Vande Bharat Express: ಬೆಂಗಳೂರು-ಕೊಯಮತ್ತೂರು ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ
ಬೆಂಗಳೂರು, ಫೆಬ್ರವರಿ 27: ಕರ್ನಾಟಕ ರಾಜ್ಯದಿಂದ ನೆರೆಯ ತಮಿಳುನಾಡು ರಾಜ್ಯಕ್ಕೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (Vande Bharat Express Train)ಅತ್ಯುತ್ತಮ ಪ್ರಯಾಣ ಸೇವೆ ನೀಡುತ್ತಿದೆ. ಇದರ ಸಂಚಾರ ವೇಳಾಪಟ್ಟಿ ಕುರಿತು ಪ್ರಯಾಣಿಕರಲ್ಲಿದ್ದ ಅಸಮಾಧಾನ ಇದೀಗ ದೂರವಾಗಿದೆ. ರೈಲ್ವೆ ಇಲಾಖೆಯು ಖುಷಿ ಸುದ್ದಿ ನೀಡಿದೆ.
ಕೊಯಮತ್ತೂರು- ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ವಾರದಲ್ಲಿ ಗುರುವಾರ ಒಂದು ದಿನ ಹೊರತುಪಡಿಸಿ ಎಲ್ಲಾ ದಿನಗಳು ಸಂಚಾರ ನಡೆಸುತ್ತದೆ. ಈ ರೈಲಿನ ಪ್ರಯಾಣ ಸಮಯದಿಂದ ಪ್ರಯಾಣಿಕರಿಗೆ ಆಗುತ್ತಿದ್ದ ಅನಾನುಕೂಲ ತಪ್ಪಿಸಲಾಗಿದೆ. ಅದಕ್ಕಾಗಿ ರೈಲು ಸೇವೆಯ ಪ್ರಯಾಣದ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ.

ಬೆಂಗಳೂರು-ಕೊಯಮತ್ತೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಬದಲಾದ ಸಮಯದಲ್ಲಿ ಬೆಳಗ್ಗೆ 7:25 ಕ್ಕೆ ಕೊಯಮತ್ತೂರಿನಿಂದ ಹೊರಡಲಿದೆ. ಈ ಹಿಂದೆ ಕೊಯಮತ್ತೂರಿನಿಂದ ಬೆಳಗ್ಗೆ 5 ಗಂಟೆಗೆ ಹೊರಡುತ್ತಿತ್ತು. ಸಮಯದ ಬದಲಾವಣೆಯು ಪ್ರಯಾಣಿಕರಿಗೆ ದೊಡ್ಡ ಸಮಾಧಾನ ತಂದಿದೆ.
ಈ ಹಿಂದೆ ಬೆಳಗಿನ ಸಮಯ ರೈಲು ಏರಲು ತೊಂದರೆ ಅನುಭವಿಸಿದ್ದರು. ಇದೀಗ ರೈಲ್ವೆ ಇಲಾಖೆ ಈ ನಿರ್ಧಾರವನ್ನು ಅನೇಕ ಪ್ರಯಾಣಿಕರು ಸ್ವಾಗತಿಸಿದ್ದಾರೆ. ಅನೇಕ ಪ್ರಯಾಣಿಕರು, ವಿಶೇಷವಾಗಿ ವೃದ್ಧರು, ಬೆಳಗ್ಗೆ 5 ಗಂಟೆಗೆ ಹೊರಡುವ ಸಮಯಕ್ಕೆ ನಿಲ್ದಾಣವನ್ನು ತಲುಪುವುದು ಸವಾಲಿನ ಸಂಗತಿ ಆಗಿತ್ತು. ಇದೀಗ ಆ ಸಮಸ್ಯೆಗಳಿಗೆ ಮುಕ್ತ ಸಿಕ್ಕಿದೆ.

ಈ ವಂದೇ ಭಾರತ್ ರೈಲಿನ ವಿವರ
* ಕೊಯಮತ್ತೂರಿನಿಂದ- ಬೆಂಗಳೂರಿಗೆ ಪ್ರಯಾಣ ಸುಮಾರು ಆರೂವರೆ ಗಂಟೆಗಳಲ್ಲಿ ಕ್ರಮಿಸುತ್ತದೆ.
* ರೈಲು ಮಧ್ಯಾಹ್ನ 1.50ಕ್ಕೆ ಬೆಂಗಳೂರಿಗೆ ಆಗಮಿಸಲಿದೆ.
* ಹಿಂದಿರುಗುವ ಪ್ರಯಾಣದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ಬೆಂಗಳೂರು ಕಂಟೋನ್ಮೆಂಟ್ನಿಂದ ಮಧ್ಯಾಹ್ನ 2:20 ಕ್ಕೆ ಹೊರಡಲಿದೆ.
* ರೈಲು ರಾತ್ರಿ 8:45ಕ್ಕೆ ಕೊಯಮತ್ತೂರು ತಲುಪಲಿದೆ.
* ರೈಲು ಗುರುವಾರ ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ಕಾರ್ಯ ನಿರ್ವಹಿಸುತ್ತದೆ.
* ಕೊಯಮತ್ತೂರು-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಕಳೆದ ವರ್ಷ ಡಿಸೆಂಬರ್ 30 ರಿಂದ ಉದ್ಘಾಟನೆಗೊಂಡು ವಾಣಿಜ್ಯ ಕಾರ್ಯಾಚರಣೆ ಆರಂಭಿಸಿತು.
* ಸಮಯ ಬದಲಾವಣೆಗು ಮುನ್ನ ಅಧಿಕಾರಿಗಳು ಮುಂಜಾನೆ ಹೊರಡುವ ಸಮಯದ ಬಗ್ಗೆ ಪ್ರಯಾಣಿಕರಿಂದ ಟೀಕೆಗಳನ್ನು ಎದುರಿಸಿದ್ದರು.
* ಮುಂಜಾನೆಯಲ್ಲಿ ಸಾರ್ವಜನಿಕ ಸಾರಿಗೆ ಸೇವೆಗಳ ಕೊರತೆಯ ಬಗ್ಗೆಯೂ ದೂರುಗಳು ಸಲ್ಲಿಕೆ ಆಗಿದ್ದವು.
* ಹೆಚ್ಚುವರಿಯಾಗಿ, ಮುಂಜಾನೆ ಸಮಯದಲ್ಲಿ ಕ್ಯಾಬ್ ಸವಾರಿಯ ವೆಚ್ಚವು ದುಬಾರಿ ಆಗಿದೆ ಎಂದು ಪ್ರಯಾಣಿಕರು ಗೋಳು ಹೇಳಿಕೊಂಡಿದ್ದರು.
-
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ












Click it and Unblock the Notifications