ಗುಜರಾತ್ ಸಚಿವರು ಪ್ರಯಾಣಿಸುತ್ತಿದ್ದ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ
ರಾಜ್ಕೋಟ್, ಡಿಸೆಂಬರ್ 8: ಗುಜರಾತ್ನ ರಾಜ್ಕೋಟ್ ಜಿಲ್ಲೆಯಲ್ಲಿ ಅಹಮದಾಬಾದ್ನಿಂದ ರಾಜ್ಕೋಟ್ಗೆ ಗುಜರಾತ್ನ ಸಚಿವರೊಬ್ಬರು ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ಮೇಲೆ ಕಲ್ಲೂ ತೂರಾಟ ನಡೆದಿದೆ.
ಗುಜರಾತಿನ ಸಾರಿಗೆ ಖಾತೆ ರಾಜ್ಯ ಸಚಿವ ಹರ್ಷ್ ಸಾಂಘ್ವಿ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ರೈಲಿನ ಗಾಜಿಗೆ ಹಾನಿಯಾಗಿದೆ. ಅವರು ಗುರುವಾರ ರಾತ್ರಿ ರೈಲಿನಲ್ಲಿ ಅಹಮದಾಬಾದ್ನಿಂದ ರಾಜ್ಕೋಟ್ಗೆ ಪ್ರಯಾಣಿಸುತ್ತಿದ್ದರು. ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ರಾಜ್ಕೋಟ್ನ ಬಿಲೇಶ್ವರ್ ರೈಲು ನಿಲ್ದಾಣದ ಬಳಿ ಈ ಘಟನೆ ವರದಿಯಾಗಿದೆ. ಸಾಂಘ್ವಿ ಇ1 ಕೋಚ್ನಲ್ಲಿದ್ದರು.

ಪೊಲೀಸರ ಪ್ರಕಾರ, ಕೋಚ್ನಲ್ಲಿದ್ದ ರೈಲು ಪ್ರಯಾಣಿಕರು, ಸ್ಥಳೀಯರು ಮತ್ತು ಹತ್ತಿರದ ಗ್ರಾಮದ ಸರಪಂಚ್ನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ನೀಡಿರುವ ಪೊಲೀಸರು, ರೈಲಿನ ಕಿಟಕಿಗಳಿಗೆ ಫೈಬರ್ ಬಲವರ್ಧಿತ ಗಾಜಿನಿಂದ ಪ್ರಯಾಣಿಕರ ಸುರಕ್ಷತೆಯನ್ನು ಖಾತ್ರಿಪಡಿಸಲಾಗಿದೆ. ಇದೇ ಕಾರಣಕ್ಕೆ ಕಿಟಕಿಗೆ ಕಲ್ಲು ತಗುಲಿದಾಗ ಗಾಜು ಬಿರುಕು ಬಿಟ್ಟರೂ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ಹೇಳಿದರು.
ದೇಶದಾದ್ಯಂತ ಕಲ್ಲು ತೂರಾಟದ ಘಟನೆಗಳು:
ನವೆಂಬರ್ನಲ್ಲಿ ರೈಲು ಸಂಖ್ಯೆ 20835 ರೂರ್ಕೆಲಾ-ಭುವನೇಶ್ವರ್ ವಂದೇ ಭಾರತ್ ಎಕ್ಸ್ಪ್ರೆಸ್ ಒಡಿಶಾದ ಮೆರಮಂಡಲಿ ಮತ್ತು ಬುಧಪಾಂಕ್ ರೈಲು ನಿಲ್ದಾಣಗಳ ಮೂಲಕ ರೈಲು ಹಾದು ಹೋಗುತ್ತಿದ್ದಾಗ ಕಲ್ಲು ತೂರಾಟ ನಡೆದಿತ್ತು.
ಭುವನೇಶ್ವರ್-ಸಂಬಲ್ಪುರ್ ರೈಲುಮಾರ್ಗದಲ್ಲಿ ಧೆಂಕನಾಲ್-ಅಂಗುಲ್ ರೈಲ್ವೆ ವಿಭಾಗದ ನಡುವೆ ಈ ವಿಸ್ತರಣೆಯು ಬರುತ್ತದೆ. ಎಕ್ಸಿಕ್ಯೂಟಿವ್ ಕ್ಲಾಸ್ ಕೋಚ್ನ ಕಿಟಕಿಗೆ ಹಾನಿಯಾಗಿತ್ತು. ಕೆಲವು ತಿಂಗಳ ಹಿಂದೆ ದೇಶದ ಪೂರ್ವ ಪ್ರದೇಶದಲ್ಲಿ ಹೌರಾ-ಹೊಸ ಜಲ್ಪೈಗುರಿ ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಪರಿಚಯಿಸಿದ ಕೂಡಲೇ ರೈಲಿನ ಮೇಲೆ ಕಲ್ಲು ತೂರಲಾಯಿತು, ಕೋಚ್ ಸಂಖ್ಯೆ ಸಿ 6 ರ ಕಿಟಕಿಗಳನ್ನು ಹಾನಿಗೊಳಿಸಲಾಗಿತ್ತು.
ಈ ವರ್ಷದ ಮತ್ತೊಂದು ಘಟನೆಯಲ್ಲಿ ಗೋರಖ್ಪುರ ಮತ್ತು ಲಕ್ನೋ ನಿಲ್ದಾಣಗಳ ನಡುವೆ ಓಡುವ ಉತ್ತರ ಪ್ರದೇಶದ ಎರಡನೇ ನೀಲಿ ಮತ್ತು ಬಿಳಿ ಬಣ್ಣದ ರೈಲಿನ ಮೇಲೆ ಆರನೇ ಬಾರಿಗೆ ಕಲ್ಲುಗಳಿಂದ ದಾಳಿ ನಡೆಸಲಾಯಿತು. ಎಸಿ ಚೇರ್ ಕಾರ್ ಕೋಚ್ನ ಕಿಟಕಿಗೆ ಹಾನಿಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿರಲಿಲ್ಲ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ











Click it and Unblock the Notifications