Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election
Vijay: ತಮಿಳುನಾಡು ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ನಟ ಹಾಗೂ ರಾಜಕಾರಣ ವಿಜಯ್ ಅವರು ವಿಶೇಷ ಟ್ವೀಟ್ವೊಂದನ್ನು ಮಾಡಿದ್ದಾರೆ. ತಮಿಳುನಾಡಿನ ತಮಿಳಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷರೂ ಆಗಿರುವ ನಟ ವಿಜಯ್ ಅವರು, ಅವರ ಅಭಿಮಾನಿಗಳಿಗೆ ವಿಶೇಷ ಸಂದೇಶವೊಂನ್ನು ನೀಡಿದ್ದಾರೆ. ನನ್ನ ಹೃದಯದಲ್ಲಿ ನೆಲೆಸಿರುವ ಎಲ್ಲಾ ಸಹೋದರರಿಗೆ ಹಾರ್ದಿಕ ಶುಭಾಶಯಗಳು.
ಈ ಮಹತ್ವದ ಪ್ರಯಾಣದಲ್ಲಿ ನಿಮ್ಮ ಪ್ರತಿಯೊಬ್ಬರ ಪಾತ್ರ ಅಮೂಲ್ಯವಾಗಿದೆ. ನಾವು ಬದಲಾವಣೆಗೆ ಮುಖ್ಯ ಶಕ್ತಿಯಾಗಿದ್ದು, ಜಯದ ದಾರಿಯಲ್ಲಿ ಸರಿಯಾದ ಮಾರ್ಗದಲ್ಲಿ ಸಾಗುತ್ತಿದ್ದೇವೆ. ಈಗ ಚುನಾವಣೆ ದಿನ ಸಮೀಪಿಸುತ್ತಿರುವ ಸಮಯದಲ್ಲಿ ನನ್ನ ಒಂದು ವಿನಂತಿ ಇದೆ. ಮತಗಟ್ಟೆ ಕಾರ್ಯಕರ್ತರು, ನಮ್ಮೊಂದಿಗೆ ಸೇರಿರುವ ಎಲ್ಲಾ ಸದಸ್ಯರು, ಸ್ನೇಹಿತರು-ಎಲ್ಲರೂ ಕಾರ್ಯಕ್ಷೇತ್ರಕ್ಕೆ ಇಳಿಯಿರಿ. ಮುಂದಿನ ಹತ್ತು ದಿನಗಳಲ್ಲಿ ನಿಮಗೆ ಅನುಕೂಲವಾದ ಸಮಯದಲ್ಲಿ ಬೆಳಿಗ್ಗೆ ಮತ್ತು ಸಂಜೆ ನಿಮ್ಮ ಪ್ರದೇಶದ ಮನೆ ಮನೆಗೆ ಹೋಗಿ ಜನರನ್ನು ನೇರವಾಗಿ ಭೇಟಿ ಮಾಡಿ. ನಮ್ಮ ಪಕ್ಷದ ಅಭ್ಯರ್ಥಿಗಳಿಗೆ 'ವಿಸಿಲ್' ಗುರುತಿಗೆ ಮತ ಹಾಕುವಂತೆ ವಿನಂತಿಸಿ. ಈ ಕಾರ್ಯದಲ್ಲಿ ಸ್ವಯಂಸೇವಕರಾಗಿ ಭಾಗವಹಿಸಲು ನಾನು ಮನವಿ ಮಾಡುತ್ತೇನೆ.

ರಾಜ್ಯ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ನಾಯಕರೂ ಅಭ್ಯರ್ಥಿಗಳಿಗೆ ಸಂಪೂರ್ಣ ಸಹಕಾರ ನೀಡಬೇಕು. ಎಲ್ಲರನ್ನೂ ಒಗ್ಗೂಡಿಸಿಕೊಂಡು ಚುನಾವಣಾ ಕೆಲಸ ಮಾಡಬೇಕು. ಇದು ಕೇವಲ ನಮ್ಮಗಾಗಿ ಮಾತ್ರವಲ್ಲ, ದೊಡ್ಡ ಬದಲಾವಣೆಯಿಗಾಗಿ ನಡೆಯುವ ಚುನಾವಣೆಯಾಗಿದೆ ಎಂದು ಜನರಿಗೆ ತಿಳಿಸಿ. ನಿಸ್ವಾರ್ಥ ಮನಸ್ಸಿನಿಂದ ದುಡಿದು ನಮ್ಮ ಜಯಯಾತ್ರೆಗೆ ಬಲ ನೀಡಿರಿ. ಈ ಪ್ರಜಾಪ್ರಭುತ್ವದ ಹೋರಾಟದಲ್ಲಿ, ಸಂಪೂರ್ಣ ತಮಿಳುನಾಡು ಒಟ್ಟಾಗಿ ಜಯ ಸಾಧಿಸಿ ನಿಜವಾದ ಜನರ ಆಡಳಿತವನ್ನು ಸ್ಥಾಪಿಸುತ್ತದೆ.
ಇತಿಹಾಸ ಮತ್ತೆ ಮಹಿಮೆಪೂರ್ಣವಾಗಿ ತಿರುಗುತ್ತಿದೆ! ಒಳ್ಳೆಯದೇ ಆಗುತ್ತದೆ! ಜಯ ಖಚಿತ! ಎಂದು ನಟ ವಿಜಯ್ ಅವರು ಹೇಳಿಕೊಂಡಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆ 2026ಕ್ಕೆ ಕ್ಷಣಗಣನೆ ಪ್ರಾರಂಭವಾಗಿರುವಾಗ ನಟ ವಿಜಯ್ ಅವರ ಟ್ವೀಟ್ ಮಹತ್ವ ಪಡೆದುಕೊಂಡಿದೆ. ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಅವರು ಸಂದೇಶ ಹಂಚಿಕೊಂಡಿದ್ದಾರೆ.
ಕಾಂಗ್ರೆಸ್ನಿಂದ ಯಾವುದೇ ಬೆಂಬಲವಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
ನಟ ಹಾಗೂ ರಾಜಕಾರಣಿ ವಿಜಯ್ ಅವರು ಅಪ್ರಬುದ್ಧ ಎಂದು ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ತಮಿಳುನಾಡಿನ ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿರುವ ಅವರು, ಕಾಂಗ್ರೆಸ್ನ ಕೆಲವು ನಾಯಕರು ಟಿವಿಕೆ (ತಮಿಳಗ ವೆಟ್ರಿ ಕಳಗಂ) ಪಕ್ಷಕ್ಕೆ ಬೆಂಬಲ ನೀಡಿದ್ದಾರೆ ಎನ್ನುವ ವಿಜಯ್ ಅವರ ಹೇಳಿಕೆಗೆ ವ್ಯಂಗ್ಯವಾಡಿದ್ದಾರೆ. ನಮ್ಮಲ್ಲಿರುವುದು ಒಂದೇ ಕಾಂಗ್ರೆಸ್, ನಾವು ಡಿಎಂಕೆ (ದ್ರಾವಿಡ ಮುನ್ನೇತ್ರ ಕಳಗಂ) ಪಕ್ಷಕ್ಕೆ ಬೆಂಬಲ ಕೊಟ್ಟಿದ್ದಾವೆ. ಇಬ್ಬರು ಒಂದಾಗಿ ಈ ಬಾರಿ ತಮಿಳುನಾಡು ವಿಧಾನಸಭೆ ಚುನಾವಣೆ ಎದುರಿಸುತ್ತಿದ್ದೇವೆ ಎಂದಿದ್ದಾರೆ.
ಇದೇ ಸಂದರ್ಭದಲ್ಲಿ ವಿಜಯ್ ಅವರಿಗೆ ಇನ್ನೂ ಪ್ರಬುದ್ಧತೆ ಬಂದಿಲ್ಲ, ಅವರು ತಮಿಳುನಾಡಿನ ರಾಜಕೀಯದಲ್ಲಿ ಒಬ್ಬ ಅಪ್ರಬುದ್ಧ ರಾಜಕಾರಣಿ ಎಂದು ಹೇಳಿದ್ದಾರೆ. ತಮಿಳುನಾಡಿನ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ವಿಜಯ್ ಅವರು ಅಂತಿಮ ಹಾಗೂ ಮಹತ್ವದ ಸಂದೇಶವನ್ನು ಹಂಚಿಕೊಂಡಿದ್ದಾರೆ.
-
ದಾವಣಗೆರೆ ಬೈಎಲೆಕ್ಷನ್ ಬೆನ್ನಲ್ಲೇ ಭಿನ್ನಮತ ಸ್ಫೋಟ: KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ -
CBFC: "ಜನ ನಾಯಗನ್" ಸಿನಿಮಾ ಲೀಕ್ ವರದಿ ಆಧಾರರಹಿತ: ಆರೋಪಗಳಿಗೆ ಸಿಬಿಎಫ್ಸಿ ಸ್ಪಷ್ಟನೆ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ.












Click it and Unblock the Notifications