Vande Bharat Express: ದೇಶದಲ್ಲಿ ವಂದೇ ಭಾರತ್ ರೈಲಿನ ಹವಾ: ಪ್ರಯಾಣಿಕರ ಸಂಖ್ಯೆ ಶೇ.34ರಷ್ಟು ಏರಿಕೆ
ನವದೆಹಲಿ: ಭಾರತೀಯ ರೈಲ್ವೆ ವ್ಯಾಪ್ತಿಯಲ್ಲಿ ಕ್ರಾಂತಿ ಸೃಷ್ಟಿಸಿದ ವಂದೇ ಭಾರತ್ ರೈಲುಗಳಿಗೆ (Vande Bharat Express Train) ಬೇಡಿಕೆ ಹೆಚ್ಚಾಗಿದೆ. ರೈಲ್ವೆ ಇಲಾಖೆ ಈಗಾಗಲೇ ಹೊಸ ಮಾರ್ಗ, ರೈಲು ಹಳಿ ಡಬ್ಲಿಂಗ್, ಬೋಗಿಗಳ ಹೆಚ್ಚಳ ಸೇರಿ ಇನ್ನಿತರ ಮೂಲಸೌಕರ್ಯ ಸುಧಾರಿಸುತ್ತಿದೆ. ಇದರ ನಡುವೆ ವೇಗದ ಹಾಗೂ ಐಶಾರಾಮಿ ಮತ್ತು ಆರಾಮದಾಯಕ ಅನುಭವ ನೀಡುವ ವಂದೇ ಭಾರತ್ ಮೆಲಿನ ಪ್ರಯಾಣಿಕರ ಅವಲಂಬನೆ ಹೆಚ್ಚಾಗಿದೆ. ವರ್ಷದಿಂದ ವರ್ಷಕ್ಕೆ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಏರಿಕೆ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚೆನ್ನೈ ಮೂಲದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ICF) ತಯಾರಿಸಿದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ಆಧುನಿಕ ಕೋಚ್ಗಳು, ಸುಧಾರಿತ ಸುರಕ್ಷತಾ ವೈಶಿಷ್ಟ್ಯಗಳು ಮತ್ತು ಪ್ರಯಾಣಿಕ ಸ್ನೇಹಿ ಸೌಲಭ್ಯಗಳನ್ನು ಹೊಂದಿವೆ. ಹೀಗಾಗಿಯೇ ಜನರು ಇದಕ್ಕೆ ಮಾರು ಹೋಗಿದ್ದಾರೆ. 2025-26ನೇ ಹಣಕಾಸು ವರ್ಷದಲ್ಲಿ, ವಂದೇ ಭಾರತ್ ಎಕ್ಸ್ಪ್ರೆಸ್ ವರ್ಷದಿಂದ ವರ್ಷಕ್ಕೆ ಸುಮಾರು ಶೇ. 34 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. 2025-2026ರಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ಪ್ರಯಾಣಿಕರ ಸಂಖ್ಯೆ ಸುಮಾರು 3.98 ಕೋಟಿಗೆ ಏರಿದೆ. ಈ ಹಿಂದಿನ 2024-25ನೇ ಹಣಕಾಸು ವರ್ಷದಲ್ಲಿ ಇದರ ಸಂಖ್ಯೆ 2.97 ಕೋಟಿಯಷ್ಟಿತ್ತು.

ಭಾರತದ ವಂದೇ ಭಾರತ್ ರೈಲುಗಳೆಷ್ಟು? 9.1 ಕೋಟಿ ಪ್ರಯಾಣಿಕರು!
ಹೆಚ್ಚುತ್ತಿರುವ ಈ ಪ್ರಯಾಣಿಕರ ಸಂಖ್ಯೆ ಕೇವಲ ಒಂದು ರಾಜ್ಯ, ಒಂದೆರಡು ಮಾರ್ಗದಲ್ಲಿ ಏರಿಕೆ ಆಗಿದ್ದಲ್ಲ. ದೇಶಾದ್ಯಂತ ಇರುವ ಎಲ್ಲ ವಂದೇ ಭಾರತ್ ರೈಲುಗಳಲ್ಲಿ ಹೆಚ್ಚಾಗಿರುವುದಾಗಿದೆ. ಸದ್ಯ ದೇಶದಲ್ಲಿ ಒಟ್ಟು 162 ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ನಿತ್ಯ ಅನೇಕ ಮಾರ್ಗಗಳಲ್ಲಿ ಸಂಚಾರ ಮಾಡುತ್ತಿವೆ. ರೈಲ್ವೆ ಸಚಿವಾಲಯವೇ ನೀಡಿರುವ ಅಧಿಕೃತ ಮಾಹಿತಿ ಪ್ರಕಾರ, ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಆರಂಭವಾದಾಗಿನಿಂದ 1 ಲಕ್ಷಕ್ಕೂ ಹೆಚ್ಚು ಟ್ರಿಪ್ಗಳಲ್ಲಿ 9.1 ಕೋಟಿಗೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸಿದ್ದಾರೆ ಎಂದು ತಿಳಿಸಿದೆ.
ವಂದೇ ಭಾರತ್ ರೈಲಿನ ಟ್ರಾಫಿಕ್ ರೂಟ್ ಇದು
ಭಾರತೀಯ ರೈಲ್ವೆ ಇಲಾಖೆಯು ವೇಗದ ಹಾಗೂ ಸುರಕ್ಷಿತ, ಆರಾಮದಾಯಕ ಅನುಭವ ನೀಡುವ ಈ ವಂದೇ ಭಾರತ್ ರೈಲನ್ನು 2019ರಲ್ಲಿ ಪರಿಚಯಿಸಿತು. ನವದೆಹಲಿ-ವಾರಣಾಸಿ ಮಧ್ಯೆ ಮೊದಲ ವಂದೇ ಭಾರತ್ ರೈಲು ಸಂಚಾರವನ್ನು 2019ರ ಫೆಬ್ರವರಿ ಆರಂಭಿಸಿತ್ತು. ಈ ಮಾರ್ಗವು ಅತ್ಯಂತ ಜನದಟ್ಟಣೆಯ ಮಾರ್ಗವಾಗಿದ್ದು, ಈ ರೈಲಿನಲ್ಲಿನ ಜನರು ಹೆಚ್ಚಾಗಿ ತುಂಬಿರುತ್ತಾರೆ ಎನ್ನಲಾಗಿದೆ. ಸದರಿ ಮಾರ್ಗದ ವಂದೇ ಭಾರತ್ ರೈಲಿನಲ್ಲಿ 2026ರವರೆಗೆ 73 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರ ಸಂಚರಿಸಿದ್ದಾರೆಂದು ಇಲಾಖೆ ಅಧಿಕೃತ ಅಂಕಿ ಸಂಖ್ಯೆ ನೀಡಿದೆ.
ಕೇವಲ ಒಂದು ಮಾರ್ಗದಲ್ಲಿ ಇಷ್ಟೊಂದು ಜನರೆಂದರೆ ಇನ್ನೂ ಕರ್ನಾಟಕ ಸೇರಿದಂತೆ ದೇಶಾದ್ಯಂತ 162 ವಂದೇ ಭಾರತ್ ರೈಲುಗಳಲ್ಲಿ ಎಷ್ಟು ಕೋಟ್ಯಾಂತರ ಜನ ಸಂಚರಿಸಿದ್ದಾರೆ. ಇದೆಲ್ಲ ನೋಡಿದರೆ ವರ್ಷದಿಂದ ವರ್ಷಕ್ಕೆ ಸಾಮಾನ್ಯ, ಎಕ್ಸ್ಪ್ರೆಸ್ ರೈಲುಗಳ ರೀತಿಯಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳ ಪ್ರಯಾಣಿಕರ ಸಂಖ್ಯೆಯಲ್ಲಿ ಗಮನಾರ್ಹ ಹೆಚ್ಚಳ ಕಂಡು ಬಂದಿದೆ.
-
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್













Click it and Unblock the Notifications