ಲಿಫ್ಟ್ನಲ್ಲಿ ಬಾಲಕನಿಗೆ ಕಚ್ಚಿದ ನಾಯಿ: ವಿಡಿಯೋ ಸೆರೆ
ನೋಯ್ಡಾ ನವೆಂಬರ್ 16: ಯುಪಿಯ ಗ್ರೇಟರ್ ನೋಯ್ಡಾದ ಲಾ ರೆಸಿಡೆನ್ಶಿಯಾ ಹೌಸಿಂಗ್ ಸೊಸೈಟಿಯ ಲಿಫ್ಟ್ನಲ್ಲಿ ಮಂಗಳವಾರ ಬೆಳಿಗ್ಗೆ ನಾಯಿ ದಾಳಿಯ ಮತ್ತೊಂದು ಘಟನೆ ವರದಿಯಾಗಿದೆ. ಲಿಫ್ಟ್ನಲ್ಲಿ ಶಾಲಾ ಬಾಲಕನಿಗೆ ಸಾಕು ನಾಯಿಯೊಂದು ಕಚ್ಚಿದೆ. ಮಗು ಶಾಲೆಗೆ ತೆರಳಲು ತನ್ನ ತಾಯಿಯೊಂದಿಗೆ ಲಿಫ್ಟ್ನಲ್ಲಿತ್ತು. ಆಗ ವ್ಯಕ್ತಿಯೊಬ್ಬ ನಾಯಿಯೊಂದಿಗೆ ಲಿಫ್ಟ್ನಲ್ಲಿ ಪ್ರವೇಶಿಸುತ್ತಾನೆ. ಈ ವೇಳೆ ನಾಯಿ ಏಕಾಏಕಿ ಪುಟ್ಟ ಬಾಲಕನ ಮೇಲೆ ದಾಳಿ ಮಾಡಿದೆ. ಬಳಿಕ ಬಾಲಕನಿಗೆ ನಾಲ್ಕು ಚುಚ್ಚುಮದ್ದುಗಳನ್ನು ನೀಡಲಾಗಿದೆ.
ಕಟ್ಟಡದ ಲಿಫ್ಟ್ನಲ್ಲಿ ಈ ಘಟನೆ ನಡೆದಿದ್ದು, ದಾಳಿಯ ವಿಡಿಯೋ ಇದೀಗ ಆನ್ಲೈನ್ನಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಶಾಲಾ ಬಾಲಕ ಮತ್ತು ಅವನ ತಾಯಿ ಈಗಾಗಲೇ ಲಿಫ್ಟ್ನಲ್ಲಿ ಇರುತ್ತಾರೆ. ನಂತರ ಒಬ್ಬ ವ್ಯಕ್ತಿ ತನ್ನ ಸಾಕು ನಾಯಿಯೊಂದಿಗೆ ಲಿಫ್ಟ್ಗೆ ಪ್ರವೇಶಿಸುವುದನ್ನು ವಿಡಿಯೋದಲ್ಲಿ ನೋಡಬಹುದು. ಲಿಫ್ಟ್ ಪ್ರವೇಶಿಸಿದ ಕೆಲವೇ ಕ್ಷಣಗಳಲ್ಲಿ ನಾಯಿ ಮಗುವಿನ ಮೇಲೆ ದಾಳಿ ಮಾಡಿ ಕೈಗೆ ಕಚ್ಚಿದೆ.
ಮಗು ಮೇಲೆ ನಾಯಿ ದಾಳಿ ಬಳಿಕ ಮಗುವಿನ ತಾಯಿ ಸಾಕು ನಾಯಿ ಮಾಲೀಕರ ವಿರುದ್ಧ ಆಕ್ರೋಶಗೊಂಡಿದ್ದಾರೆ. "ನಾಯಿಗಳನ್ನು ಚಿಕ್ಕ ಮಕ್ಕಳಿರುವ ಜಾಗಕ್ಕೆ ತರಬಾರದು. ದಾರಿ ತಪ್ಪಿಯೂ ಅಪಾರ್ಟ್ಮೆಂಟ್ ಪ್ರವೇಶಿಸಲು ಬಿಡಬಾರದು' ಎಂದು ಬಾಲಕನ ತಾಯಿ ಒತ್ತಾಯಿಸಿದ್ದಾರೆ.

ನಾಯಿಗಳಿಂದ ಉಂಟಾಗುವ ಹಾವಳಿಯ ಪ್ರಕರಣಗಳು ಹೆಚ್ಚುತ್ತಿರುವ ನಡುವೆ ನೋಯ್ಡಾ ಪ್ರಾಧಿಕಾರವು ಇತ್ತೀಚೆಗೆ ಸಾಕುಪ್ರಾಣಿಗಳ ಬಗ್ಗೆ ನೀತಿಯನ್ನು ರೂಪಿಸಿದೆ. ಪ್ರಾಧಿಕಾರ ಹೊರಡಿಸಿರುವ ಮಾರ್ಗಸೂಚಿಗಳ ಪ್ರಕಾರ, ಸಾಕುಪ್ರಾಣಿಗಳ ಮಾಲೀಕರು ತಮ್ಮ ನಾಯಿ ಅಥವಾ ಬೆಕ್ಕುಗಳನ್ನು ಮುಂದಿನ ವರ್ಷ ಜನವರಿ 31 ರೊಳಗೆ ನೋಂದಾಯಿಸಿಕೊಳ್ಳಬೇಕು ಅಥವಾ ದಂಡವನ್ನು ಪಾವತಿಸಬೇಕಾಗುತ್ತದೆ. ಇದಲ್ಲದೆ ಸಾಕು ನಾಯಿ ಅಥವಾ ಬೆಕ್ಕುಗಳಿಂದ ಯಾವುದೇ ಅನಾಹುತ ಉಂಟಾದರೆ 10,000 ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ಹೇಳಿದೆ.
This morning at La Residentia Greater Noida West! When will dog parents learn to use a muzzle? #dogbite @noidapolice @Uppolice pic.twitter.com/flpYas5qMi
— UP-70 (@bakaitpandey) November 16, 2022
ನೋಯ್ಡಾದ ಹೊಸ ಪೆಟ್ ರೂಲ್ಸ್-
*ನೋಯ್ಡಾ ಪ್ರಾಧಿಕಾರದ ಹೊಸ ನೀತಿಯ ಪ್ರಕಾರ, ಸಾಕು ನಾಯಿಗಳು ಅಥವಾ ಬೆಕ್ಕುಗಳ ನೋಂದಣಿಯು ಜನವರಿ 31, 2023 ರ ಒಳಗೆ ಕಡ್ಡಾಯವಾಗಿದೆ. ನೋಂದಣಿಯಾಗದಿದ್ದಲ್ಲಿ ದಂಡವನ್ನು ವಿಧಿಸಲಾಗುತ್ತದೆ.
*ಅಹಿತಕರ ಘಟನೆಯ ಸಂದರ್ಭದಲ್ಲಿ ಸಾಕುಪ್ರಾಣಿಗಳ ಮಾಲೀಕರು ರೂ 10,000 ದಂಡವನ್ನು ಪಾವತಿಸಬೇಕಾಗುತ್ತದೆ. ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ (AWBI) ಮಾರ್ಗಸೂಚಿಗಳಿಗೆ ಅನುಗುಣವಾಗಿ ನೋಯ್ಡಾ ಪ್ರಾಧಿಕಾರದ 207 ನೇ ಮಂಡಳಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

*ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಪಡೆಯಲು ಸಾಕು ನಾಯಿಯ ಮಾಲೀಕರು ಮಾರ್ಚ್ 1, 2023 ರಿಂದ ರೂ 10,000 ದಂಡವನ್ನು ವಿಧಿಸುತ್ತಾರೆ.
*ಸಾಕು ನಾಯಿಗಳಿಗೆ ಕ್ರಿಮಿನಾಶಕ ಅಥವಾ ಆಂಟಿರೇಬಿಸ್ ಲಸಿಕೆಯನ್ನು ಕಡ್ಡಾಯಗೊಳಿಸಲಾಗಿದ್ದು, ಉಲ್ಲಂಘಿಸಿದರೆ ಪ್ರತಿ ತಿಂಗಳು 2000 ರೂಪಾಯಿ ದಂಡ ವಿಧಿಸಲು ಅವಕಾಶವಿದೆ.
*ನೋಯ್ಡಾ ಪ್ರದೇಶದಲ್ಲಿ ನಾಯಿ ಕಡಿತದ ಕುರಿತು ಹಲವು ದೂರುಗಳು ಮತ್ತು ವರದಿಗಳ ನಂತರ ನಿಯಮಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.
#उत्तरप्रदेश के #गाजियाबाद में महिला के पालतू #कुत्ते ने #लिफ्ट में मासूम बच्चे को काटा, कराहते बच्चे को देख भी नहीं पसीजा मालकिन का दिल। यह मामला #राजनगर एक्सटेंशन की चार्म्स काउंटी सुसाइटी का बताया जा रहा है। pic.twitter.com/e0CncT16l6
— Rahul Goel (@bulandrahul) September 6, 2022
ಈ ಹಿಂದೆ ಬಾಲಕನಿಗೆ ಲಿಫ್ಟ್ನಲ್ಲಿ ಕಚ್ಚಿದ ನಾಯಿ
ಸೆಪ್ಟೆಂಬರ್ 06ರಂದು ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯಲ್ಲಿ ಇಂಥಹದ್ದೇ ಘಟನೆ ನಡೆದಿತ್ತು. ಲಿಫ್ಟ್ನಲ್ಲಿದ್ದ ಮಗುವನ್ನು ನಾಯಿ ಕಚ್ಚಿತ್ತು. ನಾಯಿ ಮಾಲೀಕರಾದ ಮಹಿಳೆ ಮಗುವಿನ ಮೇಲೆ ನಾಯಿ ದಾಳಿ ಮಾಡಿದರೂ ಯಾವುದೇ ಪ್ರತಿಕ್ರಿಯೆ ಇಲ್ಲದೆ ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ನಾಯಿ ಕಚ್ಚಿದ್ದಕ್ಕಿಂತ ಮಹಿಳೆಯ ವರ್ತನೆಯಿಂದ ಜನ ಆಕ್ರೋಶ ಹೊರಹಾಕಿದ್ದರು.
09 ವರ್ಷದ ಬಾಲಕ ಟ್ಯೂಷನ್ ಮುಗಿಸಿಕೊಂಡು ಅಪಾರ್ಟ್ಮೆಂಟ್ ಲಿಫ್ಟ್ ನಿಂದ ಮನೆಗೆ ಮರಳುತ್ತಿದ್ದನು. ಅಷ್ಟರಲ್ಲಿ ಮಹಿಳೆಯೊಬ್ಬಳು ತನ್ನ ಮುದ್ದಿನ ನಾಯಿಯೊಂದಿಗೆ ಲಿಫ್ಟ್ಗೆ ಬರುತ್ತಾಳೆ. ಈ ವೇಳೆ ಏಕಾಏಕಿ ದಾಳಿ ಮಾಡಿದ ನಾಯಿ ಬಾಲಕನ ಸೊಂಟಕ್ಕೆ ಕಚ್ಚಿದೆ. ಅದರ ನಂತರ ಮಗು ನೋವಿನಿಂದ ನರಳಲು ಪ್ರಾರಂಭಿಸುತ್ತದೆ. ಆಶ್ಚರ್ಯದ ಸಂಗತಿಯೆಂದರೆ ಮಹಿಳೆ ಮಗುವಿನ ಯೋಗಕ್ಷೇಮದ ಬಗ್ಗೆ ಏನ್ನನ್ನೂ ಕೇಳಲಿಲ್ಲ ಮತ್ತು ಮೌನವಾಗಿ ಲಿಫ್ಟ್ನಿಂದ ಇಳಿದು ಹೋಗುತ್ತಾಳೆ. ಮಗುವಿನ ತಂದೆಯ ದೂರಿನ ಮೇರೆಗೆ ಪೊಲೀಸರು ಮಗುವಿನ ವೈದ್ಯಕೀಯ ಪರೀಕ್ಷೆಯ ನಂತರ ಎಫ್ಐಆರ್ ದಾಖಲಿಸಿದ್ದರು. ನಾಯಿ ಮಾಲೀಕರಾದ ಮಹಿಳೆಗೆ ಎಚ್ಚರಿಕೆ ಕೂಡ ನೀಡಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications