ಪಕ್ಷ ತೊರೆಯುವ ವದಂತಿ: ಪ್ರಿಯಾಂಕ ಜೊತೆಗಿನ ಫೋಟೋ ಪೋಸ್ಟ್ ಮಾಡಿದ ವಿಜೇಂದರ್
ನವದೆಹಲಿ, ಏಪ್ರಿಲ್ 26: ವೃತ್ತಿಪರ ಬಾಕ್ಸರ್ ಮತ್ತು ರಾಜಕಾರಣಿ ವಿಜೇಂದರ್ ಸಿಂಗ್ ಕಾಂಗ್ರೆಸ್ ಪಕ್ಷವನ್ನು ತೊರೆಯಲಿದ್ದಾರೆ ಎಂಬ ವದಂತಿಗಳು ನಡೆಯುತ್ತಿದೆ. ಈ ವದಂತಿಗಳಿಗೆ ತೆರೆ ಎಳೆಯುವಂತೆ ಕಾಂಗ್ರೆಸ್ ಮುಖಂಡ ವಿಜೇಂದರ್ ಸಿಂಗ್, ಪ್ರಿಯಾಂಕ ಗಾಂಧಿ ಜೊತೆಗಿನ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.
ಸೋಮವಾರ, ಏಪ್ರಿಲ್ 25 ರಂದು, ವೃತ್ತಿಪರ ಬಾಕ್ಸರ್ ಮತ್ತು ರಾಜಕಾರಣಿ ವಿಜೇಂದರ್ ಸಿಂಗ್ ಅವರು ಕಾಂಗ್ರೆಸ್ ತೊರೆಯುವ ಸಾಧ್ಯತೆಯಿದೆ ಎಂಬ ವರದಿಗಳು ಹೊರಹೊಮ್ಮಿದೆ. ಹಾಗೆಯೇ ಹರಿಯಾಣದಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಗೆ ಸೇರುತ್ತಾರೆ ಎಂಬ ವದಂತಿಗಳಿವೆ. ಈ ಬೆನ್ನಲ್ಲೇ ಪ್ರಿಯಾಂಕ ಗಾಂಧಿ ಜೊತೆಗಿನ ಚಿತ್ರವನ್ನು ವಿಜೇಂದರ್ ಸಿಂಗ್ ಪೋಸ್ಟ್ ಮಾಡಿದ್ದಾರೆ.
36 ವರ್ಷದ ವಿಜೇಂದರ್ ಸಿಂಗ್ ಉತ್ತರ ಪ್ರದೇಶದ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆಗಿನ ಚಿತ್ರವನ್ನು ಸೋಮವಾರ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿ ಈ ವದಂದಿಗೆ ಅಂತ್ಯ ಹಾಡಿದ್ದಾರೆ.

"ಯುವಜನರ ಒಳಿತಿಗಾಗಿ ತುಂಬಾ ಪ್ರಯತ್ನಗಳನ್ನು ಮಾಡುತ್ತಿರುವ ಕ್ರಿಯಾತ್ಮಕ ನಾಯಕ ಪ್ರಿಯಾಂಕಾಗಾಂಧಿ ಜೀ ಅವರೊಂದಿಗೆ ಸಂಭಾಷಣೆ ನಡೆಸುವುದು ಅತ್ಯುತ್ತಮವಾದ ಕಾರ್ಯವಾಗಿದೆ. ಅವರ ಪ್ರಗತಿಪರ ವಿಧಾನವು ನಮಗೆ ಹೊಸ ಉನ್ನತಿಗೆ ಸಹಾಯ ಮಾಡಲಿದೆ," ಎಂದು ಪ್ರಿಯಾಂಕ ಗಾಂಧಿ ಫೋಟೋ ಜೊತೆಗೆ ವಿಜೇಂದರ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ವಿಜೇಂದರ್ ಸಿಂಗ್ 2019 ರ ಸಾರ್ವತ್ರಿಕ ಚುನಾವಣೆಗೆ ಮುಂಚೆಯೇ ರಾಜಕೀಯಕ್ಕೆ ದುಮುಕಿದ್ದಾರೆ. ಕಾಂಗ್ರೆಸ್ ಪಕ್ಷದ ಪರವಾಗಿ ದಕ್ಷಿಣ ದೆಹಲಿಯಿಂದ ಸ್ಪರ್ಧಿಸಿದ್ದರು, ಆದರೆ ಅವರು ವಿಜಯಶಾಲಿಯಾಗಲಿಲ್ಲ. ಅವರು 2008 ರ ಬೀಜಿಂಗ್ ಒಲಿಂಪಿಕ್ಸ್ನಲ್ಲಿ ಒಲಿಂಪಿಕ್ ಪದಕವನ್ನು ಗೆದ್ದ ಮೊದಲ ಭಾರತೀಯ ಬಾಕ್ಸರ್ ಎನಿಸಿಕೊಂಡಿದ್ದಾರೆ. ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಅನೇಕ ಇತರ ಪದಕಗಳನ್ನು ಗೆದ್ದಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications