ಡಿಎಲ್, ಆರ್ಸಿ ಅವಧಿ ವಿಸ್ತರಿಸಿ ಕೇಂದ್ರ ಸರ್ಕಾರದ ಆದೇಶ
ನವದೆಹಲಿ, ಮಾರ್ಚ್ 26: ವಾಹನಗಳ ಚಾಲನಾ ಪರವಾನಗಿ, ಫಿಟ್ನೆಸ್ ಪ್ರಮಾಣಪತ್ರ, ನೋಂದಣಿ ಪ್ರಮಾಣ ಪತ್ರ ಸೇರಿದಂತೆ ವಾಹನಕ್ಕೆ ಸಂಬಂಧಿಸಿದ ದಾಖಲೆಗಳ ಮಾನ್ಯತೆಯನ್ನು ಜೂನ್ 30, 2021ರವರೆಗೂ ವಿಸ್ತರಿಸಿರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಕೊರೊನಾ ಕಾರಣದಿಂದಾಗಿ ಈ ಕ್ರಮ ಕೈಗೊಂಡಿರುವುದಾಗಿ ತಿಳಿಸಿದೆ.
ಡಿಎಲ್, ಪರವಾನಗಿ, ನೋಂದಣಿ, ಮರು ನೋಂದಣಿ ಹೀಗೆ ವಾಹನಗಳಿಗೆ ಸಂಬಂಧಿಸಿದಂತೆ ಯಾವುದೇ ದಾಖಲೆಗಳ ಅವಧಿ ಮುಗಿದಿದ್ದರೂ ಆ ದಾಖಲೆಗಳನ್ನು ಜೂನ್ 31ರವರೆಗೂ ಮಾನ್ಯತೆ ನೀಡಿ ಎಂದು ಪ್ರತಿ ರಾಜ್ಯಗಳಿಗೂ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಸೂಚನೆ ನೀಡಿದೆ. ಮುಂದೆ ಓದಿ...

ಅವಧಿ ಮುಗಿದಿರುವ ದಾಖಲೆಗಳ ಮಾನ್ಯತೆ
ದೇಶದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿರುವ ಕಾರಣ ಈ ನಿರ್ಣಯ ತೆಗೆದುಕೊಂಡಿದ್ದು, ಫೆಬ್ರವರಿ 1, 2020ರ ಬಳಿಕ ಅವಧಿ ಮುಗಿದಿರುವ ಹಾಗೂ ಕೊರೊನಾ ಲಾಕ್ಡೌನ್ ಕಾರಣವಾಗಿ ಈ ದಾಖಲೆಗಳನ್ನು ನವೀಕರಣಗೊಳಿಸಲು ಸಾಧ್ಯವಾಗಿರದ ದಾಖಲೆಗಳನ್ನು ಜೂನ್ 30ರವರೆಗೂ ಅವಧಿ ವಿಸ್ತರಣೆ ಮಾಡಲು ಸೂಚಿಸಿದೆ.

"ಸಾರ್ವಜನಿಕರಿಗ ತೊಂದರೆಯಾಗಬಾರದು"
ವಾಹನಕ್ಕೆ ಸಂಬಂಧಿಸಿದ ದಾಖಲೆಗಳ ಅವಧಿಯನ್ನು ವಿಸ್ತರಿಸಲಾಗಿದ್ದು, ಸಾರಿಗೆ ಸಂಬಂಧ ಸೇವೆಗಳಲ್ಲಿ ವ್ಯತ್ಯಯವಾಗಬಾರದು. ಇದರಿಂದ ಸಾರ್ವಜನಿಕರಿಗೆ, ಸಾರಿಗೆ ಸೇವೆ ಸಲ್ಲಿಸುವವರಿಗೆ ಯಾವುದೇ ಸಮಸ್ಯೆಯಾಗಬಾರದು ಎಂದು ಹೇಳಲಾಗಿದೆ. ಇದೇ ಕೊನೆ ನಿರ್ದೇಶನ ಎಂದೂ ಸಚಿವಾಲಯ ತಿಳಿಸಿದೆ.

ಲಾಕ್ಡೌನ್ ನಂತರ ಹಲವು ಬಾರಿ ನಿರ್ದೇಶನ
ಮಾರ್ಚ್ 24, 2020ರ ಬಳಿಕ ಕೊರೊನಾ ಕಾರಣದಿಂದಾಗಿ ದೇಶಾದ್ಯಂತ ಲಾಕ್ಡೌನ್ ಘೋಷಿಸಿದ್ದು, ಅತ್ಯವಶ್ಯಕ ಸರಕು ಹಾಗೂ ಸೇವೆ ಒದಗಿಸುವ ಉದ್ದೇಶದಿಂದ ರಸ್ತೆ ಮತ್ತು ಸಾರಿಗೆ ಸಚಿವಾಲಯ ಹಲವು ಬಾರಿ ನಿರ್ದೇಶನಗಳನ್ನು ಜಾರಿಗೊಳಿಸಿತ್ತು. ಫೆಬ್ರವರಿ 2020ರಲ್ಲಿ ಎಲ್ಲಾ ದಾಖಲೆಗಳನ್ನು ಮಾರ್ಚ್ 31, 2021 ರವರೆಗೆ ವಿಸ್ತರಿಸಿತ್ತು. ಇದೀಗ ಮತ್ತೆ ಅವಧಿ ವಿಸ್ತರಣೆ ಮಾಡಲಾಗಿದೆ.

ನಾಗರಿಕರಿಗೆ ಅನುಕೂಲವಾಗಲು ಈ ಕ್ರಮ
ದೇಶದಲ್ಲಿ ಕೊರೊನಾ ಎರಡನೇ ಅಲೆ ಸೃಷ್ಟಿಯಾಗಿರುವುದನ್ನು ಗಮನದಲ್ಲಿಟ್ಟುಕೊಂಡು ಮತ್ತೆ ಈ ಮಾನ್ಯತೆಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ. ದೇಶಾದ್ಯಂತ ಲಾಕ್ಡೌನ್ ಇದ್ದ ಕಾರಣ ಬಹುತೇಕ ಸರ್ಕಾರಿ ಕಚೇರಿಗಳ ಕಾರ್ಯ ಸ್ಥಗಿತವಾಗಿತ್ತು. ಸಂಚಾರ ಇಲಾಖೆಯೂ ಸಂಪೂರ್ಣ ಬಂದ್ ಆಗಿದ್ದು, ಡಿಎಲ್, ಎಲ್ಎಲ್ ಪ್ರಕ್ರಿಯೆ ಮಾಡದಿರಲು ನಿರ್ಧರಿಸಲಾಗಿತ್ತು. ಮೋಟಾರು ವಾಹನ ಕಾಯ್ದೆ ಮತ್ತು ಕೇಂದ್ರ ಮೋಟಾರು ವಾಹನಗಳ ನಿಯಮಗಳಿಗೆ ಸಂಬಂಧಿಸಿದ ನಾಗರಿಕರಿಗೆ ಅನುಕೂಲವಾಗುವಂತೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications