ರಾಹುಲ್ ಪಾದಯಾತ್ರೆ ವೇಳೆ ಮೋದಿ, ಜೈ ಶ್ರೀರಾಮ್ ಘೋಷಣೆ: ಮುಂದೆ ಆಗಿದ್ದೇನು?

ಅಸ್ಸಾಂ,ಜನವರಿ 22: ಭಾರತ್ ಜೊಡೋ ನ್ಯಾಯ ಯಾತ್ರೆಯ ವೇಳೆ ಕೆಲವು ಬಿಜೆಪಿ ಕಾರ್ಯಕರ್ತರು ಜೈಶ್ರೀರಾಮ್ ಮತ್ತು ನರೇಂದ್ರ ಮೋದಿಗೆ ಜೈಕಾರ ಕೂಗಿದ ಘಟನೆ ಭಾನುವಾರ ನಡೆದಿದೆ. ಇದರಿಂದ ಆಕ್ರೋಶಗೊಡ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಬಸ್ ನಿಲ್ಲಿಸಲು ಹೇಳಿ ತಾವೇ ಆವೇಶದಿಂದ ಕೆಳಗಿಳಿದು ಘೋಷಣೆ ಕೂಗಿದವರತ್ತ ನುಗ್ಗಿ ಹೋಗಿದ್ದಾರೆ.

ಹೌದು, ರಾಹುಲ್‌ ಗಾಂಧಿ ಅವರು ಬಸ್‌ ಇಳಿಯುತ್ತಿದ್ದಂತೆ ಪೊಲೀಸರು ರಾಹುಲ್ ನಡುವೆ ತಡೆಗೋಡೆಯಂತೆ ನಿಂತು ಪರಿಸ್ಥಿತಿ ಕೈ ಮೀರದಂತೆ ನೋಡಿಕೊಂಡಿದ್ದಾರೆ. ಬಳಿಕ ಸ್ವಲ್ಪ ಶಾಂತರಾದ ರಾಹುಲ್‌ ಬಿಜೆಪಿ ಕಾರ್ಯಕರ್ತರತ್ತ ಫ್ಲಯಿಂಗ್ ಕಿಸ್ ಕೊಟ್ಟು ಮುಂದೆ ಸಾಗಿದ್ದಾರೆ.

Video: Rahul Gandhis Flying Kisses For Assam Crowd Shouting Modi, Modi

ಇನ್ನೂ ಈ ಘಟನೆಯ ಬಳಿಕ ಸಂಸದ ರಾಹುಲ್‌ ಗಾಂಧಿ ಮಾತನಾಡಿ, ನಾನು ಬಸ್‌ನಿಂದ ಕೆಳಗಿಳಿದುದನ್ನು ನೋಡಿ ದೊಣ್ಣೆ ಹಿಡಿದುಕೊಂಡು ಘೋಷಣೆ ಕೂಗುತ್ತಿದ್ದ ಬಿಜೆಪಿ ಕಾರ್ಯಕರ್ತರು ಹೆದರಿ ಪರಾರಿಯಾದರು. ಈ ಘಟನೆಯಿಂದ ನಾವು ಯಾರಿಗೂ ಹೆದರುವುದಿಲ್ಲ ಎಂದು ಅಬ್ಬರಿಸಿದರು. ಬಳಿಕ ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಟ್ವಿಟ್ ಮಾಡಿದ ರಾಹುಲ್, ನಾವು ಎಲ್ಲೆಡೆಯೂ ಪ್ರೀತಿ, ಸಹನೆಯ ಅಂಗಡಿ ತೆರೆದು ಶಾಂತಿ ಸೌಹಾರ್ದತೆಯನ್ನು ಪಸರಿಸುತ್ತೇವೆ ಎಂದು ತಿಳಿಸಿದರು.

ಜೊರ್ಹಾತ್‌ (ಅಸ್ಸಾಂ): ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೋ ನ್ಯಾಯ ಯಾತ್ರೆಯು ಅಸ್ಸಾಂನಲ್ಲಿ ತನಗೆ ಅನುಮತಿ ನೀಡಿದ ಮಾರ್ಗದ ಬದಲಾಗಿ ಬೇರೊಂದು ಕಡೆ ಸಾಗಿದ ಆರೋಪದಡಿ ಯಾತ್ರೆಯ ಮುಖ್ಯ ಸಂಘಟಕ ಕೆಬಿ ಬೈಜು ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಅಸ್ಸಾಂನ ಜೋರ್ಹತ್‌ನಲ್ಲಿ ಸಾಗುತ್ತಿದ್ದ ಯಾತ್ರೆಯು ಜಿಲ್ಲಾಡಳಿತ ತಮಗೆ ಅನುಮತಿ ನೀಡಿದ್ದ ಕೆಬಿ ರಸ್ತೆ ಬದಲಾಗಿ ದಿಢೀರನೆ ತನ್ನ ಮಾರ್ಗ ಬದಲಿಸಿದ್ದು, ಅಸ್ತವ್ಯಸ್ತ ಪರಿಸ್ಥಿತಿಗೆ ಕಾರಣವಾಯಿತು. ಇದು ಸುರಕ್ಷತಾ ನಿಯಮ ಉಲ್ಲಂಘಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಣಿಪುರ-ಮಹಾರಾಷ್ಟ್ರ ನ್ಯಾಯ ಯಾತ್ರೆಯ ಅಸ್ಸಾಂ ಲೆಗ್‌ನಲ್ಲಿ ಗಾಂಧಿ ಮತ್ತು ಜೈರಾಮ್ ರಮೇಶ್ ಸೇರಿದಂತೆ ತನ್ನ ನಾಯಕರನ್ನು ಬಿಜೆಪಿ ಬೆಂಬಲಿಗರು ಗುರಿಯಾಗಿಸಿದ್ದಾರೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ಆದರೆ,ರಾಹುಲ್‌ ಗಾಂಧಿ ಅವರ ಸಮ್ಮುಖದಲ್ಲಿ "ಜೈ ಶ್ರೀ ರಾಮ್" ಮತ್ತು "ಮೋದಿ, ಮೋದಿ" ಘೋಷಣೆಗಳನ್ನು ಕೂಗಿದ ನಂತರ ಅವರು ಗದ್ದಲ ಎಬ್ಬಿಸಿದರು ಎಂದು ಬಿಜೆಪಿ ಹೇಳಿಕೊಂಡಿದೆ.

ಇದೇ ರೀತಿ ಅವರು ಗಲಿಬಿಲಿಗೊಂಡರೆ, ಅಯೋಧ್ಯೆಯಲ್ಲಿ 'ಪ್ರಾಣ ಪ್ರತಿಷ್ಠಾ' (ಜನವರಿ 22 ರಾಮ ಮಂದಿರ ಶಂಕುಸ್ಥಾಪನೆ ಸಮಾರಂಭ) ದ ಭಾಗವಾಗಲು ಹಿಂದೂ ವಿರೋಧಿ ಕಾಂಗ್ರೆಸ್ ಆಹ್ವಾನವನ್ನು ತಿರಸ್ಕರಿಸಿದ ನಂತರ, ಮುಂದಿನ ದಿನಗಳಲ್ಲಿ ಅವರು ಈ ದೇಶದ ಜನರನ್ನು ಹೇಗೆ ಎದುರಿಸುತ್ತಾರೆ. ?ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾತನಾಡಿ, ಅಸ್ಸಾಂನಲ್ಲಿ ಸಂಪೂರ್ಣ ಕಾನೂನುಬಾಹಿರತೆಯನ್ನು ಪ್ರದರ್ಶಿಸಲಾಗಿದೆ, ಯಾತ್ರೆಯ ಮಾರ್ಗದ ಉದ್ದಕ್ಕೂ ಮುಖ್ಯಮಂತ್ರಿಗಳು ತಮ್ಮ ಗೂಂಡಾಗಳನ್ನು ನಿಲ್ಲಿಸಿ ಯಾತ್ರೆಯ ಮೇಲೆ ದಾಳಿ ಮಾಡಲು ಮತ್ತು ನ್ಯಾಯಕ್ಕಾಗಿ ನಮ್ಮ ಶಾಂತಿಯುತ ಮೆರವಣಿಗೆಗೆ ಅಡ್ಡಿಪಡಿಸಿದ್ದಾರೆ ಎಂದು ಹೇಳಿದರು. ಇದು ನಮ್ಮನ್ನು ತಡೆಯುತ್ತದೆ ಎಂದು ಅವರು ಸಂಪೂರ್ಣವಾಗಿ ತಪ್ಪಾಗಿ ಭಾವಿಸಿದ್ದಾರೆ. ಏನಾದರೂ ಇದ್ದರೆ, ಇದು ಅವರ ಮತ್ತು ನರೇಂದ್ರ ಮೋದಿಯವರ ಸೋಲನ್ನು ಖಚಿತಪಡಿಸಿಕೊಳ್ಳಲು ನಮಗೆ ಹೆಚ್ಚಿನ ಶಕ್ತಿಯನ್ನು ನೀಡಿದೆ ಎಂದು ಹೇಳಿದರು.

ಭಾರತ್ ಜೋಡೋ ನ್ಯಾಯ್ ಯಾತ್ರೆಯು 15 ರಾಜ್ಯಗಳ 100 ಲೋಕಸಭಾ ಕ್ಷೇತ್ರಗಳ ಮೂಲಕ ಹಾದು ಹೋಗುತ್ತದೆ, 6,713 ಕಿಮೀಗಳನ್ನು, ಹೆಚ್ಚಾಗಿ ಬಸ್ಸುಗಳಲ್ಲಿ ಮಾತ್ರವಲ್ಲದೆ ಕಾಲ್ನಡಿಗೆಯಲ್ಲಿಯೂ ಸಾಗುತ್ತದೆ ಮತ್ತು ಮಾರ್ಚ್ 20 ಅಥವಾ 21 ರಂದು ಮುಂಬೈನಲ್ಲಿ ಕೊನೆಗೊಳ್ಳುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+