ಆರ್ಟಿಕಲ್ 370 ರದ್ದು: ಇದು ನಮ್ಮ ಸೋಲಲ್ಲ, ಭಾರತದ ಕಲ್ಪನೆಯ ಸೋಲು: ಮೆಹಬೂಬಾ ಮುಫ್ತಿ
ಕಾಶ್ಮೀರ, ಡಿಸೆಂಬರ್ 11: ಆರ್ಟಿಕಲ್ 370 ರದ್ಧತಿ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪಿನಿಂದ ನಾವು ನಿರಾಶರಾಗಬಾರದು. ಜಮ್ಮು& ಕಾಶ್ಮೀರ ಹಲವಾರು ಏಳುಬೀಳುಗಳನ್ನು ಕಂಡಿದೆ. 370 ನೇ ವಿಧಿಯು ತಾತ್ಕಾಲಿಕ ನಿಬಂಧನೆಯಾಗಿದೆ ಎಂದು ಹೇಳುವ ತೀರ್ಪು ನಮ್ಮ ಸೋಲಲ್ಲ. ಆದರೆ ಇದು ಭಾರತದ ಕಲ್ಪನೆಯ ಸೋಲು ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ.
ನಿಮ್ಮಲ್ಲಿ ಅನೇಕರು ಈ ತೀರ್ಪು ಸಂಭ್ರಮಿಸುತ್ತಿದ್ದೀರಿ ಎಂದು ನಾನು ದೇಶದ ಜನರಿಗೆ ಹೇಳಲು ಬಯಸುತ್ತೇನೆ. ಇಂದು ಜಮ್ಮು & ಕಾಶ್ಮೀರ ಜೈಲಾಗಿ ಪರಿವರ್ತನೆಯಾಗಿದೆ. ಎಲ್ಲಾ ಅಂಗಡಿಯವರಿಗೆ ಬೆಳಿಗ್ಗೆ 10 ಗಂಟೆಯ ಮೊದಲು ತಮ್ಮ ಅಂಗಡಿಗಳನ್ನು ತೆರೆಯದಂತೆ ನಿರ್ದೇಶನ ನೀಡಲಾಗಿದೆ. ನಮ್ಮನ್ನು ಗೃಹಬಂಧನದಲ್ಲಿ ಇಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದು ಯುಗಯುಗಾಂತರಗಳಿಂದ ನಡೆಯುತ್ತಿರುವ ರಾಜಕೀಯ ಸಮರವಾಗಿದ್ದು, ಇದಕ್ಕಾಗಿ ಸಾಕಷ್ಟು ಮಂದಿ ಪ್ರಾಣ ತ್ಯಾಗ ಮಾಡಿದ್ದಾರೆ. ಇದನ್ನು ಬಿಡುವುದಿಲ್ಲ, ಒಗ್ಗೂಡಿ ಹೋರಾಟ ಮಾಡಬೇಕು ಎಂದು ಹೇಳಿದ್ದಾರೆ.
ಸುಪ್ರೀಂ ಕೋರ್ಟ್ನ ತೀರ್ಪಿಗೆ ಪ್ರತಿಕ್ರಿಯಿಸಿರುವ ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರು ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ, ಈ ನಿರ್ಧಾರದಿಂದ ನಿರಾಶೆಗೊಂಡಿದ್ದೇನೆ. ಆದರೆ ಅವರು ಭರವಸೆಯನ್ನು ಕಳೆದುಕೊಂಡಿಲ್ಲ ಮತ್ತು ಹೋರಾಟವನ್ನು ಮುಂದುವರೆಸುತ್ತೇವೆ ಎಂದು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದೆ. ರಾಜ್ಯದ ಪರವಾಗಿ ಕೇಂದ್ರವು ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವನ್ನು ಕಾನೂನಿಗೆ ಸವಾಲು ಹಾಕಲಾಗುವುದಿಲ್ಲ ಎಂದು ಹೇಳಿದೆ.
ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಕಾನ್ಫರೆನ್ಸ್ ಮುಖ್ಯಸ್ಥ ಸಜಾದ್ ಲೋನ್ ಅವರು ಸುಪ್ರೀಂ ಕೋರ್ಟ್ನ ತೀರ್ಪಿನ ಬಗ್ಗೆ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ. ಎಕ್ಸ್ನಲ್ಲಿ ಅವರು, ಆರ್ಟಿಕಲ್ 370 ರ ಸುಪ್ರೀಂ ಕೋರ್ಟ್ ತೀರ್ಪು ನಿರಾಶಾದಾಯಕವಾಗಿದೆ. ನ್ಯಾಯವು ಮತ್ತೊಮ್ಮೆ ಜಮ್ಮು ಮತ್ತು ಕಾಶ್ಮೀರ ಜನರನ್ನು ತಪ್ಪುತ್ತಿದೆ. ಆರ್ಟಿಕಲ್ 370 ಕಾನೂನುಬದ್ಧವಾಗಿರಬಹುದು. ಆದರೆ ಯಾವಾಗಲೂ ನಮ್ಮ ರಾಜಕೀಯ ಆಕಾಂಕ್ಷೆಗಳ ಭಾಗವಾಗಿ ಉಳಿಯುತ್ತದೆ ಎಂದು ಹೇಳಿದ್ದಾರೆ.
ರಾಜ್ಯತ್ವದ ವಿಷಯದಲ್ಲಿ ಸುಪ್ರೀಂ ಕೋರ್ಟ್ ಅದರ ಬಗ್ಗೆ ಕಾಮೆಂಟ್ ಮಾಡುವುದನ್ನು ಸಹ ಬದಿಗೊತ್ತಿದೆ. ಹೀಗಾಗಿ ಇಡೀ ದೇಶದ ಆದ್ಯತೆಯನ್ನು ಉಲ್ಲೇಖಿಸುವ ಮೂಲಕ ಭವಿಷ್ಯದ ದುರುಪಯೋಗದಿಂದ ರಕ್ಷಿಸುತ್ತದೆ. ಆದರೂ ಅದೇ ದುರುಪಯೋಗವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಸೂಕ್ಷ್ಮವಾಗಿ ಅನುಮೋದಿಸಲಾಗಿದೆ. ನಾವು ಆಶಿಸೋಣ. ಭವಿಷ್ಯದಲ್ಲಿ ನ್ಯಾಯ ತನ್ನ ನಿದ್ದೆಯಿಂದ ಎಚ್ಚರಗೊಳ್ಳಬಹುದು ಎಂದು ಹೇಳಿದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications