ಆರ್ಯನ್ ಖಾನ್ ಬಂಧಿಸಿದ ಅಧಿಕಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ವಿಜಿಲೆನ್ಸ್ ವರದಿ
ಮುಂಬೈ ಮೇ 19: ಮುಂಬೈ ಕ್ರೂಸ್ ಡ್ರಗ್ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ಈ ಪ್ರಕರಣದಲ್ಲಿ ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರನ್ನು ನಾರ್ಕೊಟಿಕ್ಸ್ ನಿಯಂತ್ರಣ ವಿಭಾಗದ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ಅವರ ನೇತೃತ್ವದ ತಂಡ ಬಂಧಿಸಿತ್ತು. ಆದರೆ ಈಗ ಸಮೀರ್ ವಾಂಖೆಡೆ ವಿರುದ್ಧ ಭ್ರಷ್ಟಾಚಾರದ ಆರೋಪವನ್ನು ಎನ್ಸಿಬಿಯ ವಿಜಿಲೆನ್ಸ್ ವಿಭಾಗ ವರದಿ ಮಾಡಿದೆ.
ಈ ಸಮಯದಲ್ಲಿ ಆರ್ಯನ್ ಖಾನ್ ಪ್ರಕರಣವನ್ನು ಮುಚ್ಚಿ ಹಾಕಲು ಸಮೀರ್ ವಾಂಖೆಡೆ ಲಂಚವನ್ನು ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಜೊತೆಗೆ ಅವರು ಅಪಾರ ಆಸ್ತಿ ಹೊಂದಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ಸಮೀರ್ ವಾಂಖೆಡೆ ಮತ್ತು ಇತರರು ಶಾರುಖ್ ಖಾನ್ ಕುಟುಂಬದಿಂದ 25 ಕೋಟಿ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಸಂಸ್ಥೆ ಆರೋಪಿಸಿದೆ. ಇಲ್ಲದಿದ್ದರೆ ಹಣ ಕೊಡದಿದ್ದರೆ ಆರ್ಯನ್ ಖಾನ್ ಅವರನ್ನು ಮಾದಕ ದ್ರವ್ಯ ದಂಧೆಯಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇದರ ವಿಚಾರಣೆಗೆ ಮೇ 18ರಂದು ಸಮೀರ್ ವಾಂಖೆಡೆ ಸಿಬಿಐ ವಿಚಾರಣೆಗೆ ಕರೆದಿತ್ತು. ಆದರೆ ಸಮೀರ್ ಇದಕ್ಕೆ ಗೈರು ಹಾಜರಾಗಿದ್ದಾರೆ.
ಎನ್ಸಿಬಿಯ ವಿಜಿಲೆನ್ಸ್ ವಿಭಾಗದ ವರದಿಯ ಪ್ರಕಾರ, ಆರ್ಯನ್ ಖಾನ್ ಮತ್ತು ಅವರ ಸ್ನೇಹಿತ ಅರ್ಬಾಜ್ ಮರ್ಚೆಂಟ್ ಹೆಸರನ್ನು ಕೊನೆಯ ಕ್ಷಣದಲ್ಲಿ ಸೇರಿಸಲಾಗಿದೆ. ಇತರ ಕೆಲವು ಶಂಕಿತರ ಹೆಸರನ್ನು ಕೈಬಿಡಲಾಗಿದೆ ಎಂದು ಸೂಚಿಸುತ್ತದೆ. ದಾಳಿಯ ಸಮಯದಲ್ಲಿ, ಶಂಕಿತ ವ್ಯಕ್ತಿಯಿಂದ ರೋಲಿಂಗ್ ಪೇಪರ್ ವಶಪಡಿಸಿಕೊಂಡಿದ್ದರೂ, ಆಕೆಗೆ ಹೋಗಲು ಅವಕಾಶ ನೀಡಲಾಯಿತು ಎಂದು ವರದಿ ಹೇಳುತ್ತದೆ.

ಮುಂಬೈ ಕ್ರೂಸ್ ರೈಡ್ನಲ್ಲಿ ಸ್ವತಂತ್ರ ಸಾಕ್ಷಿಯಾಗಿರುವ ಕಿರಣ್ ಗೋಸಾವಿಯೊಂದಿಗೆ ಸಮೀರ್ ವಾಂಖೆಡೆ ಉದ್ದೇಶಪೂರ್ವಕವಾಗಿ ರಾಜಿ ಮಾಡಿಕೊಂಡಿದ್ದಾರೆ ಎಂದು ಆರ್ಯನ್ ಖಾನ್ ಅವರ ಬಂಧನದ ಸರಣಿ ಲೋಪಗಳು ಸೂಚಿಸುತ್ತವೆ.
ತನಿಖಾ ತಂಡ ಸಂಗ್ರಹಿಸಿದ್ದ ಎನ್ಸಿಬಿ ಕಚೇರಿಯ ಸಿಸಿಟಿವಿ ದೃಶ್ಯಾವಳಿಗಳು ಭ್ರಷ್ಟವಾಗಿವೆ. ಆರ್ಯನ್ ಖಾನ್ ಅವರನ್ನು ಎನ್ಸಿಬಿ ಕಚೇರಿಗೆ ಕರೆತಂದ ರಾತ್ರಿಯ ಡಿವಿಆರ್ ಮತ್ತು ಹಾರ್ಡ್ ಕಾಪಿಯಲ್ಲಿ ಎನ್ಸಿಬಿಯ ಮುಂಬೈ ತಂಡ ಸಲ್ಲಿಸಿದ್ದ ದಾಖಲೆಗಳು ವಿಭಿನ್ನವಾಗಿವೆ ಎಂದು ವರದಿ ಹೇಳಿದೆ.
ಐದು ವರ್ಷಗಳಲ್ಲಿ ಅಂದರೆ 2017 ರಿಂದ 2021 ರವರೆಗೆ ಸಮೀರ್ ವಾಂಖೆಡೆ ಅವರು ತಮ್ಮ ಕುಟುಂಬದೊಂದಿಗೆ ಆರು ವಿದೇಶ ಪ್ರವಾಸಗಳನ್ನು ಮಾಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ರಾಷ್ಟ್ರಗಳ ಪಟ್ಟಿಯಲ್ಲಿ ಯುಕೆ, ಐರ್ಲೆಂಡ್, ಪೋರ್ಚುಗಲ್, ದಕ್ಷಿಣ ಆಫ್ರಿಕಾ ಮತ್ತು ಮಾಲ್ಡೀವ್ಸ್ ಸೇರಿವೆ, ಅಲ್ಲಿ ಅವರು 55 ದಿನಗಳ ಕಾಲ ಇದ್ದರು ಎಂದು ಹೇಳಲಾಗಿದೆ.
ಆದರೆ ಸಮೀರ್ ವಾಂಖೆಡೆ ಅವರು ಇದಕ್ಕೆ ಕೇವಲ 8.75 ಲಕ್ಷವನ್ನು ಖರ್ಚು ಮಾಡಿರುವುದಾಗಿ ಹೇಳಿಕೊಂಡಿದ್ದಾರೆ. ವರದಿ ಹೇಳಿವ ಪ್ರಕಾರ ಸಮೀರ್ ವಾಂಖೆಡೆ ಹೇಳಿಕೊಂಡಿರುವ ಹಣ ಕೇವಲ (8.75 ಲಕ್ಷ) ವಿಮಾನ ಪ್ರಯಾಣದ ವೆಚ್ಚವನ್ನು ಭರಿಸುತ್ತದೆ. ವಿದೇಶದಲ್ಲಿ ತಂಗಲು, ಸುತ್ತಾಡಲು ಖರ್ಚು ಮಾಡಿದ ಹಣವೆಷ್ಟು ಎಂದು ವರದಿ ಕೇಳಿದೆ.
ವರದಿಯು ಸಮೀರ್ ವಾಂಖೆಡೆ ಅವರ ಆದಾಯದ ಮೂಲಗಳಿಗೆ ಅಸಮಾನವಾಗಿರುವ ದುಬಾರಿ ವಾಚ್ಗಳು ಮತ್ತು ಇತರ ಆಸ್ತಿಗಳ ಸರಣಿಯನ್ನು ಉಲ್ಲೇಖಿಸುತ್ತದೆ. ಅವರು ಮುಂಬೈನಲ್ಲಿ ನಾಲ್ಕು ಫ್ಲಾಟ್ಗಳು ಮತ್ತು ವಾಶಿಮ್ನಲ್ಲಿ 416.88 ಎಕರೆ ಭೂಮಿಯನ್ನು ಹೊಂದಿದ್ದಾರೆ. ಏಜೆನ್ಸಿಗೆ ನೀಡಿದ ಸಂವಹನದಲ್ಲಿ, ಸಮೀರ್ ವಾಂಖೆಡೆ ಅವರು ಗೋರೆಗಾಂವ್ನಲ್ಲಿ 2.45 ಕೋಟಿ ಮೌಲ್ಯದ ಐದನೇ ಫ್ಲಾಟ್ಗೆ ₹ 82.8 ಲಕ್ಷ ಖರ್ಚು ಮಾಡಿದ್ದಾರೆ ಎಂದು ಹೇಳಿದ್ದಾರೆ.
ಮದುವೆಗೂ ಮುನ್ನ ಅವರು ಮತ್ತು ಅವರ ಪತ್ನಿ 1.25 ಕೋಟಿಗೆ ಖರೀದಿಸಿದ ಫ್ಲ್ಯಾಟ್ ಬಗ್ಗೆಯೂ ಉಲ್ಲೇಖವಿದೆ. ಈ ಹಣದ ಮೂಲ ನಿಗೂಢವಾಗಿಯೇ ಉಳಿದಿದೆ.
ವಾಂಖೆಡೆ ಮತ್ತು ಅವರ ಪತ್ನಿಯ ಆದಾಯ ತೆರಿಗೆ ರಿಟರ್ನ್ಸ್ ಅವರ ವಾರ್ಷಿಕ ಆದಾಯ 45,61,460 ಎಂದು ತೋರಿಸುತ್ತದೆ. ಈ ಹಣದಲ್ಲಿ ಅವರು ತಮ್ಮ ವಿದೇಶಿ ಪ್ರವಾಸಗಳು ಮತ್ತು ಇತರ ಸ್ವತ್ತುಗಳಿಗೆ ಹೇಗೆ ಹಣವನ್ನು ನೀಡಿದ್ದಾರೆ ಎಂಬುದನ್ನು ವಿವರವಾಗಿಲ್ಲ ಎಮದು ವರದಿ ಹೇಳಿದೆ.
-
ಆಶಾ ಭೋಸ್ಲೆಗೆ ಮುಂಬೈ ಇಂಡಿಯನ್ಸ್-ಆರ್ಸಿಬಿ ಪಂದ್ಯದಲ್ಲಿ ಗೌರವ ನಮನ, ಕಪ್ಪುಪಟ್ಟಿ ಧರಿಸಿ ಕಣಕ್ಕಿಳಿದ ಆಟಗಾರರು -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications