RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯ ಒಡೆತನವು ಅಧಿಕೃತವಾಗಿ ಹೊಸ ಮಾಲೀಕರ ಕೈಸೇರಿದೆ. ಈ ಐತಿಹಾಸಿಕ ಬದಲಾವಣೆಯ ಬೆನ್ನಲ್ಲೇ, ಆರ್ಸಿಬಿ ತಂಡದ ಮೊದಲ ಮಾಲೀಕ ಹಾಗೂ ಉದ್ಯಮಿ ವಿಜಯ್ ಮಲ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಭಾವುಕ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಹೊಸ ಮಾಲೀಕರಿಗೆ ಶುಭಕೋರಿರುವ ಅವರು, 2008ರಲ್ಲಿ ಕೇವಲ 450 ಕೋಟಿ ರೂಪಾಯಿಗಳಿಗೆ ಈ ತಂಡವನ್ನು ಖರೀದಿಸಿದ ದಿನಗಳನ್ನು ಮೆಲುಕು ಹಾಕಿದ್ದಾರೆ.
ವಿಜಯ್ ಮಲ್ಯ ಪೋಸ್ಟ್ನಲ್ಲಿ ಏನಿದೆ?
ತಮ್ಮ ಎಕ್ಸ್ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಮಾಡಿರುವ ವಿಜಯ್ ಮಲ್ಯ, "ಆರ್ಸಿಬಿಯ ಹೊಸ ಮಾಲೀಕರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಐಪಿಎಲ್ನ ಅತ್ಯಂತ ಮೌಲ್ಯಯುತ ಫ್ರಾಂಚೈಸಿಯೊಂದಿಗೆ ಹೊಸ ಪಯಣ ಆರಂಭಿಸುತ್ತಿರುವ ಅವರಿಗೆ ಶುಭವಾಗಲಿ. 2008ರಲ್ಲಿ ನಾನು 450 ಕೋಟಿ ರೂಪಾಯಿ ನೀಡಿ ಈ ಫ್ರಾಂಚೈಸಿಯನ್ನು ಖರೀದಿಸಿದಾಗ, ಬಹಳಷ್ಟು ಜನರು ನನ್ನನ್ನು ನೋಡಿ ನಕ್ಕಿದ್ದರು. ನನ್ನ ಈ ಹೂಡಿಕೆಯನ್ನು ಕೇವಲ ಶೋಕಿಗಾಗಿ ಮಾಡಿದ 'ವ್ಯಾನಿಟಿ ಪ್ರಾಜೆಕ್ಟ್' (Vanity Project) ಎಂದು ಟೀಕಿಸಿದ್ದರು. ಆದರೆ, ಆ ಟೀಕೆಗಳ ಹಿಂದೆ 'ರಾಯಲ್ ಚಾಲೆಂಜ್' ಬ್ರ್ಯಾಂಡ್ ಕಟ್ಟುವ ನನ್ನ ಹುಚ್ಚು ಕನಸಿತ್ತು. ಹಾಗಾಗಿಯೇ ತಂಡಕ್ಕೆ ಆರ್ಸಿಬಿ ಎಂದು ಹೆಸರಿಟ್ಟೆ. ಅಂದು ನಾನು ಹೂಡಿಕೆ ಮಾಡಿದ್ದ 450 ಕೋಟಿ ರೂಪಾಯಿ, ಇಂದು 16,500 ಕೋಟಿ ರೂಪಾಯಿಗಳಿಗೆ ಬೆಳೆದು ನಿಂತಿರುವುದನ್ನು ನೋಡಲು ಅತ್ಯಂತ ಖುಷಿಯಾಗುತ್ತದೆ" ಎಂದು ಬರೆದುಕೊಂಡಿದ್ದಾರೆ.

ವಿರಾಟ್ ಕೊಹ್ಲಿ ಬಗ್ಗೆ ವಿಶೇಷ ಮೆಚ್ಚುಗೆ
ಹಾಗೆಯೇ ಆರ್ಸಿಬಿ ತಂಡವು ಯಾವಾಗಲೂ ತಮ್ಮ ಡಿಎನ್ಎ (DNA) ಯ ಒಂದು ಭಾಗವಾಗಿ ಉಳಿಯುತ್ತದೆ ಎಂದಿರುವ ಮಲ್ಯ, ಯುವ ಆಟಗಾರನಾಗಿದ್ದ ವಿರಾಟ್ ಕೊಹ್ಲಿಯನ್ನು ಆಯ್ಕೆ ಮಾಡಿದ ಮರೆಯಲಾಗದ ನೆನಪುಗಳನ್ನು ಹಂಚಿಕೊಂಡಿದ್ದಾರೆ. "ಇಂದು ವಿಶ್ವದ ಶ್ರೇಷ್ಠ ಆಟಗಾರರ ಸಾಲಿನಲ್ಲಿರುವ ವಿರಾಟ್ ಕೊಹ್ಲಿಯನ್ನು ಅಂದು ತಂಡಕ್ಕೆ ಆಯ್ಕೆ ಮಾಡಿದ್ದು ನನ್ನ ಪಾಲಿನ ಮರೆಯಲಾಗದ ನೆನಪು. ನನ್ನ ಆಡಳಿತಾವಧಿಯಲ್ಲಿ ಮತ್ತು ಆ ನಂತರವೂ ಆರ್ಸಿಬಿಯನ್ನು ಬೆಂಬಲಿಸಿದ ಎಲ್ಲಾ ಅಭಿಮಾನಿಗಳಿಗೂ ನನ್ನ ಕೃತಜ್ಞತೆಗಳು. ದಯವಿಟ್ಟು ಬೆಂಗಳೂರಿನ ಸಿಂಹ ಆರ್ಸಿಬಿಯನ್ನು ಹೀಗೆಯೇ ಬೆಂಬಲಿಸುತ್ತಿರಿ. ನಮಸ್ಕಾರ" ಎಂದು ಹೇಳಿದ್ದಾರೆ. ಈ ಹಿಂದೆ 2025ರಲ್ಲಿ ಆರ್ಸಿಬಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದಾಗಲೂ ಮಲ್ಯ, ಕೊಹ್ಲಿಯನ್ನು ಆಯ್ಕೆ ಮಾಡಿದ ಕ್ಷಣವನ್ನು ಸ್ಮರಿಸಿದ್ದರು ಮತ್ತು 18 ವರ್ಷಗಳ ಕಾಲ ಕೊಹ್ಲಿ ಒಂದೇ ತಂಡದಲ್ಲಿ ಉಳಿದದ್ದನ್ನು ಶ್ಲಾಘಿಸಿದ್ದರು.
I would like to heartily congratulate the new owners of RCB. I wish them the very best and Godspeed with the most valuable IPL franchise. When I bought the franchise in 2008 for INR 450 crores, most people laughed at me and criticised my investment as a vanity project. Behind my…
— Vijay Mallya (@TheVijayMallya) March 26, 2026
ಅಭಿಮಾನಿಗಳ ಪ್ರತಿಕ್ರಿಯೆ
ವಿಜಯ್ ಮಲ್ಯ ಅವರ ಈ ಪೋಸ್ಟ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಭಿಮಾನಿಯೊಬ್ಬರು, "ಒಂದು ವ್ಯಾನಿಟಿ ಪ್ರಾಜೆಕ್ಟ್ನಿಂದ ಶತಕೋಟಿ ಡಾಲರ್ ಸಾಮ್ರಾಜ್ಯವಾಗಿ ಬೆಳೆದದ್ದು ನಿಜಕ್ಕೂ ಒಂದು ರೋಚಕ ಕಥೆ" ಎಂದಿದ್ದಾರೆ. ಮತ್ತೊಬ್ಬರು, "ನಿಮ್ಮ ಅತ್ಯುತ್ತಮ ಹೂಡಿಕೆ ಎಂದರೆ ಅದು ವಿರಾಟ್ ಕೊಹ್ಲಿಯನ್ನು ಆಯ್ಕೆ ಮಾಡಿದ್ದು. ಆತ ಒಂಟಿ ಸಲಗದಂತೆ ತಂಡವನ್ನು ಮುನ್ನಡೆಸಿದ್ದಾರೆ. ಇಲ್ಲದಿದ್ದರೆ ಈ ತಂಡ ಎಂದೋ ಮರೆಯಾಗಿರುತ್ತಿತ್ತು" ಎಂದು ಕಮೆಂಟ್ ಮಾಡಿದ್ದಾರೆ.
ಆರ್ಸಿಬಿಯ ಹೊಸ ಮಾಲೀಕರು ಯಾರು?
ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ (USL) ಒಡೆತನದಲ್ಲಿದ್ದ ಆರ್ಸಿಬಿಯನ್ನು ಇದೀಗ ಭಾರತೀಯ ಮತ್ತು ಜಾಗತಿಕ ಉದ್ಯಮಗಳ ಒಕ್ಕೂಟವೊಂದು ಖರೀದಿಸಿದೆ. ವರದಿಗಳ ಪ್ರಕಾರ, ಆದಿತ್ಯ ಬಿರ್ಲಾ ಗ್ರೂಪ್, ಬ್ಲಾಕ್ಸ್ಟೋನ್ (Blackstone), ಬೋಲ್ಟ್ ವೆಂಚರ್ಸ್ (Bolt Ventures) ಮತ್ತು ಟೈಮ್ಸ್ ಆಫ್ ಇಂಡಿಯಾ ಗ್ರೂಪ್ ಒಳಗೊಂಡ ಒಕ್ಕೂಟವು ಬರೋಬ್ಬರಿ 1.78 ಬಿಲಿಯನ್ ಡಾಲರ್ (ಅಂದಾಜು 16,660 ಕೋಟಿ ರೂಪಾಯಿ) ನೀಡಿ ತಂಡವನ್ನು ಸಂಪೂರ್ಣವಾಗಿ ತನ್ನ ತೆಕ್ಕೆಗೆ ತೆಗೆದುಕೊಂಡಿದೆ.
-
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
IPL 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಟಿಕೆಟ್ ಮಾರಾಟ ಶುರು; ಇಲ್ಲಿವೆ ಬುಕಿಂಗ್ ಮಾಡುವ ವಿಧಾನಗಳು -
Nandini: ಆರ್ಸಿಬಿ ಜೊತೆ ರಾರಾಜಿಸಲಿದೆ ನಮ್ಮ ಹೆಮ್ಮೆಯ 'ನಂದಿನಿ': ಐಪಿಎಲ್-2026ರಲ್ಲಿ ಕನ್ನಡಿಗರಿಗೆ ಡಬಲ್ ಧಮಾಕಾ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
RCB Yash Dayal: ಐಪಿಎಲ್ 2026ರ ಸೀಸನ್ನಿಂದ ಸ್ಟಾರ್ ವೇಗಿ ಯಶ್ ದಯಾಳ್ ಔಟ್; ಆರ್ಸಿಬಿ ಅಧಿಕೃತ ಮಾಹಿತಿ -
ಶುಭ್ಮನ್ ಗಿಲ್ ಭೇಟಿಯಾದ ಅನನ್ಯಾ ಬಿರ್ಲಾ; ಆರ್ಸಿಬಿ ಹೊಸ ಮಾಲೀಕನ ಸಹೋದರಿಗೆ ಗುಜರಾತ್ ಜೆರ್ಸಿನಾ ಎಂದ ನೆಟ್ಟಿಗರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ













Click it and Unblock the Notifications