ದುರಂತಕ್ಕೆ ಸಂತಾಪ ಆದರೆ..ವಂದೇ ಭಾರತ್ ಮಿಷನ್ ನಿಲ್ಲಲ್ಲ!
ಕ್ಯಾಲಿಕಟ್, ಆ.7: ಕೊರೊನಾವೈರಸ್ ಭೀತಿ ನಡುವೆ ವಿವಿಧ ದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಭಾರತೀಯ ಸರ್ಕಾರವು ವಂದೇ ಭಾರತ್ ಮಿಷನ್ ಹಮ್ಮಿಕೊಂಡಿರುವುದು ಗೊತ್ತಿರಬೇಕಲ್ಲ. ಇದೇ ಮಿಷನ್ ನಲ್ಲಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ IX 1344 ಇಲ್ಲಿನ ಕರಿಪುರ ವಿಮಾನ ನಿಲ್ದಾಣದಲ್ಲಿ ದುರಂತಕ್ಕೀಡಾಗಿದೆ.
Recommended Video
ವಂದೇ ಭಾರತ್ ಕಾರ್ಯಾಚರಣೆಯಲ್ಲಿ ಏರ್ ಇಂಡಿಯಾ, ನಾಗರಿಕ ವಿಮಾನಯಾನ ಸಚಿವಾಲಯ, ಕೇರಳ ಸರ್ಕಾರ, ಯುಎಇ ರಾಯಭಾರ ಕಚೇರಿ ಎಲ್ಲವೂ ಸಂಯೋಜನೆಯಲ್ಲಿ ಕಾರ್ಯ ನಿರ್ವಹಿಸುತ್ತವೆ. ವಿಮಾನ ವಿಳಂಬ, ಸೌಲಭ್ಯ ಕೊರತೆ, ಆರೋಗ್ಯ ಸಂರಕ್ಷಣೆ ಶಿಸ್ತು ಪಾಲನೆ ಇಲ್ಲ ಎಂಬ ದೂರುಗಳನ್ನು ಬಿಟ್ಟರೆ ಕಳೆದ 4 ಹಂತದಲ್ಲಿ ಇದು ಯಶಸ್ವಿ ಕಾರ್ಯಾಚರಣೆಯಾಗಿದೆ.
5ನೇ ಹಂತದ ಕಾರ್ಯಾಚರಣೆಯ ಮಧ್ಯಭಾಗದಲ್ಲಿ ಏರ್ ಇಂಡಿಯಾಕ್ಕೆ ಇಂದು ಹಿನ್ನಡೆಯಾಗಿದೆ. ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಏರ್ ಇಂಡಿಯಾ, ವಂದೇ ಭಾರತ್ ಮಿಷನ್ ಎಂದಿನಂತೆ ಸಾಗಲಿದೆ ಎಂದು ಸ್ಪಷ್ಟನೆ ನೀಡಿದೆ.

ಯುಎಇಯಿಂದ ಕೇರಳದ ಕ್ಯಾಲಿಕಟ್(Kozhikode) ಕರಿಪುರದ ಟೇಬಲ್ ಟಾಪ್ ರನ್ ವೇ ಏರ್ ಇಂಡಿಯಾ ವಿಮಾನ ಆಗಸ್ಟ್ 2 ಹಾಗೂ 5 ರಂದು ಬಂದಿಳಿದು ಹೋಗಿದೆ. ಪ್ರತಿ ಬಾರಿ ಸರಾಸರಿ 177 ಪ್ಲಸ್ ಪ್ರಯಾಣಿಕರನ್ನು ಹೊತ್ತು ತಂದಿದೆ.
ಆಗಸ್ಟ್7 ಅಲ್ಲದೆ 9, 12, 14, 16, 19, 21,23, 26, 28, 30ರ ತನಕ ವೇಳಾಪಟ್ಟಿ ನಿಗದಿಯಾಗಿದೆ. ದುಬೈನಲ್ಲಿ 13:30ಕ್ಕೆ ಹೊರಟು ಕರಿಪುರಕ್ಕೆ 19:10ಕ್ಕೆ ಬರಬೇಕಾಗುತ್ತದೆ.
ಆದರೆ, ಕೇರಳದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಆಗಸ್ಟ್ 9, 12 ರ ತನಕ ವಿಮಾನಯಾನ ಕಷ್ಟಕರವಾಗಲಿದೆ.
ಪರಿಸ್ಥಿತಿ ಹೀಗಿದ್ದರೂ, ಇಂದು ದುರಂತ ಸಂಭವಿಸಿದರೂ ವಂದೇ ಭಾರತ್ ಮಿಷನ್ ನಿಲ್ಲಿಸಲ್ಲ, ಇಂದಿನ ಅಪಘಾತಕ್ಕೆ ತೀವ್ರ ವಿಷಾದ ವ್ಯಕ್ತಪಡಿಸುತ್ತೇವೆ. ಏರ್ ಕ್ರಾಫ್ಟ್ ವಿಟಿ ಜಿಎಚ್ ಕೆ, ಐಎಕ್ಸ್ 1344 ಡಿಎಕ್ಸ್ ಬಿ ಸಿಸಿಜೆ ಕ್ರಾಶ್ ಲ್ಯಾಂಡಿಂಗ್ ಆಗಿದೆ. ನಮ್ಮ ಜಾಲಕ್ಕೆ ತೊಂದರೆಯಾದರೂ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಏರ್ ಇಂಡಿಯಾ ವಕ್ತಾರರು ಹೇಳಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications