ವಿಡಿಯೋ: ಸೂರತ್ನ ಈಜುಕೊಳದಲ್ಲಿ ದಾಂಡಿಯಾ ಆಡುವ ಮೂಲಕ ನವರಾತ್ರಿ ಆಚರಣೆ
ಸೂರತ್ ಅಕ್ಟೋಬರ್ 3: 9 ದಿನಗಳ ಕಾಲ ನಡೆಯುವ ನವರಾತ್ರಿ ಉತ್ಸವ ಕೊನೆಯ ಹಂತಕ್ಕೆ ಕಾಲಿಡುತ್ತಿದ್ದಂತೆ ಹಬ್ಬದ ಉತ್ಸಾಹ ಉತ್ತುಂಗಕ್ಕೇರಿದೆ. ಜನರು ಪೂರ್ಣ ಉತ್ಸಾಹದಿಂದ ನವರಾತ್ರಿಯನ್ನು ಆನಂದಿಸುತ್ತಿದ್ದಾರೆ. ಮಕ್ಕಳು, ಯುವಕರು, ಹಿರಿಯರು ಎಲ್ಲರೂ ದಾಂಡಿಯಾ ಆಡುವ ಮೂಲಕ ಹಳೆಯ ಸಂಪ್ರದಾಯವನ್ನು ಆನಂದಿಸುತ್ತಾರೆ.
ಈ ಸಂದರ್ಭದಲ್ಲಿ ಆಧುನಿಕ ಹೌಸಿಂಗ್ ಸೊಸೈಟಿಗಳು ಮತ್ತು ವೃತ್ತಿಪರ ಕಾರ್ಯಕ್ರಮ ಸಂಘಟಕರು ಉತ್ಸವದಲ್ಲಿ ಮೆಗಾ ನೃತ್ಯ ಕಾರ್ಯಕ್ರಮಗಳನ್ನು ನಡೆಸುತ್ತಾರೆ. ಸಾಂಪ್ರದಾಯಿಕ ನೃತ್ಯಕ್ಕೆ ಕೆಲವು ವಿನೋದವನ್ನು ಸೇರಿಸುವ ಉದ್ದೇಶದಿಂದ ಅವರು ನೃತ್ಯ ಪ್ರದರ್ಶನದೊಂದಿಗೆ ಕೆಲವು ಆಟಗಳನ್ನೂ ಆಡಿಸುತ್ತಾರೆ.
ಗುಜರಾತ್ನ ಸೂರತ್ನಲ್ಲಿರುವ ಈಜುಕೊಳದಲ್ಲಿ ಜನರ ಗುಂಪೊಂದು ದಾಂಡಿಯಾ ಆಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ನಿಜಕ್ಕೂ ವಿಶಿಷ್ಟವಾಗಿದೆ. ಏಕೆಂದರೆ ನಾವು ಈಗಿನಂತೆ ಜನರು ವೇದಿಕೆಯಲ್ಲಿ ಅಥವಾ ತೆರೆದ ಮೈದಾನದಲ್ಲಿ ಹಬ್ಬವನ್ನು ಆನಂದಿಸುವುದನ್ನು ನೋಡಿದ್ದೇವೆ. ಆದರೆ ಈಗ ಅದು ಸಾಂಪ್ರದಾಯಿಕ ವಿಧಾನವನ್ನು ಮುರಿದು ಈಜುಕೊಳವನ್ನು ಪ್ರವೇಶಿಸಿತು.
|
ಮಹಾಗೌರಿಯ ಪೂಜೆಯ ಸಂಭ್ರಮದಲ್ಲಿ ಸೂರತ್
ಇಂದು ದುರ್ಗಾ ಅಷ್ಟಮಿ, ಭಕ್ತರು ದುರ್ಗಾ ಮಾತೆ ಮಾ ಮಹಾಗೌರಿ ಎಂಟನೇ ರೂಪವನ್ನು ಆಚರಿಸಲು ಉತ್ಸಾಹದಲ್ಲಿದ್ದಾರೆ. ಪುರಾಣದ ಪ್ರಕಾರ, ಪಾರ್ವತಿ ದೇವಿಯು ಶಿವನನ್ನು ತನ್ನ ಪತಿಯಾಗಿ ಪಡೆಯಲು ತಪಸ್ಸು ಮಾಡಬೇಕಾಗಿತ್ತು. ಹಾಗೆ ಮಾಡುವಾಗ, ಅವಳು ಎಲೆಗಳ ಮೇಲೆ ಬದುಕುವುದು. ಕಾಡುಗಳಲ್ಲಿ ಉಳಿಯುವುದು ಮತ್ತು ಅಂತಹ ಪರಿಸ್ಥಿತಿಗಳಿಂದಾಗಿ ಅವಳ ಮೈಬಣ್ಣ ಕಪ್ಪಾಗುವುದು ಮುಂತಾದ ಕಷ್ಟಗಳನ್ನು ಎದುರಿಸಬೇಕಾಯಿತು. ನಂತರ, ಶಿವನು ಅವಳನ್ನು ತನ್ನ ಹೆಂಡತಿಯಾಗಿ ಸ್ವೀಕರಿಸಿದಾಗ, ಅವನು ಅವಳನ್ನು ಗಂಗಾನದಿಯ ನೀರಿನಿಂದ ಸ್ನಾನ ಮಾಡಿಸಿದನು. ಅದು ಅವಳ ಮೈಬಣ್ಣವನ್ನು ಬದಲಾಯಿಸಿತು. ಆಗ ಆಕೆ ಸುಂದರವಾದಳು. ಆದ್ದರಿಂದಲೇ ಆಕೆಯನ್ನು ಮಹಾಗೌರಿ ಎಂದು ಕರೆಯುತ್ತಾರೆ.

3,400 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಯೋಜನೆಗಳ ಶಂಕುಸ್ಥಾಪನೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 29ರಂದು ಸೂರತ್ನಲ್ಲಿ ₹3,400 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದರು. ಜೊತೆಗೆ ಪ್ರಧಾನಮಂತ್ರಿಯವರು ರಸ್ತೆ ಮೂಲಸೌಕರ್ಯ ಕಾಮಗಾರಿಗಳ ಹಂತ-1 ಮತ್ತು ʻಡೈಮಂಡ್ ರಿಸರ್ಚ್ ಅಂಡ್ ಮರ್ಕೆಂಟೈಲ್ʼ (ಡ್ರೀಮ್) ನಗರದ ಮುಖ್ಯ ದ್ವಾರವನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ಯೋಜನೆಯ ಎರಡನೇ ಹಂತಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಇದಲ್ಲದೆ, ಡಾ. ಹೆಡ್ಗೆವಾರ್ ಸೇತುವೆಯಿಂದ ಭೀಮ್ರಾಡ್-ಬಾಮ್ರೋಲಿ ಸೇತುವೆಯವರೆಗೆ 87 ಹೆಕ್ಟೇರ್ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ಜೀವವೈವಿಧ್ಯ ಉದ್ಯಾನವನಕ್ಕೆ ಪ್ರಧಾನಮಂತ್ರಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ಸೂರತ್ನ ವಿಜ್ಞಾನ ಕೇಂದ್ರದಲ್ಲಿ ಖೋಜ್ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಿದರು.

ಪಾಕಪದ್ಧತಿಗೆ ಹೆಸರುವಾಸಿಯಾದ ನಾಡು ಸೂರತ್
ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನವರಾತ್ರಿಯ ಶುಭ ಸಂದರ್ಭದಲ್ಲಿ ಸೂರತ್ನಲ್ಲಿ ಅನೇಕ ಯೋಜನೆಗಳನ್ನು ಉದ್ಘಾಟಿಸುವ ಮತ್ತು ಮುಂಬರುವ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಅವಕಾಶ ದೊರೆತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಹಾಸ್ಯಮಿಶ್ರಿತ ಲಘು ಧಾಟಿಯಲ್ಲಿ ಸೂರತ್ನ ವಿಶೇಷತೆಯನ್ನು ಹೊಗಳಿದ ಪ್ರಧಾನಿಯವರು, ನವರಾತ್ರಿಯ ಉಪವಾಸ ಆಚರಿಸುತ್ತಿರುವ ತಮ್ಮಂತಹ ವ್ಯಕ್ತಿಯು ಇಂತಹ ಸಮಯದಲ್ಲಿ ಮಹಾನ್ ಪಾಕಪದ್ಧತಿಗೆ ಹೆಸರುವಾಸಿಯಾದ ನಾಡು ಸೂರತ್ಗೆ ಬರುವುದು ಸ್ವಲ್ಪ ಕಷ್ಟದ ಕೆಲಸವೇ ಎಂದು ಹೇಳಿದರು. 75 ಅಮೃತ್ ಸರೋವರಗಳ ಕಾಮಗಾರಿ ಭರದಿಂದ ಸಾಗುತ್ತಿರುವುದಕ್ಕೆ ಪ್ರಧಾನಮಂತ್ರಿಯವರು ಹರ್ಷ ವ್ಯಕ್ತಪಡಿಸಿದರು.
ಸೂರತ್ ನಗರವು ಜನರ ಒಗ್ಗಟ್ಟು ಮತ್ತು ಸಾರ್ವಜನಿಕ ಭಾಗವಹಿಸುವಿಕೆ ಎರಡಕ್ಕೂ ಒಂದು ಅದ್ಭುತ ಉದಾಹರಣೆಯಾಗಿದೆ ಎಂದು ಪ್ರಧಾನಿ ಶ್ಲಾಘಿಸಿದರು. ಸೂರತ್ನ ಅತಿ ದೊಡ್ಡ ಲಕ್ಷಣವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಇದು ಕಾರ್ಮಿಕರನ್ನು ಗೌರವಿಸುವ ನಗರವಾಗಿದೆ ಎಂದು ಹೇಳಿದರು. "ಇದೊಂದು ರೀತಿಯ ಮಿನಿ ಹಿಂದೂಸ್ತಾನ, ಭಾರತದ ಎಲ್ಲಾ ಮೂಲೆಗಳ ಜನರಿಗೂ ಸೂರತ್ ನೆಲೆ ಒದಗಿಸಿದೆ,ʼʼ ಎಂದು ಶ್ರೀ ಮೋದಿ ಹೇಳಿದರು. ಮಹಿಳೆಯರು ಬೆನ್ನಿಗೆ ಮೋದಿ ಟ್ಯಾಟೂ ಹಾಕಿಸಿಕೊಳ್ಳುವ ಮೂಲಕ ಸೂರತ್ಗೆ ಸ್ವಾಗತಿಸಿದರು.

ಗರ್ಬಾ ತರಗತಿಗಳಿಗೆ ಹಿಂದೂಯೇತರರಿಗೆ ಅವಕಾಶ ರದ್ದು
ಈ ಬಾರಿ ನವರಾತ್ರಿ ಆಚರಣೆಗೆ ಹಿಂದೂಗಳನ್ನು ಹೊರತುಪಡಿಸಿ ಹಿಂದೂಯೇತರರು ಗರ್ಬಾ ನೃತ್ಯದಲ್ಲಿ ಭಾಗವಹಿಸುತ್ತಿಲ್ಲ ಮತ್ತು ಗರ್ಬಾ ತರಗತಿಗಳಿಗೆ ಹಿಂದೂಯೇತರರನ್ನು ಸೇರಿಸಿಕೊಳ್ಳಬಾರದು ಎಂದು ನಿರ್ಬಂಧ ವಿಧಿಸಲಾಗಿದೆ. ಇತ್ತೀಚೆಗೆ ಗುಜರಾತ್ನಲ್ಲಿ ಲವ್ ಜಿಹಾದ್ ಸಾಕಷ್ಟು ಸದ್ದು ಮಾಡಿತ್ತು. ಇದೀಗ ನವರಾತ್ರಿ ಹಬ್ಬದ ಆಚರಣೆ ಹಾಗೂ ಗರ್ಬಾ ತರಗತಿಗಳ ಸಂಘಟಕರಿಗೆ ಕೆಲವು ಹಿಂದೂ ಸಂಘಟನೆಗಳು ಮತ್ತು ಸೂರತ್ನ ಬಿಜೆಪಿ ಕೌನ್ಸಿಲರ್ಗಳು ಬಹಿರಂಗವಾಗಿ ಎಚ್ಚರಿಕೆ ನೀಡಿದ್ದಾರೆ. ಈ ನಡುವೆ ಸೂರತ್ನ ಪ್ರತಿಷ್ಠಿತ ಖೋಡಲ್ಧಾಮ್ ಸಂಸ್ಥೆ ಕೂಡ ಗರ್ಬಾ ತರಗತಿಗಳಿಗೆ ಹಿಂದೂಯೇತರರಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದೆ. ಗರ್ಬಾ ಆಡುವವರ ಗುರುತಿನ ಚೀಟಿ ಪರಿಶೀಲಿಸಲಾಗುವುದು. ಅಲ್ಲದೇ, ನವರಾತ್ರಿ ಸಂದರ್ಭದಲ್ಲಿ ಹಿಂದೂ ಯುವತಿಯರು ಬೇರೆ ಯಾವುದೇ ಧರ್ಮದ ಯುವಕರನ್ನು ಭೇಟಿ ಆಗುವುದನ್ನು ತಡೆಯಲಾಗುತ್ತದೆ ಎಂದು ಸಂಸ್ಥೆಯ ಅಧ್ಯಕ್ಷ ಧಾರ್ಮಿಕ್ ಮಾಳವೀಯ ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications