ಮಕ್ಕಳ ಭುಜದ ಮೇಲೆ ಬಿಜೆಪಿ ಅಭ್ಯರ್ಥಿ
ಜೈಪುರ್, ಮಾ.24: ಬಗ್ಗಿ ನಿಂತಿದ್ದ ಶಾಲಾ ಮಕ್ಕಳ ಭುಜದ ಮೇಲೆ ಬಿಜೆಪಿ ಅಭ್ಯರ್ಥಿಯೊಬ್ಬ ನಡೆದುಕೊಂಡು ಹೋಗಿರುವ ಪ್ರಸಂಗ ನಡೆದಿದೆ. ರಾಜ್ ಕೋಟ್ ನ ಬಿಜೆಪಿ ಅಭ್ಯರ್ಥಿ ಮೋಹನ್ ಕುಂದರಿಯಾ ಅವರ ಈ ನಡಿಗೆ ರಾಜಸ್ಥಾನದಲ್ಲಿ ಭಾರಿ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಎಲ್ಲೆಡೆ ಬಿಜೆಪಿ ನಾಯಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿವಿಧ ಸಂಘಟನೆಗಳು ಆಗ್ರಹಿಸಿವೆ.
ಶಾಲಾ ಕಾರ್ಯಕ್ರಮವೊಂದರಲ್ಲಿ ಮೋಹನ್ ಕುಂದರಿಯಾ ವಿಶೇಷ ಆಹ್ವಾನಿತನಾಗಿದ್ದರು. ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಯೋಗದ ಬಗ್ಗೆ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಸುಮಾರು 1 ಗಂಟೆಗೂ ಹೆಚ್ಚು ಕಾಲ ಯೋಗದ ಬಗ್ಗೆ ಉಪನ್ಯಾಸ ನೀಡಿದ ಕುಂದರಿಯಾ ನಂತರ ಮಕ್ಕಳನ್ನು ಸಾಲಾಗಿ ಬಗ್ಗಿ ನಿಲ್ಲುವಂತೆ ಸೂಚಿಸಿದರು. ಸಾಲಾಗಿ ಬಗ್ಗಿ ನಿಂತ ಶಾಲಾ ಮಕ್ಕಳ ಭುಜದ ಮೇಲೆ ಕುಂದರಿಯಾ ನಡೆದುಕೊಂಡು ಹೋಗಿದ್ದಾರೆ. ಹಿಮ್ಮೇಳದಲ್ಲಿ ವಂದೇ ಮಾತರಂ ಗೀತೆ ಮೊಳಗಿದೆ.

ರಾಜ್ ಕೋಟ್ ನ ಬಿಜೆಪಿ ಅಭ್ಯರ್ಥಿ ಮೋಹನ್ ಕುಂದರಿಯಾ ನಡಿಗೆ ವೀಡಿಯೋದಲ್ಲಿ ಚಿತ್ರೀಕರಣವಾಗಿದ್ದು, ಬಿಜೆಪಿ ಮತ್ತು ಈತನ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಒತ್ತಾಯಿಸಿದ್ದಾರೆ. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]
ಯೋಗ ಹೇಳಿಕೊಡುವ ಉದ್ದೇಶದಿಂದ ಪಕ್ಷಾತೀತವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಕ್ಕಳ ದೈಹಿಕ ಕ್ಷಮತೆ, ಶಕ್ತಿ ಬಗ್ಗೆ ಪರಿಚಯ ನೀಡಲು ಈ ರೀತಿ ನಡಿಗೆ ಹಮ್ಮಿಕೊಳ್ಳಲಾಗಿತ್ತು ಎಂದು ಸ್ಥಳೀಯ ಬಿಜೆಪಿ ಘಟಕ ಸಮರ್ಥಿಸಿಕೊಂಡಿದೆ. ವಂದೇ ಮಾತರಂ ಗೀತೆ ಹಿಮ್ಮೇಳ ಕೇಸರಿ ಬಾವುಟಗಳು ರಾರಾಜಿಸುತ್ತಿದ್ದ ವೇಳೆಯಲ್ಲಿ ಬಿಜೆಪಿ ಅಭ್ಯರ್ಥಿ ಈ ರೀತಿ ನಡೆದುಕೊಂಡು ಹೋಗಿರುವುದು ಬಿಜೆಪಿಗೆ ಮುಳುವಾಗುವ ಸಾಧ್ಯತೆಗಳಿವೆ.ರಾಜ್ ಕೋಟ್ ನ ಬಿಜೆಪಿ ಅಭ್ಯರ್ಥಿ ಮೋಹನ್ ಕುಂದರಿಯಾ ನಡಿಗೆ ವೀಡಿಯೋ ಮುಂದೆ ನೋಡಿ...
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ












Click it and Unblock the Notifications