Vande Bharat Express ರೈಲಿನಲ್ಲಿ ನೀಡಲಾದ ಆಹಾರದಲ್ಲಿ ಉಗುರು ಪತ್ತೆ- ಅಡುಗೆ ಗುತ್ತಿಗೆದಾರನಿಗೆ ಬಿದ್ದ ದಂಡವೆಷ್ಟು ಗೊತ್ತೇ?
ನವದೆಹಲಿ, ಜುಲೈ 13: ಪ್ರಧಾನಿ ಮೋದಿ ಅವರಿಂದ ಉದ್ಘಾಟನೆಗೊಂಡಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಭಾರೀ ಬೇಡಿಕೆ ಇದೆ. ಭಾರತದ ಮಹಾನಗರಗಳನ್ನು ಬೆಸೆಯುವ ರೈಲುಗಳು ಅತೀ ಹೆಚ್ಚು ಸದ್ದು ಮಾಡುತ್ತಿವೆ. ಆದರೆ, ಕೆಲ ಪ್ರಕರಣಗಳ ಮೂಲಕ ನೆಗೆಟಿವ್ ಸುದ್ದಿಗಳನ್ನು ವಂದೇ ಭಾರತ್ ರೈಲುಗಳು ಹೊತ್ತು ತರುತ್ತಿವೆ.
ಮುಂಬೈನ ಸಿಎಸ್ಎಂಟಿಯಿಂದ ಗೋವಾದ ಮಡಗಾಂವ್ಗೆ ಹೋಗುತ್ತಿದ್ದ ವಂದೇ ಭಾರತ್ ರೈಲು ಕೆಟ್ಟ ಸುದ್ದಿಯೊಂದನ್ನು ನೀಡಿದೆ. ಈ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ನೀಡಿದ ಆಹಾರದಲ್ಲಿ ಮನುಷ್ಯರ ಉಗುರುಗಳು ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಈ ಪ್ರಯಾಣಿಕರಿಗೆ ರೈಲಿನ ಸಿಬ್ಬಂದಿ ಆಹಾರವನ್ನು ನೀಡಿದ್ದರು. ಆ ಆಹಾರದಲ್ಲಿ ಮನುಷ್ಯರ ಉಗುರು ಪತ್ತೆಯಾಗಿರುವುದು ಆಕ್ರೋಶಕ್ಕೆ ಗುರಿಯಾಗಿದೆ.

ಈ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮವು ಅಡುಗೆ ಗುತ್ತಿಗೆದಾರನಿಗೆ 25,000 ರೂಪಾಯಿ ದಂಡ ವಿಧಿಸಿದೆ ಎಂದು ವರದಿಯಾಗಿದೆ.
ಉಗುರು ಪತ್ತೆ ಹಚ್ಚಿರುವ ಪ್ರಯಾಣಿಕರು ಆಹಾರದ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಹಿಂದೆಯೂ ಮುಂಬೈ-ಗೋವಾ ರೈಲಿನಲ್ಲಿ ಕಳಪೆ ಗುಣಮಟ್ಟದ ಆಹಾರದ ಬಗ್ಗೆ ಹಲವಾರು ದೂರುಗಳು ಬಂದಿದೆ.
ಈಗ, ಇಂತಹ ಘಟನೆಗಳನ್ನು ತಡೆಯಲು ಐಆರ್ಸಿಟಿಸಿ ಕೆಲವು ಪ್ರೋಟೋಕಾಲ್ಗಳನ್ನು ಜಾರಿಗೆ ತಂದಿದೆ. ಕಾರ್ಯನಿರ್ವಾಹಕ ಮಟ್ಟದ ಅಧಿಕಾರಿಯೊಬ್ಬರು ಈಗ ವಂದೇ ಭಾರತ್ ರೈಲುಗಳಲ್ಲಿ ಪ್ರಯಾಣಿಸಲಿದ್ದು, ರೈಲುಗಳಲ್ಲಿ ಆನ್-ಬೋರ್ಡ್ ಸೇವೆಗಳನ್ನು ಮೇಲ್ವಿಚಾರಣೆ ಮಾಡುತ್ತಾರೆ.

ಐಆರ್ಸಿಟಿಸಿ ರತ್ನಗಿರಿಯ ರೈಲು ನಿಲ್ದಾಣದ ಮೂಲ ಅಡುಗೆಮನೆಯಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದೆ. ಅಲ್ಲಿಂದ ಈ ಮಾರ್ಗದಲ್ಲಿ ಪ್ರಯಾಣಿಸುವ ವಂದೇ ಭಾರತ್ ರೈಲಿಗೆ ಆಹಾರವನ್ನು ಲೋಡ್ ಮಾಡಲಾಗುತ್ತದೆ.
ಜೂನ್ 27 ರಂದು ಸಿಎಸ್ಎಂಟಿ-ಮಡ್ಗಾಂವ್ ವಂದೇ ಭಾರತ್ ರೈಲನ್ನು ಆರಂಭಿಸಲಾಗಿದೆ. ಇದಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದ್ದರು. ಇದರಲ್ಲಿ ಪ್ರಯಾಣಿಸುತ್ತಿದ್ದ ಹಿಮಾಂಶು ಮುಖರ್ಜಿ ಅವರು ರೈಲಿನಲ್ಲಿ ಮಸೂರ (ದಾಲ್) ಮತ್ತು ಪನೀರ್ ಕರಿ ತೆಗೆದುಕೊಂಡಿದ್ದರು. ಇದರಲ್ಲಿ ಮನುಷ್ಯರ ಉಗುರು ಇರುವುದು ಅವರಿಗೆ ಕಂಡುಬಂದಿದೆ. ಅದನ್ನು ವಿಡಿಯೊ ಮಾಡಿದ ಬಳಿಕ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ರೈಲಿನಲ್ಲಿ ಕಳಪೆ ಗುಣಮಟ್ಟದ ಆಹಾರ ಬಳಸುತ್ತಿದ್ದೀರಿ ಎಂದು ಅನೇಕ ಪ್ರಯಾಣಿಕರು ಅಧಿಕಾರಿಗಳ ಮುಂದೆ ದೂರು ನೀಡಿದ್ದಾರೆ. ರೈಲಿನ ಸೇವೆಗಳು ಸುಧಾರಿಸಬೇಕೆಂದು ಪ್ರಯಾಣಿಕರು ಮನವಿ ಮಾಡಿದ್ದಾರೆ.
ಮುಂಬೈ-ಮಡ್ಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್, ಮುಂಬೈನ ಛತ್ರಪತಿ ಶಿವಾಜಿ ಟರ್ಮಿನಸ್ನಿಂದ ಗೋವಾದ ಮಡಗಾಂವ್ ಜಂಕ್ಷನ್ ವರೆಗೆ ಚಲಿಸುತ್ತದೆ. ಈ ರೈಲನ್ನು ಜೂನ್ 27,2023 ರಂದು ಪ್ರಾರಂಭಿಸಲಾಯಿತು. ಇದು ದೇಶದ 19ನೇ ವಂದೇ ಭಾರತ್ ರೈಲಾಗಿದೆ.
-
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications