ವಿಡಿಯೋ: ಆಂಧ್ರದಲ್ಲಿ ವಾಹನ ಪಲ್ಟಿ, ಏಳು ಬಾಕ್ಸ್ನಲ್ಲಿ 7 ಕೋಟಿ ಪತ್ತೆ
ಅಮರಾವತಿ, ಮೇ 11: ಆಂಧ್ರ ಪ್ರದೇಶದಲ್ಲಿ ಲಾರಿಯೊಂದು ಡಿಕ್ಕಿಯಾಗಿ ವಾಹನ ಪಲ್ಟಿಯಾಗಿದೆ. ಇದನ್ನು ನೋಡಿದ ಅಧಿಕಾರಿಗಳು, ಪೊಲೀಸರು ಬೆಚ್ಚಿ ಬಿದ್ದಿದ್ದಾರೆ. ವಾಹನದಲ್ಲಿದ್ದ ಬಾಕ್ಸ್ಗಳಲ್ಲಿ ಕೋಟ್ಯಾಂತರ ರೂಪಾಯಿ ಹಣ ಪತ್ತೆಯಾಗಿದೆ. ಮೇ 14ರಂದು ಆಂಧ್ರ ಪ್ರದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಮತದಾನ ನಡೆಯಲಿದೆ.
ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಲಾರಿಯೊಂದು ಡಿಕ್ಕಿಯಾಗಿ ವಾಹನ ಪಲ್ಟಿಯಾಗಿದ್ದು, ಅದರಲ್ಲಿದ್ದ 7 ಬಾಕ್ಸ್ಗಳಲ್ಲಿ 7 ಕೋಟಿ ರೂ. ಹಣ ಪತ್ತೆಯಾಗಿದೆ. ಅಧಿಕಾರಿಗಳು ಹಣವನ್ನು ಎಣಿಕೆ ಮಾಡಲು ಕೂಡಿಸಿ ಇಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅನಂತಪಲ್ಲಿ ಎಂಬಲ್ಲಿ ವಾಹನ ಲಾರಿ ಡಿಕ್ಕಿಯಾಗಿ ಪಲ್ಟಿಯಾಗಿದೆ. ವಾಹನದಲ್ಲಿ 7 ಕಾಗದದ ಬಾಕ್ಸ್ಗಳು ಪತ್ತೆಯಾಗಿವೆ. ಬಾಕ್ಸ್ನಲ್ಲಿ ಹಣ ನೋಡಿದ ಜನರು ಈ ಅಪಘಾತದ ಕುರಿತು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ತಕ್ಷಣ ಚುನಾವಣಾಧಿಕಾರಿಗಳಿಗೆ ಮಾಹಿತಿ ಕೊಟ್ಟರು.
ವಿಜಯವಾಡದಿಂದ ವಿಖಾಖಪಟ್ಟಣಂಗೆ ವಾಹನ ಸಂಚಾರ ನಡೆಸುತ್ತಿತ್ತು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಲಾರಿ ಗುದ್ದಿ ವಾಹನ ಪಲ್ಟಿಯಾದ ಪರಿಣಾಮ ವಾಹನದ ಚಾಲಕನಿಗೆ ಗಾಯಗಳಾಗಿವೆ. ಆತನನ್ನು ಗೋಪಾಲಪುರಂ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪೊಲೀಸ್ ಭದ್ರತೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಡಿಯೋ ವೈರಲ್
#WATCH | Andhra Pradesh: Rs 7 Crores cash, kept in seven boxes, seized in East Godavari district.
— ANI (@ANI) May 11, 2024
A vehicle had overturned after being hit by a lorry at Anantapally in Nallajarla Mandal. Locals noticed that 7 cardboard boxes, containing cash, were being transferred in that… pic.twitter.com/KbQmb5M175
ಆಂಧ್ರ ಪ್ರದೇಶದ 175 ವಿಧಾನಸಭಾ ಕ್ಷೇತ್ರ, 25 ಲೋಕಸಭಾ ಕ್ಷೇತ್ರಕ್ಕೆ ಮೇ 13ರಂದು ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಪೊಲೀಸರು ವಾಹನದಲ್ಲಿ ಹಣ ಪತ್ತೆಯಾದ ಬಳಿಕ ಈ ಕುರಿತು ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಿದರು. ಸದ್ಯ ಹಣ ಅಧಿಕಾರಿಗಳ ವಶದಲ್ಲಿದೆ.
ಚಾಲಕನ ಚಿಕಿತ್ಸೆ ಮುಗಿದ ಬಳಿಕ ಪೊಲೀಸರು ವಿಚಾರಣೆ ಆರಂಭಿಸಲಿದ್ದು, ಹಣವನ್ನು ಎಲ್ಲಿಂದ ಸಾಗಾಟ ಮಾಡಲಾಗುತ್ತಿತ್ತು? ಮತ್ತು ಯಾರಿಗೆ ಸೇರಿದ್ದು? ಎಂಬ ವಿವರ ಪಡೆಯಲಿದ್ದಾರೆ.
ಸರ್ಕಾರಕ್ಕೆ ನಿರ್ಬಂಧ: ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಹೈಕೋರ್ಟ್ ವೈಎಸ್ಆರ್ ಕಾಂಗ್ರೆಸ್ ಸರ್ಕಾರ ಮೇ 13ರ ತನಕ ಸರ್ಕಾರದ ಯೋಜನೆಗಳ ಫಲಾನುಭವಿಗಳ ಖಾತೆಗೆ ಹಣವನ್ನು ವರ್ಗಾವಣೆ ಮಾಡುವುದಕ್ಕೆ ತಡೆ ನೀಡಿದೆ.
ಆಂಧ್ರ ಪ್ರದೇಶದ ವಿವಿಧ ಯೋಜನೆಗಳ ಫಲಾನುಭವಿ ವಿದ್ಯಾರ್ಥಿಗಳ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ. ಚುನಾವಣೆಗೆ 72 ಗಂಟೆಗಳ ಮೊದಲು ಯಾವುದೇ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುವಂತಿಲ್ಲ ಎಂದು ಆದೇಶಿಸಿದೆ.
ಆಂಧ್ರ ಪ್ರದೇಶದ ವಿರೋಧ ಪಕ್ಷಗಳು ಲೋಕಸಭೆ ಚುನಾವಣೆ, ವಿಧಾನಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಸಹ ಸರ್ಕಾರ ವಿವಿಧ ಯೋಜನೆ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುತ್ತಿರುವ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರವನ್ನು ಬರೆದಿದ್ದವು. ಇದನ್ನು ತಕ್ಷಣ ನಿಲ್ಲಿಸುವಂತೆ ನಿರ್ದೇಶನ ನೀಡುವಂತೆ ಕೋರಿದ್ದವು.
ಮಂಗಳವಾರ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿ ಚಂದ್ರಬಾಬು ನಾಯ್ಡು ಮತ್ತು ಬಿಜೆಪಿ ಮೈತ್ರಿಕೂಟ ಫಲಾನುಭವಿಗಳ ಖಾತೆಗೆ ಹಣ ಹಾಕುವುದನ್ನು ತಡೆಯಲು ಪ್ರಯತ್ನ ನಡೆಸಲಾಗುತ್ತಿದೆ. ಕೇಂದ್ರ ಸ ಸರ್ಕಾರವನ್ನು ಇದಕ್ಕಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದರು.
ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ದು ನೇತೃತ್ವದ ಟಿಡಿಪಿ, ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡು ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಎದುರಿಸುತ್ತಿವೆ. ಮೂರು ಪಕ್ಷಗಳಿಗೂ ಜಗನ್ ಮೋಹನ್ ರೆಡ್ಡಿ ಎದುರಾಳಿ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications