ಭಾರತದ ಅಕ್ಕಿಗೆ ಎಲ್ಲಿಲ್ಲದ ಡಿಮ್ಯಾಂಡ್: ದಶಕದಲ್ಲೇ ಮೊದಲ ಬಾರಿಗೆ ಅಕ್ಕಿ ಖರೀದಿಸಿದ ವಿಯೆಟ್ನಾಂ
ಜಗತ್ತಿನ ಮೂರನೇ ಅತಿದೊಡ್ಡ ಅಕ್ಕಿ ರಫ್ತುದಾರ ವಿಯೆಟ್ನಾಂ ದೇಶವು ಇದೇ ಮೊದಲ ಬಾರಿಗೆ ತನ್ನ ಪ್ರತಿಸ್ಪರ್ಧಿ ಭಾರತದಿಂದ ಅಕ್ಕಿಯನ್ನು ಆಮದು ಮಾಡಿಕೊಂಡಿದೆ. ದಶಕಗಳ ನಂತರ ಮೊದಲ ಬಾರಿಗೆ ಸ್ಥಳೀಯ ಬೆಲೆಗಳು 9 ವರ್ಷದಲ್ಲೇ ಗರಿಷ್ಠ ಮಟ್ಟಕ್ಕೆ ಏರಿದ ನಂತರ ಸೀಮಿತ ದೇಶೀಯ ಸರಬರಾಜು ಮಧ್ಯೆ ಭಾರತದಿಂದ ಅಕ್ಕಿಯನ್ನು ಆಮದುಕೊಳ್ಳಲಾಗಿದೆ.
ವಿಯೆಟ್ನಾಂ ಒಂದೇ ಅಲ್ಲದೆ ಈ ಹಿಂದೆ ಚೀನಾ ಕೂಡ ದಶಗಳಲ್ಲಿ ಮೊದಲ ಬಾರಿಗೆ ಭಾರತದಿಂದ ಅಕ್ಕಿಯನ್ನು ಖರೀದಿಸಿತ್ತು. ಇದಕ್ಕೆ ಕಾರಣ ಏಷ್ಯಾದ ಹಲವು ದೇಶಗಳಲ್ಲಿ ಅಕ್ಕಿಯ ಕೊರತೆ ಕಾಣಿಸಿದೆ. ಪರಿಣಾಮ ವಿಯೆಟ್ನಾಂ ಮತ್ತು ಥಾಯ್ಲಾಂಡ್ನಿಂದ ಅಕ್ಕಿ ಆಮದು ಮಾಡಿಕೊಳ್ಳುತ್ತಿದ್ದ ಇತರ ದೇಶಗಳು ಈಗ ಅನಿವಾರ್ಯವಾಗಿ ಭಾರತದತ್ತ ಚಿತ್ತ ನೆಟ್ಟಿವೆ.
ಭಾರತವು ಧಾನ್ಯಗಳ ರಫ್ತಿನಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿದ್ದರೂ, ಹಲವು ದೇಶಗಳು ಗುಣಮಟ್ಟದ ನೆಪವೊಡ್ಡಿ ಅಕ್ಕಿಯನ್ನು ಭಾರತದಿಂದ ಆಮದು ಮಾಡಿಕೊಳ್ಳುತ್ತಿರಲಿಲ್ಲ. ಈಗ ಈ ದೇಶಗಳೆಲ್ಲ ಭಾರತವನ್ನೇ ನೆಚ್ಚಿಕೊಳ್ಳಬೇಕಾದ ಪರಿಸ್ಥಿತಿ ಉದ್ಭವವಾಗಿದೆ.

ಜನವರಿ ಮತ್ತು ಫೆಬ್ರವರಿ ಅವಧಿಯಲ್ಲಿ ಟನ್ಗೆ 310 ಡಾಲರ್ನಂತೆ 70,000 ಟನ್ ಅಕ್ಕಿಯನ್ನು ರಫ್ತು ಮಾಡುವಂತೆ, ಭಾರತದ ರಫ್ತುದಾರರಿಗೆ ವಿಯೆಟ್ನಾಂ ಆರ್ಡರ್ ಕೊಟ್ಟಿದೆ. "ಮೊದಲ ಬಾರಿಗೆ ನಾವು ವಿಯೆಟ್ನಾಂಗೆ ಅಕ್ಕಿ ರಫ್ತು ಮಾಡುತ್ತಿದ್ದೇವೆ," ಎಂದು ಅಕ್ಕಿ ರಫ್ತುದಾರರ ಸಂಘದ ಅಧ್ಯಕ್ಷ ಬಿ.ವಿ. ಕೃಷ್ಣ ರಾವ್ ಹೇಳಿದ್ದಾರೆ.
''ಭಾರತದ ಬೆಲೆಗಳು ತುಂಬಾ ಆಕರ್ಷಣೆಯನ್ನು ಹೊಂದಿವೆ. ಬೆಲೆಯ ನಡುವಿನ ಬಹುದೊಡ್ಡ ವ್ಯತ್ಯಾಸಗಳು ರಫ್ತು ಮಾಡಲು ಪ್ರೋತ್ಸಾಹಿಸಿವೆ'' ಎಂದು ಬಿ.ವಿ. ಕೃಷ್ಣ ರಾವ್ ಹೇಳಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಚೀನಾ ಮೂರು ದಶಕಗಳಲ್ಲೇ ಮೊದಲ ಬಾರಿಗೆ ಭಾರತದಿಂದ ಅಕ್ಕಿ ಆಮದು ಮಾಡಿಕೊಂಡಿತ್ತು. ಇದೀಗ ಅಕ್ಕಿ ರಫ್ತಿನಲ್ಲಿ ಮುಂಚೂಣಿಯಲ್ಲಿರುವ ದೇಶವೇ ನಮ್ಮಿಂದ ಅಕ್ಕಿ ತರಿಸಿಕೊಳ್ಳುತ್ತಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications