ವಿಡಿಯೋ: 'ತಿತ್ಲಿ' ಚಂಡಮಾರುತದ ಉಗ್ರರೂಪ ನೋಡಿ
ಹೈದರಾಬಾದ್, ಅಕ್ಟೋಬರ್ 11: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಎದ್ದಿರುವ 'ತಿತ್ಲಿ' ಚಂಡಮಾರುತ ಆಂಧ್ರಪ್ರದೇಶ ಹಾಗೂ ಒಡಿಸ್ಸಾ ಕ್ಕೆ ಭಾರಿ ನಷ್ಟ ತಂದೊಡ್ಡುತ್ತಿದೆ.
ಈಗಾಗಲೇ ಆಂಧ್ರ ಪ್ರದೇಶದಲ್ಲಿ 8 ಜನರನ್ನು ಬಲಿ ಪಡೆದಿರುವ ತಿತ್ಲಿ ಚಂಡಮಾರುತ ಸೌಮ್ಯರೂಪಕ್ಕೆ ಬರುತ್ತಿಲ್ಲ. ತಿತ್ಲಿ ಹೆದರಿಕೆಗೆ ಒರಿಸ್ಸಾದಲ್ಲಿ ಈಗಾಗಲೇ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸ್ಥಳಾಂತರ ಮಾಡಲಾಗಿದೆ.
ಭಾರಿ ವೇಗದಲ್ಲಿ ಬೀಡುತ್ತಿರುವ ಚಂಡಮಾರುತದಿಂದ ಕಡಲು ಪ್ರಕ್ಷುಬ್ಧಗೊಂಡಿದೆ. ಚಂಡಮಾರುತದ ಭೀಕರ ಹೊಡೆತಕ್ಕೆ ಸಿಕ್ಕಿ ಹಲವರು ಮನೆಗಳನ್ನು ಕಳೆದುಕೊಂಡಿದ್ದಾರೆ. ವಿದ್ಯುತ್ ಕಂಬಗಳು ಧರೆಗೆ ಉರುಳಿವೆ. ಕೋಟ್ಯಂತರ ಮೌಲ್ಯದ ಆಸ್ತಿ-ಪಾಸ್ತಿ ನಷ್ಟವಾಗಿವೆ.
ಸಾಗರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಾಗಿದೆ. ಭಾರಿ ಮಳೆ-ಗಾಳಿಯಿಂದ ಒರಿಸ್ಸಾದಲ್ಲಿ ಭೂ ಕುಸಿತ ಉಂಟಾಗಿದೆ. ತಿತ್ಲಿಯ ಆರ್ಭಟದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೋಡುಗರನ್ನು ಬೆಚ್ಚಿ ಬೀಳಿಸುತ್ತಿವೆ.
|
14 ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆ ನಿಯೋಜನೆ
ಒರಿಸ್ಸಾ ಸರ್ಕಾರವು 14 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳನ್ನು ಚಂಡಮಾರುತದಿಂದ ಸಂಕಷ್ಟಕ್ಕೆ ಸಿಲುಕಿರುವವರನ್ನು ರಕ್ಷಿಸಲು ನಿಯೋಜಿಸಿದೆ. ಪುರಿ, ಕೇಂದ್ರಪರ, ಭದ್ರಕ್ ಮುಂತಾದ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು, ಅಪಾರ ಆಸ್ತಿ-ಪಾಸ್ತಿ ಹಾನಿಯಾಗಿದೆ.
| Array |
ವೇಗ ಹೆಚ್ಚಿಸಿಕೊಳ್ಳುತ್ತಿರುವ ಚಂಡಮಾರುತ
ತಿತ್ಲಿ ಚಂಡಮಾರುತವು ಪ್ರತಿ ಗಂಟೆಗೂ ವೇಗ ಹೆಚ್ಚಿಸಿಕೊಳ್ಳುತ್ತಿದೆ ಎಂದು ಹವಾಮಾನ ಇಲಾಖೆ ವರದಿ ಮಾಡುತ್ತಿದ್ದು, ತೀವ್ರದಿಂದ ಅತಿತೀವ್ರ ಚಂಡಮಾರುತವಾಗಿ ಪರಿವರ್ತನೆಗೊಳ್ಳುತ್ತಿದೆ ಎಂದು ಹೇಳಿರುವುದು ಜನರನ್ನು ಆತಂಕಕ್ಕೆ ಈಡು ಮಾಡಿದೆ.
|
145 ಕಿ.ಮೀ ವೇಗದಲ್ಲಿ ಬೀಸುತ್ತಿರುವ ಗಾಳಿ
ಒರಿಸ್ಸಾದಲ್ಲಿ ಚಂಡಮಾರುತದ ವೇಗ ಗಂಟೆಗೆ 145 ಕಿ.ಮೀ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ವೇಗ ಇನ್ನೂ ಹೆಚ್ಚಾಗಬಹುದು ಎಂಬ ಮುನ್ಸೂಚನೆಯೂ ಇದೆ. ಒರಿಸ್ಸಾದಲ್ಲಿ ಭಾರಿ ಮಳೆ ಸಹ ಆಗುತ್ತಿದ್ದು ಚಂಡಮಾರುತದ ತೀವ್ರತೆ ಕಡಿಮೆ ಆಗಲು ಇನ್ನೂ ಕೆಲವು ದಿನಗಳು ಬೇಕು ಎಂದಿದೆ ಇಲಾಖೆ.
| Array |
ಪಶ್ಚಿಮ ಬಂಗಾಳಕ್ಕೆ ನುಗ್ಗಲಿದೆ ಚಂಡಮಾರುತ
ಇನ್ನು 24 ಗಂಟೆಗಳಲ್ಲಿ ಚಂಡಮಾರುತವು ಉತ್ತರ ಆಂಧ್ರಪ್ರದೇಶ ಹಾಗೂ ಒರಿಸ್ಸಾದಿಂದ ಪಶ್ಚಿಮ ಬಂಗಾಳ ರಾಜ್ಯದ ಕಡೆಗೆ ಸಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಸಹ ನೀಡಲಾಗಿದೆ.
| Array |
ಒರಿಸ್ಸಾದ ಎಲ್ಲ ಜಿಲ್ಲೆಗಳಲ್ಲೂ ಹೈ-ಅಲರ್ಟ್
ಒರಿಸ್ಸಾದಲ್ಲಿ ಈ ವರೆಗೆ ಯಾವುದೇ ಸಾವು-ನೋವು ಸಂಭವಿಸಿಲ್ಲ ಆದರೂ ಸಹ ಎಲ್ಲ ಜಿಲ್ಲೆಗಳಲ್ಲೂ ಹೈ-ಅಲರ್ಟ್ ಘೋಷಿಸಲಾಗಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ











Click it and Unblock the Notifications