ಮಲ್ಯ ಮರೆ ಮಾಚಿದ್ದು 258 ಕೋಟಿ ರು. : ಸುಪ್ರೀಂ ಕೋರ್ಟ್
ನವದೆಹಲಿ, ಮೇ 10: ಮದ್ಯದ ದೊರೆ ವಿಜಯ್ ಮಲ್ಯ, ತಮ್ಮ ದೇಶ ತೊರೆಯುವ ಮುನ್ನ ತಮ್ಮ ಹತೋಟಿಯಲ್ಲಿದ್ದ 40 ಮಿಲಿಯನ್ ಅಮೆರಿಕನ್ ಡಾಲರ್ (ಸುಮಾರು 258 ಕೋಟಿ ರು.) ಮೊತ್ತವನ್ನು ಭಾರತೀಯ ನ್ಯಾಯಾಂಗದ ಕೈಗೆ ಸಿಲುಕದಂತೆ ಹುಷಾರಾಗಿ ತಮ್ಮ ಮಕ್ಕಳಿಗೆ ಹಸ್ತಾಂತರಿಸಿದ್ದಾರೆಂದು ಸುಪ್ರೀಂ ಕೋರ್ಟ್ ಹೇಳಿದೆ.
ಭಾರತೀಯ ಬ್ಯಾಂಕುಗಳಿಗೆ ಸಾವಿರಾರು ಕೋಟಿ ವಂಚಿಸಿ ದೇಶ ಬಿಟ್ಟು ತೆರಳಿ ಲಂಡನ್ ನಲ್ಲಿರುವ ವಿಜಯ್ ಮಲ್ಯ ಅವರು ಇನ್ನೂ ಭಾರತದಲ್ಲಿದ್ದಾಗಲೇ ನ್ಯಾಯಾಲಯವು ಅವರಿಗೆ ತಮ್ಮ (ಮಲ್ಯ) ಹಿಡಿತದಲ್ಲಿರುವ ಯಾವುದೇ ಆಸ್ತಿಯನ್ನು ಹರಾಜು ಹಾಕುವುದಾಗಲೀ, ಮಾರುವುದಾಗಲೀ, ಪರಭಾರೆ ಮಾಡುವುದಾಗಲೀ ಮಾಡಬಾರದೆಂದು ನ್ಯಾಯಾಲಯವು ಕಟ್ಟಾಜ್ಞೆ ವಿಧಿಸಿತ್ತು.[ಮಲ್ಯ ಈಗಲೂ ಸಾವಿರಾರು ಕೋಟಿ ರು ಒಡೆಯ: ಟೈಮ್ಸ್ ನೌ]

ಆದರೂ, ಗುಟ್ಟಾಗಿ ವ್ಯಾಪಾರ ನಡೆಸಿರುವ ಅವರು, ಲಂಡನ್ ನ ಪ್ರತಿಷ್ಠಿತ ಕಂಪನಿಯಾದ ಡಿಯಾಜಿಯೊ ವತಿಯಿಂದ ತಮಗೆ ಬಂದ 40 ಮಿಲಿಯನ್ ಅಮೆರಿಕನ್ ಡಾಲರ್ ಹಣವನ್ನು ಕೆಲವಾರು ಟ್ರಸ್ಟ್ ಗಳಿಗೆ ವರ್ಗಾಯಿಸಿದ್ದಾರೆ. ಈ ಟ್ರಸ್ಟ್ ಗಳ ಮೇಲೆ ಮಲ್ಯ ಅವರಿಗೆ ಹಿಡಿತವಿಲ್ಲದಿದ್ದರೂ, ಆಸ್ತಿ ಮಾರಾಟವು ನ್ಯಾಯಾಲಯ ನೀಡಿದ್ದ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.[7 ಸಾವಿರ ಕೋಟಿ ಸಾಲಕ್ಕೆ ಬ್ಯಾಂಕ್ ಗಳಿಗೆ ನಾಮವಿಟ್ಟ ಜತಿನ್ ಮೆಹ್ತಾ ಕಥೆಯೇನು]
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications