ಆಮ್ ಆದ್ಮಿ ಅರವಿಂದ ಕೇಜ್ರಿವಾಲ್ ದಂಪತಿ ಆಸ್ತಿ ಪ್ರಕಟ
ವಾರಣಾಸಿ, ಏ.24: ಹಾಲಿ ಲೋಕಸಭಾ ಚುನಾವಣೆಯ 6ನೇ ಹಂತದ ಮತದಾನ ಇಂದು ಶುರುವಾಗಿದೆ. ಈ ಮಧ್ಯೆ, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ಸೋಲಿಸಬೇಕೆಂದು ಪಣತೊಟ್ಟು ಉತ್ತರ ಪ್ರದೇಶದ ವಾರಣಾಸಿಯಿಂದ ಕಣಕ್ಕಿಳಿದಿರುವ ಆಮ್ ಆದ್ಮಿ ಪಕ್ಷದ ನಾಯಕ, ದಿಲ್ಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ನಿನ್ನೆ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.
ಆದರೆ ನಾಮಪತ್ರ ಸಲ್ಲಿಸುವ ವೇಳೆ ತಮ್ಮ ಕೇವಲ 500 ರೂಪಾಯಿ ಇದೆ. ನಾನೊಬ್ಬ ಫಕೀರ. ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನಲ್ಲಿ ಹಣವಿಲ್ಲ ಅಂತೇನೋ ಹೇಳಿದ್ದ ಅರವಿಂದ ಕೇಜ್ರಿವಾಲ್ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ತಮ್ಮ ಬಳಿ 2.14 ಕೋಟಿ ರೂ ಆಸ್ತಿ ಪಾಸ್ತಿ ಇದೆಯೆಂದು ಘೋಷಿಸಿದ್ದಾರೆ. ತಮ್ಮ ಹಾಗೂ ತಮ್ಮ ಪತ್ನಿಯ ಹೆಸರಿನಲ್ಲಿ ಒಟ್ಟು 2.14 ಕೋಟಿ ರೂ ಆಸ್ತಿಯಿದೆ ಎಂದು ಅವರು ದಾಖಲಿಸಿದ್ದಾರೆ. (ಮೋದಿ ಚರಾಸ್ತಿ ಸ್ಥಿರಾಸ್ತಿ ವಿವರವೂ ಲಭ್ಯವಾಗಿದೆ)

ಅಂದರೆ 'ಆಮ್ ಆದ್ಮಿ' ಅರವಿಂದ ಕೇಜ್ರಿವಾಲ್ ಆಸ್ತಿ ನರೇಂದ್ರ ಮೋದಿಗಿಂತಲೂ ಹೆಚ್ಚಿದೆ. ಇತ್ತೀಚೆಗೆ ವಡೋದರಾ ಕ್ಷೇತ್ರದಿಂದ ಸ್ಪರ್ಧಿಸಬಯಸಿ ಮೋದಿ ನಾಮಪತ್ರ ಸಲ್ಲಿಸುವಾಗ ತಮ್ಮ ಬಳಿ 1.50 ಕೋಟಿ ರೂ ಆಸ್ತಿ ಪಾಸ್ತಿ ಇದೆಯೆಂದು ಘೋಷಿಸಿದ್ದರು. ಅಂದಹಾಗೆ ಮೋದಿ ವಾರಣಾಸಿ ಚುನಾವಣೆಗೆ ಇನ್ನಷ್ಟೇ ನಾಮಪತ್ರ ಸಲ್ಲಿಸಬೇಕಿದೆ. ಜತೆಗೆ, ತಮ್ಮ ವಿರುದ್ಧ ದೇಶದ ವಿವಿಧ ಕೋರ್ಟುಗಳಲ್ಲಿ 6 ಪ್ರಕರಣಗಳಿವೆ ಎಂದೂ ಅವರು ಅಫಿಡವಿಟ್ ನಲ್ಲಿ ನಮೂದಿಸಿದ್ದಾರೆ.
ಕೇಜ್ರಿವಾಲ್ ದಂಪತಿಯ ಆಸ್ತಿ ವಿವರ ಹೀಗಿದೆ:
ಅರವಿಂದ ಕೇಜ್ರಿವಾಲ್ ಅವರು ಹರ್ಯಾಣ ಮತ್ತು ಗಾಜಿಯಾಬಾದ್ ನಲ್ಲಿ ಎರಡು ಫ್ಲ್ಯಾಟ್ ಗಳನ್ನು ಹೊಂದಿದ್ದಾರೆ. ಅವರ ಹೆಸರಿನಲ್ಲಿ 4.25 ಲಕ್ಷ ಮೌಲ್ಯದ ಚರ ಆಸ್ತಿಯಿದ್ದರೆ, ಪತ್ನಿ ಸುನೀತಾರ ಹೆಸರಿನಲ್ಲಿ 17.41 ಲಕ್ಷ ಮೌಲ್ಯದ ಚರಾಸ್ತಿಯಿದೆ. ತಮ್ಮ ಕೈಯಲ್ಲಿ 15 ಸಾವಿರ ನಗದು ಇದ್ದು, ಪತ್ನಿಯ ಬಳಿ 10 ಸಾವಿರ ನಗದು ಇರುವುದಾಗಿಯೂ ಅವರು ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ.
ಗಮನಾರ್ಹವೆಂದರೆ ದಿಲ್ಲಿ ಅಸೆಂಬ್ಲಿ ಚುನಾವಣೆಗೆ ನಾಮಪತ್ರ ಸಲ್ಲಿಸುವಾಗ 23,550 ರೂ. ವಿದ್ಯುತ್ ಬಿಲ್ ಬಾಕಿಯಿರುವುದಾಗಿ ಹೇಳಿದ್ದ ಅರವಿಂದ ಕೇಜ್ರಿವಾಲ್ ಆ ಬಿಲ್ ಚುಕ್ತಾ ಮಾಡಿರುವುದಾಗಿ ತಿಳಿಸಿದ್ದಾರೆ. ಇನ್ನು ಪತ್ನಿ ಸುನೀತಾ ಅವರು 41 ಲಕ್ಷ ರೂ ಬ್ಯಾಂಕ್ ಸಾಲ ತೀರಿಸಬೇಕಿದೆ. 2012-13ನೇ ಸಾಲಿನಲ್ಲಿ ಅರವಿಂದ ಕೇಜ್ರಿವಾಲ್ ಆದಾಯ 2,05,600 ರೂ. ಮತ್ತು ಪತ್ನಿ ಸುನೀತಾರ ಆದಾಯ 9,84,570 ರೂ. ನಷ್ಟಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications