ಆರ್ಎಸ್ಎಸ್ ಕಾರ್ಯಕ್ರಮದಿಂದ ಅನಪೇಕ್ಷಿತ ಅಂತರ: ಮೊಯಿಲಿ
ನವದೆಹಲಿ, ಜೂನ್ 4: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಭಾಗವಹಿಸುವುದರಿಂದ ದೇಶದಲ್ಲಿ ಅನಪೇಕ್ಷಿತ ಅಂತರ ಉಂಟಾಗಲಿದೆ ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ವೀರಪ್ಪ ಮೊಯಿಲಿ ಸೋಮವಾರ ಹೇಳಿದರು.
ಆರ್ಎಸ್ಎಸ್ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ದೇಶಕ್ಕೆ ಅಪೇಕ್ಷಿತವಲ್ಲದ ಅಂತರವನ್ನು ಸೃಷ್ಟಿಸಲಿದೆ ಎಂದು ಮೊಯಿಲಿ ಅಭಿಪ್ರಾಯಪಟ್ಟರು.
ಆರ್ಎಸ್ಎಸ್ನ ಕೇಂದ್ರ ಕಚೇರಿ ನಾಗಪುರದಲ್ಲಿ ಜೂನ್ 7ರಂದು ಸಂಘಟನೆಯ ಕಾರ್ಯಕರ್ತರ ತರಬೇತಿಯ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ.

ಈ ಸಮಾರಂಭಕ್ಕೆ ಮಾಜಿ ರಾಷ್ಟ್ರಪತಿ, ಹಿರಿಯ ಕಾಂಗ್ರೆಸ್ಸಿಗ ಪ್ರಣವ್ ಮುಖರ್ಜಿ ಅವರನ್ನು ಆರ್ಎಸ್ಎಸ್ ಆಹ್ವಾನಿಸಿತ್ತು. ಆರ್ಎಸ್ಎಸ್ ಆಮಂತ್ರಣವನ್ನು ಒಪ್ಪಿಕೊಂಡಿರುವ ಪ್ರಣವ್, ಸಮಾರಂಭದಲ್ಲಿ ಭಾಷಣ ಮಾಡಲಿದ್ದಾರೆ.
ಆದರೆ, ಇದು ಕಾಂಗ್ರೆಸ್ಗೆ ತೀವ್ರ ಮುಜುಗರ ಉಂಟುಮಾಡಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ತಮ್ಮ ನಿರ್ಧಾರವನ್ನು ಮರುಪರಿಶೀಲನೆ ಮಾಡುವಂತೆ ಕಾಂಗ್ರೆಸ್ನ ಅನೇಕ ಮುಖಂಡರು ಪ್ರಣವ್ ಮುಖರ್ಜಿ ಅವರಿಗೆ ಒತ್ತಾಯಿಸಿದ್ದಾರೆ.
ಮಹಾತ್ಮ ಗಾಂಧಿ, ಮಾಜಿ ರಾಷ್ಟ್ರಪತಿ ಝಾಕಿರ್ ಹುಸೇನ್, ಜಯಪ್ರಕಾಶ್ ನಾರಾಯಣ್, ಸೇನಾ ಮುಖ್ಯಸ್ಥರಾಗಿದ್ದ ಕೆ.ಎಂ. ಕಾರಿಯಪ್ಪ ಅವರು ಈ ಹಿಂದೆ ಆರ್ಎಸ್ಎಸ್ ಆಯೋಜಿಸಿದ್ದ ವಿವಿಧ ಸಮಾರಂಭಗಳಲ್ಲಿ ಅತಿಥಿಗಳಾಗಿ ಪಾಲ್ಗೊಂಡಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications