ಡಿಎಲ್, ಆರ್ಸಿ ಅವಧಿ ವಿಸ್ತರಿಸಿ ಕೇಂದ್ರ ಸರ್ಕಾರದ ಆದೇಶ
ನವದೆಹಲಿ, ಮಾರ್ಚ್ 26: ವಾಹನಗಳ ಚಾಲನಾ ಪರವಾನಗಿ, ಫಿಟ್ನೆಸ್ ಪ್ರಮಾಣಪತ್ರ, ನೋಂದಣಿ ಪ್ರಮಾಣ ಪತ್ರ ಸೇರಿದಂತೆ ವಾಹನಕ್ಕೆ ಸಂಬಂಧಿಸಿದ ದಾಖಲೆಗಳ ಮಾನ್ಯತೆಯನ್ನು ಜೂನ್ 30, 2021ರವರೆಗೂ ವಿಸ್ತರಿಸಿರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಕೊರೊನಾ ಕಾರಣದಿಂದಾಗಿ ಈ ಕ್ರಮ ಕೈಗೊಂಡಿರುವುದಾಗಿ ತಿಳಿಸಿದೆ.
ಡಿಎಲ್, ಪರವಾನಗಿ, ನೋಂದಣಿ, ಮರು ನೋಂದಣಿ ಹೀಗೆ ವಾಹನಗಳಿಗೆ ಸಂಬಂಧಿಸಿದಂತೆ ಯಾವುದೇ ದಾಖಲೆಗಳ ಅವಧಿ ಮುಗಿದಿದ್ದರೂ ಆ ದಾಖಲೆಗಳನ್ನು ಜೂನ್ 31ರವರೆಗೂ ಮಾನ್ಯತೆ ನೀಡಿ ಎಂದು ಪ್ರತಿ ರಾಜ್ಯಗಳಿಗೂ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಸೂಚನೆ ನೀಡಿದೆ. ಮುಂದೆ ಓದಿ...

ಅವಧಿ ಮುಗಿದಿರುವ ದಾಖಲೆಗಳ ಮಾನ್ಯತೆ
ದೇಶದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿರುವ ಕಾರಣ ಈ ನಿರ್ಣಯ ತೆಗೆದುಕೊಂಡಿದ್ದು, ಫೆಬ್ರವರಿ 1, 2020ರ ಬಳಿಕ ಅವಧಿ ಮುಗಿದಿರುವ ಹಾಗೂ ಕೊರೊನಾ ಲಾಕ್ಡೌನ್ ಕಾರಣವಾಗಿ ಈ ದಾಖಲೆಗಳನ್ನು ನವೀಕರಣಗೊಳಿಸಲು ಸಾಧ್ಯವಾಗಿರದ ದಾಖಲೆಗಳನ್ನು ಜೂನ್ 30ರವರೆಗೂ ಅವಧಿ ವಿಸ್ತರಣೆ ಮಾಡಲು ಸೂಚಿಸಿದೆ.

"ಸಾರ್ವಜನಿಕರಿಗ ತೊಂದರೆಯಾಗಬಾರದು"
ವಾಹನಕ್ಕೆ ಸಂಬಂಧಿಸಿದ ದಾಖಲೆಗಳ ಅವಧಿಯನ್ನು ವಿಸ್ತರಿಸಲಾಗಿದ್ದು, ಸಾರಿಗೆ ಸಂಬಂಧ ಸೇವೆಗಳಲ್ಲಿ ವ್ಯತ್ಯಯವಾಗಬಾರದು. ಇದರಿಂದ ಸಾರ್ವಜನಿಕರಿಗೆ, ಸಾರಿಗೆ ಸೇವೆ ಸಲ್ಲಿಸುವವರಿಗೆ ಯಾವುದೇ ಸಮಸ್ಯೆಯಾಗಬಾರದು ಎಂದು ಹೇಳಲಾಗಿದೆ. ಇದೇ ಕೊನೆ ನಿರ್ದೇಶನ ಎಂದೂ ಸಚಿವಾಲಯ ತಿಳಿಸಿದೆ.

ಲಾಕ್ಡೌನ್ ನಂತರ ಹಲವು ಬಾರಿ ನಿರ್ದೇಶನ
ಮಾರ್ಚ್ 24, 2020ರ ಬಳಿಕ ಕೊರೊನಾ ಕಾರಣದಿಂದಾಗಿ ದೇಶಾದ್ಯಂತ ಲಾಕ್ಡೌನ್ ಘೋಷಿಸಿದ್ದು, ಅತ್ಯವಶ್ಯಕ ಸರಕು ಹಾಗೂ ಸೇವೆ ಒದಗಿಸುವ ಉದ್ದೇಶದಿಂದ ರಸ್ತೆ ಮತ್ತು ಸಾರಿಗೆ ಸಚಿವಾಲಯ ಹಲವು ಬಾರಿ ನಿರ್ದೇಶನಗಳನ್ನು ಜಾರಿಗೊಳಿಸಿತ್ತು. ಫೆಬ್ರವರಿ 2020ರಲ್ಲಿ ಎಲ್ಲಾ ದಾಖಲೆಗಳನ್ನು ಮಾರ್ಚ್ 31, 2021 ರವರೆಗೆ ವಿಸ್ತರಿಸಿತ್ತು. ಇದೀಗ ಮತ್ತೆ ಅವಧಿ ವಿಸ್ತರಣೆ ಮಾಡಲಾಗಿದೆ.

ನಾಗರಿಕರಿಗೆ ಅನುಕೂಲವಾಗಲು ಈ ಕ್ರಮ
ದೇಶದಲ್ಲಿ ಕೊರೊನಾ ಎರಡನೇ ಅಲೆ ಸೃಷ್ಟಿಯಾಗಿರುವುದನ್ನು ಗಮನದಲ್ಲಿಟ್ಟುಕೊಂಡು ಮತ್ತೆ ಈ ಮಾನ್ಯತೆಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ. ದೇಶಾದ್ಯಂತ ಲಾಕ್ಡೌನ್ ಇದ್ದ ಕಾರಣ ಬಹುತೇಕ ಸರ್ಕಾರಿ ಕಚೇರಿಗಳ ಕಾರ್ಯ ಸ್ಥಗಿತವಾಗಿತ್ತು. ಸಂಚಾರ ಇಲಾಖೆಯೂ ಸಂಪೂರ್ಣ ಬಂದ್ ಆಗಿದ್ದು, ಡಿಎಲ್, ಎಲ್ಎಲ್ ಪ್ರಕ್ರಿಯೆ ಮಾಡದಿರಲು ನಿರ್ಧರಿಸಲಾಗಿತ್ತು. ಮೋಟಾರು ವಾಹನ ಕಾಯ್ದೆ ಮತ್ತು ಕೇಂದ್ರ ಮೋಟಾರು ವಾಹನಗಳ ನಿಯಮಗಳಿಗೆ ಸಂಬಂಧಿಸಿದ ನಾಗರಿಕರಿಗೆ ಅನುಕೂಲವಾಗುವಂತೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ












Click it and Unblock the Notifications