ ಹೆಲ್ಮೆಟ್ಗಳು ಎಂಟು ಗಂಟೆಗಳವರೆಗೆ ನಮ್ಮನ್ನು ತಂಪಾಗಿರುವಂತೆ ಮಾಡುತ್ತವೆ.
ಈಗಾಗಲೇ ಹಲವೆಡೆ ಬಿಸಿಲಿನ ಝಳಕ್ಕೆ ಸುಸ್ತಾಗಿ ಪೊಲೀಸ್ ಅಧಿಕಾರಿಗಳು ರಸ್ತೆಯಲ್ಲೇ ಮೂರ್ಛೆ ಹೋದ ಘಟನೆಗಳು ನಡೆದಿವೆ. ಆದ್ದರಿಂದ ಸುರಕ್ಷತೆ ದೃಷ್ಟಿಯಿಂದ ಎಸಿ ಹೆಲ್ಮೆಟ್ಗಳನ್ನು ತಯಾರು ಮಾಡಿ, ಸಂಚಾರ ಪೊಲೀಸ್ ಸಿಬ್ಬಂದಿಗೆ ನೀಡಲಾಗುತ್ತಿದೆ. ಇನ್ನು ಇದಕ್ಕೆ ಉತ್ತಮ ಪ್ರತಿಕ್ರಿಯೆಗಳು ಕೂಡ ವ್ಯಕ್ತವಾಗಿವೆ.
That's a very good initiative and traffic department from other states should also follow this noble initiative. @DGPOdisha should also look into it.
— kamal kumar 🇮🇳 (@kamalkumarBJD) April 18, 2024
ಇನ್ನು ಟ್ರಾಫಿಕ್ ಪೊಲೀಸರು ಎಸಿ ಹೆಲ್ಮೆಟ್ ಹಾಕಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದು, ಇದಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆಗಳು ಬರುತ್ತಿವೆ. ಹಾಗಾದರೆ ಈ ವಿಡಿಯೋಗೆ ಯಾವ ರೀತಿ ಪ್ರತಿಕ್ರಿಯೆಗಳನ್ನು ಬಂದಿವೆ ಎಂದು ಇಲ್ಲಿ ನೀಡಲಾಗಿದೆ ಗಮನಿಸಿ.
A much needed invention to negate this extreme heat.
— The Brain Dentist (@TheBrainDentist) April 18, 2024
-
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ












Click it and Unblock the Notifications