Get Updates
Get notified of breaking news, exclusive insights, and must-see stories!

Vande Bharat Express : ನಾಲ್ಕನೇ ಬಾರಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಜಾನುವಾರು ಡಿಕ್ಕಿ

ಮುಂಬೈ, ಡಿಸೆಂಬರ್‌ 2: ಗಾಂಧಿನಗರ- ಮುಂಬೈ ವಂದೇ ಭಾರತ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಗುರುವಾರ ಸಂಜೆ ಗುಜರಾತ್‌ನ ಉದ್ವಾಡ ಮತ್ತು ವಾಪಿ ನಿಲ್ದಾಣಗಳ ನಡುವೆ ದನಕ್ಕೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯಿಂದಾಗಿ ರೈಲಿನ ಮುಂಭಾಗದ ಪ್ಯಾನೆಲ್‌ಗೆ ಸಣ್ಣದೊಂದು ಗಾಯವಾಗಿದೆ. ಎರಡು ತಿಂಗಳ ಹಿಂದೆ ಕಾರ್ಯಾಚರಣೆ ಆರಂಭಿಸಿದ ನಂತರ ಈ ಮಾರ್ಗದಲ್ಲಿ ಸೆಮಿ-ಹೈ ಸ್ಪೀಡ್ ರೈಲು ವಂದೇ ಭಾರತ್‌ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ನಾಲ್ಕನೇ ಘಟನೆಯಾಗಿದೆ.

ಪಶ್ಚಿಮ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸುಮಿತ್ ಠಾಕೂರ್ ಮಾತನಾಡಿ, ಉದ್ವಾಡ ಮತ್ತು ವಾಪಿ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 87 ರ ಬಳಿ ಸಂಜೆ 6.23 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಮುಂಭಾಗದ ಭಾಗದಲ್ಲಿ ಸಣ್ಣ ಡೆಂಟ್ ಆಗಿದೆ. ಡೆಂಟ್ ಅನ್ನು ಇಂದು ರಾತ್ರಿ ಸರಿಪಡಿಸಲಾಯಿತು. ಸ್ವಲ್ಪ ಸಮಯದ ನಂತರ, ರೈಲು ಸಂಜೆ 6.35 ಕ್ಕೆ ಪ್ರಯಾಣವನ್ನು ಪುನರಾರಂಭಿಸಿತು ಎಂದು ಅವರು ಹೇಳಿದರು.

Vande Bharat Express collided with cattle for the fourth time

ಕಳೆದ ನವೆಂಬರ್‌ 8ರಂದು ಗುಜರಾತ್‌ನ ಆನಂದ್ ಬಳಿ ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಹರಿದು 54 ವರ್ಷದ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಅಹಮದಾಬಾದ್‌ನ ನಿವಾಸಿ ಬೀಟ್ರಿಸ್ ಆರ್ಚಿಬಾಲ್ಡ್ ಪೀಟರ್ ಎಂಬುವವರು ಆನಂದ್‌ನಲ್ಲಿರುವ ಸಂಬಂಧಿಕರನ್ನು ಭೇಟಿಯಾಗಲು ತೆರಳುತ್ತಿದ್ದರು. ಈ ವೇಳೆ ಆನಂದ್ ರೈಲು ನಿಲ್ದಾಣದ ಬಳಿ ಹಳಿ ದಾಟುತ್ತಿದ್ದಾಗ ಸಂಜೆ 4.37 ಕ್ಕೆ ಅಪಘಾತ ಸಂಭವಿಸಿತ್ತು. ರೈಲು ಗಾಂಧಿನಗರ ರಾಜಧಾನಿಯಿಂದ ಮುಂಬೈ ಸೆಂಟ್ರಲ್‌ಗೆ ತೆರಳುತ್ತಿದ್ದು, ಇದು ಆನಂದ್ ರೈಲು ನಿಲ್ದಾಣದಲ್ಲಿ ನಿಲ್ಲುವುದಿಲ್ಲ ಎಂಬುದನ್ನು ಅವರು ಉಲ್ಲೇಖಿಸಿದ್ದಾರೆ.

ಅಕ್ಟೋಬರ್‌ 29ರಂದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಅಪಘಾತ ಸಂಭವಿಸಿ ಗುಜರಾತ್‌ನ ವಲ್ಸಾದ್‌ನ ಅತುಲ್ ನಿಲ್ದಾಣದ ಬಳಿ ಹಸುವಿಗೆ ರೈಲು ಡಿಕ್ಕಿಯಾಗಿತ್ತು. ಇದರಿಂದಾಗಿ ರೈಲಿನ ಮುಂಭಾಗ ಹಾನಿಗೊಳಗಾಗಿತ್ತು. ಘಟನೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+