ಡಿಸೆಂಬರ್ 6 ಶೌರ್ಯ ದಿನವನ್ನಾಗಿ ಆಚರಿಸಲು ವಿಹಿಂಪ ಕರೆ
ಲಖನೌ, ಡಿಸೆಂಬರ್ 05 : ಡಿಸೆಂಬರ್ 06 ಅನ್ನು ಸಂಭ್ರಮ, ಸಡಗರದಿಂದ ಆಚರಿಸುವಂತೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ.
ಬಾಬ್ರಿ ಮಸೀದಿ ಧ್ವಂಸಗೊಳಿಸಿ ಡಿಸೆಂಬರ್ 06ಕ್ಕೆ 25 ವರ್ಷ ಪೂರ್ಣವಾಗುತ್ತಿರುವ ಕಾರಣ ಆ ದಿನವನ್ನು 'ಶೌರ್ಯ ದಿನ'ವನ್ನಾಗಿ ಆಚರಿಸುವಂತೆ ವಿಶ್ವ ಹಿಂದೂ ಪರಿಷತ್ ಹಾಗೂ ಅದರ ಸೋದರ ಸಂಸ್ಥೆಯಾದ ಭಜರಂಗದಳ ಕರೆ ನೀಡಿವೆ.
ಅಯೋಧ್ಯೆಯ ಜನ ಅಂದು ಮನೆಗಳಲ್ಲಿ ದೀಪಗಳನ್ನು ಹೊತ್ತಿಸಿ ರಾಮಮಂದಿರ ಕಟ್ಟಿಯೇ ತೀರುವುದಾಗಿ ಶಪಥ ಮಾಡಿ ಎಂದು ವಿಹಿಂಪ ಕರೆ ನೀಡಿದೆ. ಭಜರಂಗ ದಳವು, ಅಂದು ಪಂಜಿನ ಮೆರವಣಿಗೆ ಮಾಡುವಂತೆ ತನ್ನ ಕಾರ್ಯಕರ್ತರಿಗೆ ಸೂಚಿಸಿದೆ.

ಡಿಸೆಂಬರ್ 06ರಂದು ಅಯೋದ್ಯೆಯ ಮನೆಗಳು, ದೇವಾಲಯಗಳಲ್ಲಿ ದೀಪ ಹೊತ್ತಿಸಿ ರಾಮಮಂದಿರ ನಿರ್ಮಾಣಕ್ಕೆ ಪ್ರತಿಜ್ಞೆ ಸ್ವೀಕರಿಸಲಾಗುವುದು ಹಾಗೂ ಅಂದಿನ ದಿನ ರಾಜ್ಯದ ಅನೇಕ ಕಡೆ ಸಭೆಗಳನ್ನೂ ನಡೆಸಲಾಗುವುದು ಎಂದು ಅಯೋಧ್ಯೆಯ ವಿಹಿಂಪ ಮುಖಂಡ ಶರದ್ ಶರ್ಮಾ ಹೇಳಿದ್ದಾರೆ.
ಮತ್ತೊಂದು ಕಡೆ ಭಜರಂಗ ದಳದ ರಾಷ್ಟ್ರೀಯ ಸಂಘಟಕ ಮನೋಜ್ ವರ್ಮಾ ಮಾತನಾಡಿ "ಭಜರಂಗ ದಳ ಕಾರ್ಯಕರ್ತರು ರಾಜ್ಯದೆಲ್ಲೆಡೆ ಪಂಜಿನ ಮೆರವಣಿಗೆ ಮಾಡಲಿದ್ದಾರೆ, ಹಾಗೂ ಬಾಬ್ರಿ ಮಸೀದಿಯ ಧ್ವಂಸದ ರೊಚಕ ಘಟನೆಗಳನ್ನು ಸ್ಥಳೀಯರಿಗೆ ವಿವರಿಸುವ ಸಭೆಗಳನ್ನು ನಡೆಸಲಿದ್ದಾರೆ' ಎಂದರು.
ಅಯೋಧ್ಯೆಯ ಮುಸ್ಲಿಂ ಸಮುದಾಯದ ಸಂಘದವರು ಡಿಸೆಂಬರ್ 6 ಅನ್ನು ಯೆಮನ್-ಇ-ಘಮ್ (ನೋವಿನ ದಿನ), ಮತ್ತು ಯೆಮನ್-ಇ-ಸ್ಯಾಹ್ (ಕಪ್ಪು ದಿನ)ವನ್ನಾಗಿ ಆಚರಿಸುತ್ತಿದ್ದಾರೆ.
ಅಯೋಧ್ಯೆ ರಾಮಮಂದಿರ ಪ್ರಕರಣ ಡಿಸೆಂಬರ್ 05ಕ್ಕೆ ಮಂಗಳವಾರ ಅಂತಿಮ ವಿಚಾರಣೆ ನಡೆಯಿತು. ಅಗತ್ಯ ದಾಖಲೆಗಳ ತರ್ಜುಮೆ ಕೆಲಸಕ್ಕೆ ಹೆಚ್ಚಿನ ಕಾಲಾವಕಾಶ ನೀಡಬೇಕೆಂದು ಸುನ್ನಿ ಮುಸ್ಲಿಂ ಪಂಗಡದವರು ಕೋರಿದ ಕಾರಣ ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 08, 2018ಕ್ಕೆ ಮುಂದೂಡಲಾಗಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications