Vanda Bharat Express: ಬೆಂಗಳೂರು-ಮಧುರೈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ಯಾವಾಗ?-ಸಂಪೂರ್ಣ ಮಾಹಿತಿ ತಿಳಿಯಿರಿ
ಮಧುರೈ, ಮಾರ್ಚ್, 06: ಐಸ್ಪೀಡ್ ರೈಲು ವಂದೇ ಭಾರತ್ ದೇಶಾದ್ಯಂತ ಸಂಚರಿಸುತ್ತದೆ. ಅಲ್ಲದೆ ಇನ್ನೂ ಹೊಸ ಹೊಸ ಮಾರ್ಗಗಳಲ್ಲೂ ಈ ರೈಲು ಬಿಡಲು ಇಲಾಖೆ ಮುಂದಾಗಿದೆ. ಹಾಗೆಯೇ ತಮಿಳುನಾರಿನ ಮುಧುರೈನಿಂದ ಹೈಟಿ ಹಬ್ ಅಂತಲೇ ಹೆಸರುವಾಸಿಯಾಗಿರುವ ಬೆಂಗಳೂರಿಗೆ ರೈಲು ಬಿಡಲು ನಿರ್ಧರಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಯಾವಾಗ ಈ ಸೇವೆ ಹಾಗೂ ಟಿಕೆಟ್ ದರ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಮಧುರೈ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಶೀಘ್ರದಲ್ಲೇ ಪರಿಚಯಿಸುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಮುಂದಿನ ವಾರ ಈ ರೈಲು ಸೇವೆಯನ್ನು ಉದ್ಘಾಟಿಸುವ ಸಾಧ್ಯತೆಯಿದೆ. ಮಧುರೈ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಹೊಸ ಆರೆಂಜ್ ಕಲರ್ನಲ್ಲಿದೆ ಎಂದು ಹೇಳಲಾಗುತ್ತದೆ.

ಮಧುರೈ-ಬೆಂಗಳೂರು ಪ್ರಯಾಣದ ಸಮಯ 6 ಗಂಟೆಗಳಿಗೆ ಕಡಿತ: ಇತರ ರೈಲುಗಳು ಸಾಮಾನ್ಯವಾಗಿ 435 ಕಿಲೋ ಮೀಟರ್ ಇರುವ ಮಧುರೈ-ಬೆಂಗಳೂರು ದೂರವನ್ನು ಕ್ರಮಿಸಲು 7 ಗಂಟೆಗಳನ್ನು ತೆಗೆದುಕೊಂಡರೆ, ವಂದೇ ಭಾರತ್ 6 ಅಥವಾ 5:30 ಗಂಟೆಗಳಲ್ಲಿ ಕ್ರಮಿಸುತ್ತದೆ. ಮಧುರೈನಿಂದ ಬೆಂಗಳೂರಿಗೆ ಚಲಿಸುವ ಈ ವಂದೇ ಭಾರತ್ ರೈಲು 16 ಕೋಚ್ಗಳು ಅಥವಾ 8 ಕೋಚ್ಗಳ ಆರಂಭಿಕ ಯೋಜನೆಯನ್ನು ಹೊಂದಿದೆ.
ಅಲ್ಲದೆ, ಇದು ಹಗಲಿನ ರೈಲು ಆಗಿರುವುದರಿಂದ ಆರಂಭದಲ್ಲಿ ಎಂಟು ಬೋಗಿಗಳ ರೈಲಿನಂತೆ ಓಡುವ ನಿರೀಕ್ಷೆಯಿದೆ ಮತ್ತು ನಂತರ ಅಗತ್ಯಕ್ಕೆ ಅನುಗುಣವಾಗಿ ಕೋಚ್ಗಳನ್ನು ಸಂಪರ್ಕಿಸಲಾಗುತ್ತದೆ. ಇದು ವಂದೇ ಭಾರತ್ ರೈಲುಗಳಲ್ಲಿ ಎಂದಿನಂತೆ ಎಕ್ಸಿಕ್ಯೂಟಿವ್ ಕ್ಲಾಸ್ ಮತ್ತು ಚೇರ್ ಕ್ಲಾಸ್ ಎಂಬ ಎರಡು ಕೋಚ್ಗಳನ್ನು ಹೊಂದಿರುತ್ತದೆ.
ಎಲ್ಲೆಲ್ಲಿ ನಿಲುಗಡೆ?: ಮಧುರೈ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ದಿಂಡುಗಲ್, ಕರೂರ್, ಸೇಲಂ, ಧರ್ಮಪುರಿ ಮತ್ತು ಹೊಸೂರಿನಲ್ಲಿ ನಿಲುಗಡೆ ಆಗಲಿದೆ.
ಟಿಕೆಟ್ ದರ ಎಷ್ಟು?: ಈ ವಂದೇ ಭಾರತ್ ರೈಲಿನ ಟಿಕೆಟ್ ದರವನ್ನು ಇನ್ನೂ ಘೋಷಿಸಲಾಗಿಲ್ಲ. ಆದಾಗ್ಯೂ, ಸಾಮಾನ್ಯವಾಗಿ 400 ಕಿಲೋ ಮೀಟರ್ಗಿಂತ ಹೆಚ್ಚು ಓಡುವ ವಂದೇ ಭಾರತ್ ರೈಲುಗಳಲ್ಲಿ, ಎಸಿ ಸೀಟ್ ಕಾರ್ಗಳಿಗೆ 1,300 ರೂಪಾಯಿ ಮತ್ತು ಎಕ್ಸಿಕ್ಯೂಟಿವ್ ಸೀಟ್ ಕಾರ್ಗಳಿಗೆ 2,300 ರೂಪಾಯಿ ದರವನ್ನು ನಿಗದಿಪಡಿಸಲಾಗಿದೆ. ತಮಿಳುನಾಡಿನಲ್ಲಿ ಎರಡು ವಂದೇ ಭಾರತ್ ರೈಲುಗಳು ಚೆನ್ನೈನಿಂದ ಕೊಯಮತ್ತೂರು ಮತ್ತು ತಿರುನಲ್ವೇಲಿಯಿಂದ ಚೆನ್ನೈಗೆ ದಕ್ಷಿಣ ರೈಲ್ವೇ ಮೂಲಕ ಸಂಚರಿಸುತ್ತಿವೆ. ಅಲ್ಲದೆ ವಿಜಯವಾಡದಿಂದ ತಿರುಪತಿ ಮೂಲಕ ಚೆನ್ನೈಗೆ ವಂದೇ ಭಾರತ್ ರೈಲು ಓಡುತ್ತಿದೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ











Click it and Unblock the Notifications