ದಾವೂದ್ ಬಂಟನಿಗೆ ತಿಮ್ಮಪ್ಪನ ಸನ್ನಿಧಿಯಲ್ಲಿ ಆತಿಥ್ಯ?
ತಿರುಪತಿ, ಜ.17- ವೈಕುಂಠ ಏಕಾದಶಿ ಅಂದವಾಗಿ ತಿಮ್ಮಪ್ಪನ ಸನ್ನಿಧಿಯಲ್ಲಿ ವಿಶೇಷ ಅಧ್ಯಯನೋತ್ಸವ ನಡೆಯುತ್ತಿರುವ ಸಂದರ್ಭದಲ್ಲಿ ಅಘಾತತಕಾರಿ ಪ್ರಸಂಗವೊಂದು ನಡೆದಿದೆ.
ಭಾರತಕ್ಕೆ ಮೋಸ್ಟ್ ವಾಂಟೆಡ್ ಆಗಿ ಬೇಕಾಗಿರುವ ದಾವೂದ್ ಇಬ್ರಾಹಿಂನ ಬಲಗೈ ಬಂಟ ಛೋಟಾ ಶಕೀಲ್ ಗ್ಯಾಂಗಿನ ಸದಸ್ಯನೊಬ್ಬನಿಗೆ ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಯು ಮಣೆ ಹಾಕಿ, ವಿಶೇಷ ಆತಿಥ್ಯ ನೀಡಿದೆ.

ಸಚಿವ ಸಚಿನ್ ಅಹಿರ್ ಜತೆ ಅಜಯ್ ನವಂದರ್ ವಿಐಪಿ ದರ್ಶನ ಪಡೆದಿದ್ದು ನಿಜ ಎಂದು TTD ಅಧ್ಯಕ್ಷ ಕನುಮೂರಿ ಬಾಪಿರಾಜು ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ. ಆದರೆ ಅವನಿಗೆ ಭೂಗತ ಪಾತಕಿಗಳ ಜತೆ ಸಂಪರ್ಕವಿದೆ ಎಂಬುದು ತನಗೆ ತಿಳಿದಿರಲಿಲ್ಲ. ವಿಐಪಿಗಳ ಜತೆ ಬಂದಿದ್ದಕ್ಕೆ ಶಿಷ್ಟಾಚಾರದ ಪ್ರಕಾರ ಅವನಿಗೂ ವಿಶೇಷ ಅತಿಥ್ಯ ನೀಡಲಾಗಿದೆ ಎಂದು ಹೇಳಿದ್ದಾರೆ.
ಈ ಮಧ್ಯೆ ಅಜಯ್ ನವಂದರ್ ಪ್ರತಿಕ್ರಿಯೆ ನೀಡಿದ್ದು, ಮಾಫಿಯಾ ದೊರೆ ದಾವೂದ್ ಇಬ್ರಾಹಿಂ ಜತೆ ತನಗೆ ಯಾವುದೇ ಸಂಬಂಧವಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಜತೆಗೆ, ಈ ಸಂಬಂಧ ಅನಗತ್ಯ ಆರೋಪ ಮಾಡುತ್ತಿರುವ ತೆಲುಗು ದೇಶಂ ಶಾಸಕ ಗಾಲಿ ಮುದ್ದು ಕೃಷ್ಣ ನಾಯ್ಡುಗೆ ಕಾನೂನು ನೋಡಿಸ್ ಜಾರಿ ಮಾಡುವುದಾಗಿ ಎಚ್ಚರಿಸಿದ್ದಾರೆ.
ಅಜಯ್ ನವಂದರ್ ಉದ್ಯಮಿಯಾಗಿದ್ದು, NCP ವತಿಯಿಂದ ವಿಧಾಸನಭೆ ಚುನಾವಣೆಗೆ ಸ್ಪರ್ಧಿಸಿ, ಸೋತಿದ್ದರು. ಮುಂಬೈ ಪೊಲೀಸರು ಆತನನ್ನು ಕೆಲವು ಪ್ರಕರಣಗಳ ಸಂಬಂಧ ಠಾಣೆಗೆ ಕರೆದು ವಿಚಾರಣೆ ನಡೆಸಿರುವ ಪ್ರಸಂಗಗಳೂ ಇವೆ. ( ತಿರುಪತಿ ವೆಂಕಟೇಶ್ವರ ಸನ್ನಿಧಿಯಲ್ಲಿ ವೈಕುಂಠ ಏಕಾದಶಿ )
'ನನ್ನ ವಿರುದ್ಧ ಒಂದೇ ಒಂದು ಅಪರಾಧ ಪ್ರಕರಣವೂ ದಾಖಲಾಗಿಲ್ಲ. ದಾವೂದ್ ಜತೆ ಯಾವುದೇ ಸಂಪರ್ಕವಿಲ್ಲ. ನಾನು 2 ಬಾರಿ ತಿಮ್ಮಪ್ಪನ ದರ್ಶನ ಪಡೆದಿದ್ದು ನಿಜ. ವೈಕುಂಠ ಏಕಾದಶಿ ದಿನದಂದು ನಾನು ನೇರವಾಗಿ ಬೆಂಗಳೂರಿನಿಂದ ಆಗಮಿಸಿ ಮಹಾರಾಷ್ಟ್ರದ ಸಚಿವರ ಜತೆ ಬೆಳಗ್ಗೆ 4 ಗಂಟೆಗೇ ದೇವರ ದರ್ಶನ ಪಡೆದೆ. ಆ ನಂತರ 2 ದಿನಗಳ ನಂತರ ಉದ್ಧವ್ ಠಾಕ್ರೆ ಜತೆಗೂಡಿ ದರ್ಶನ ಪಡೆದೆ. ಅದು ಬಿಟ್ಟರೆ ನನಗೆ ಅಂತ ವಿಶೇಷ ಏರ್ಪಾಡು ಮಾಡಿರಲಿಲ್ಲ' ಎಂದು ಅಜಯ್ ನವಂದರ್ ಹೇಳಿದ್ದಾರೆ.
ಈ ಮಧ್ಯೆ, ಅಜಯ್ ನವಂದರ್ ಮೂರು ದಿನಗಳ ಕಾಲ ತಿರುಮಲದಲ್ಲಿ ವಿಶೇಷ ಆತಿಥ್ಯ ಸ್ವೀಕರಿಸಿರುವ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಶಾಸಕ ಗಾಲಿ ಮುದ್ದು ಕೃಷ್ಣ ನಾಯ್ಡು ಪುನರಚ್ಚರಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications