ದಸರಾ ನಂತರ ಜಯಾಗೆ ಅಕ್ರಮ ಆಸ್ತಿ ಕಂಟಕ ಶುರು
ಬೆಂಗಳೂರು, ಅಕ್ಟೋಬರ್ 07: ತಮಿಳುನಾಡಿನ ಜನತೆ ಪಾಲಿಗೆ 'ಅಮ್ಮ' ಎನಿಸಿರುವ ಜೆ. ಜಯಲಲಿತಾ ಅವರ ಮೇಲಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ. ದಸರಾ ರಜೆ ಮುಗಿದ ಬಳಿಕ ಅಕ್ಟೋಬರ್ 15ರಿಂದ ಈ ಪ್ರಕರಣದ ವಿಚಾರಣೆ, ತೀರ್ಪು ಹೊರಬೀಳಲಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಾ ಅವರ ವಿರುದ್ಧ ಆರೋಪ ಸಾಬೀತಾಗಿ ಅಪರಾಧಿ ಎನಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ನಂತರ ಜಾಮೀನು ಪಡೆದು ಚೆನ್ನೈ ತೆರಳಿ ಮತ್ತೊಮ್ಮೆ ಸಿಎಂ ಆಗಿ ಅಧಿಕಾರ ಮುಂದುವರೆಸಿದ್ದರು. ಈಗ ಅನಾರೋಗ್ಯ ಪೀಡಿತರಾಗಿ ಅಪೊಲೋ ಆಸ್ಪತ್ರೆ ಸೇರಿ, ಚಿಕಿತ್ಸೆ ಪಡೆಯುತ್ತಿದ್ದಾರೆ. [ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಟೈಮ್ ಲೈನ್]

ಕೋರ್ಟಿಗೆ ರಜೆ: ಸುಪ್ರೀಂಕೋರ್ಟಿಗೆ ಅಕ್ಟೋಬರ್ 10 ರಿಂದ 15ರ ತನಕ ದಸರಾ ರಜೆ ಇರುವುದರಿಂದ ವಿಚಾರಣೆಯನ್ನು ಅಕ್ಟೋಬರ್ 17ರಂದು ನಡೆಸುವ ಸಾಧ್ಯತೆಯಿದೆ. ಅಕ್ಟೋಬರ್ 7ರಂದೇ ಈ ಪ್ರಕರಣದ ತೀರ್ಪು ಹೊರ ಬೀಳುವ ನಿರೀಕ್ಷೆಯಿತ್ತು. ಆದರೆ, ಜಸ್ಟೀಸ್ ಪಿಸಿ ಘೋಸೆ ಹಾಗೂ ಅಮಿತವ ರಾಯ್ ಅವರಿರುವ ನ್ಯಾಯಪೀಠ ರಜೆಯಲ್ಲಿದೆ.
ತೀರ್ಪು ಯಾವಾಗ: ರಜೆ ಪೀಠದಲ್ಲಿ ಒಂದು ವೇಳೆ ವಿಚಾರಣೆ ಕೈಗೆತ್ತಿಕೊಂಡರೂ, ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ ಕಡಿಮೆಯಿದೆ. ವಿಶೇಷ ನ್ಯಾಯಪೀಠ ಮತ್ತೊಮ್ಮೆ ಚಾಲನೆ ಪಡೆದಾಗ ಮಾತ್ರ ಅಂತಿಮ ತೀರ್ಪು ನಿರೀಕ್ಷಿಸಬಹುದು.ಜೂನ್ 8, 2016ರಂದು ವಿಚಾರಣೆ ಬಳಿಕ ತೀರ್ಪನ್ನು ಕಾಯ್ದಿರಿಸಿದ್ದ ನ್ಯಾಯಪೀಠ ಒಂದು ತಿಂಗಳೊಳಗೆ ತೀರ್ಪು ನೀಡುವ ಸೂಚನೆ ನೀಡಿತ್ತು.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೆ ಜಯಲಿತಾ ಅವರಿಗೆ ಜಾಮೀನು ಸಿಕ್ಕಿರುವುದನ್ನು ಪ್ರಶ್ನಿಸಿ ಕರ್ನಾಟಕ ಅರ್ಜಿ ಸಲ್ಲಿಸಿದೆ. ಜೆ ಜಯಲಲಿತಾ, ಶಶಿಕಲಾ ನಟರಾಜನ್, ಇಳವರಸಿ ಹಾಗೂ ಸುಧಾಕರಣ್ ಅವರನ್ನು ಅಪರಾಧಿ ಎಂದು ಕೆಳಹಂತದ ನ್ಯಾಯಲಯ ಘೋಷಿಸಿದೆ. ಈ ಬಗ್ಗೆ ಹೈಕೋರ್ಟಿನಲ್ಲಿ ಅಪೀಲ್ ಹಾಕಿದ ಬಳಿಕ ಎಲ್ಲರಿಗೂ ನೆಮ್ಮದಿ ಸಿಕ್ಕಿತ್ತು. ಈಗ ಪ್ರಕರಣ ಸುಪ್ರೀಂಕೋರ್ಟಿನಲ್ಲಿದ್ದು ,ತೀರ್ಪು ಹೊರ ಬೀಳಬೇಕಿದೆ.(ಒನ್ಇಂಡಿಯಾ ಸುದ್ದಿ)
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications