ಮೋದಿ ಸಂಪುಟಕ್ಕೆ ಕರ್ನಾಟಕದಿಂದ ಯಾರು ಆಯ್ಕೆ?
ನವದೆಹಲಿ, ಜುಲೈ 04: ನರೇಂದ್ರ ಮೋದಿ ಅವರು ಆಫ್ರಿಕಾ ಪ್ರವಾಸಕ್ಕೆ ತೆರಳುವ ಮುನ್ನ ಸಂಪುಟ ವಿಸ್ತರಣೆ, ಪುನರ್ ರಚನೆ ಕಾರ್ಯಗಳನ್ನು ಪೂರೈಸಲು ಸಿದ್ಧರಾಗಿದ್ದಾರೆ. ಸದ್ಯಕ್ಕೆ ಮಂಗಳವಾರ ಬೆಳಗ್ಗೆ ಎನ್ಡಿಎ ಸಂಪುಟ ಮತ್ತೊಮ್ಮೆ ವಿಸ್ತರಣೆಗೊಳ್ಳಲು ಮುಹೂರ್ತ ನಿಗದಿಪಡಿಸಲಾಗಿದೆ. ಸದ್ಯದ ಮಾಹಿತಿಯಂತೆ ಉತ್ತರ ಕರ್ನಾಟಕದಿಂದ ದಲಿತ ಮುಖಂಡರಾಗಿರುವ ರಮೇಶ್ ಜಿಗಜಿಣಗಿ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆಯನ್ನು ಅಲ್ಲಗೆಳೆಯಲಾಗುವುದಿಲ್ಲ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ವಿಜಯಪುರ(ಬಿಜಾಪುರ)ದಿಂದ ಐದು ಬಾರಿ ಸಂಸದರಾಗಿರುವ ರಮೇಶ್ ಜಿಗಜಿಣಗಿ ಅವರಿಗೆ ಕರೆ ಮಾಡಿ ಕರೆಸಿಕೊಂಡಿದ್ದಾರೆ.[ಎನ್ ಡಿಎ ಸಂಪುಟ ವಿಸ್ತರಣೆ, ಡಿವಿಎಸ್ ಸೇಫ್, ದೇಕಾಗೆ ಚಾನ್ಸ್]
ಇನ್ನೊಂದೆಡೆ ಕಾನೂನು ಸಚಿವ ಡಿವಿ ಸದಾನಂದ ಗೌಡ ಅವರು ಸೇಫ್ ಆಗಿದ್ದಾರೆ ಎಂಬ ಮಾಹಿತಿ ಇದ್ದರೂ, ಅವರ ಸ್ಥಾನ ಭದ್ರವಾಗಿಲ್ಲ. ಸದಾನಂದ ಗೌಡರನ್ನು ಕೆಳಗಿಳಿಸಿ ಆ ಸ್ಥಾನದಲ್ಲಿ ಜಿಗಜಿಣಗಿ ಅವರನ್ನು ಕೂರಿಸಿದರೂ ಅಚ್ಚರಿ ಪಡಬೇಕಾಗಿಲ್ಲ. ಖಾಲಿ ಇರುವ ಎರಡು ಸ್ಥಾನಗಳು ಈಗಾಗಲೇ ಉತ್ತರ ಪ್ರದೇಶದವರಿಗೆ ಮೀಸಲಿಡಲಾಗಿದೆ. ಹೀಗಾಗಿ, ಹೊಸಬರನ್ನು ಸೇರಿಸಿಕೊಳ್ಳಬೇಕಾದರೆ ಹಾಲಿ ಸಚಿವರು ಸ್ಥಾನ ಬಿಟ್ಟು ಕೊಡಬೇಕಾಗುತ್ತದೆ.[ಗ್ಯಾಲರಿ : ಮೋದಿ ಸಂಪುಟಕ್ಕೆ ಹೊಸ ಮುಖಗಳ ಸೇರ್ಪಡೆ]

ಜೋಶಿ, ಶೆಟ್ಟರ್ ಮನವಿ: ಹಿರಿಯ ನಾಯಕ ರಮೇಶ್ ಜಿಗಜಿಣಗಿ (64) ಅವರನ್ನು ಮೋದಿ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಅಮಿತ್ ಶಾ ಅವರಿಗೆ ರಾಜ್ಯ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಮನವಿ ಸಲ್ಲಿಸಿದ್ದಾರೆ. ಇದರಿಂದ ಕರ್ನಾಟಕದಲ್ಲಿ ಎಸ್ ಸಿ ಹಾಗೂ ಎಸ್ ಟಿ ಮತಗಳನ್ನು ಸೆಳೆಯಬಹುದು ಎಂಬುದು ಈ ಇಬ್ಬರು ನಾಯಕರ ಲೆಕ್ಕಾಚಾರ.
ಮನವಿಗೆ ಸ್ಪಂದಿಸಿರುವ ಅಮಿತ್ ಶಾ, ಸದ್ಯದ ಸಂಪುಟ ವಿಸ್ತರಣೆಯಲ್ಲಿ 10ಸ್ಥಾನಗಳಿಗೆ ಮಾತ್ರ ಅವಕಾಶವಿದೆ. ಮುಂದಿನ ಸಂಪುಟ ವಿಸ್ತರಣೆಯ ಸಮಯದಲ್ಲಿ ರಮೇಶ್ ಅವರ ಹೆಸರು ಆದ್ಯತೆ ಮೇರೆಗೆ ಪರಿಗಣಿಸಲಾಗುವುದು ಎಂದಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications