ಕಾನೂನು ಉಲ್ಲಂಘನೆ ಸಹಿಸೊಲ್ಲ: ಮಾನವ ಹಕ್ಕುಗಳ ಮುಖ್ಯಸ್ಥರಿಗೆ ಭಾರತದ ಖಡಕ್ ಉತ್ತರ
ನವದೆಹಲಿ, ಅಕ್ಟೋಬರ್ 21: ಭಾರತದಲ್ಲಿ ಮಾನವ ಹಕ್ಕುಗಳ ಎನ್ಜಿಒಗಳಿಗೆ ಸರಿಯಾದ ಸ್ವಾತಂತ್ರ್ಯವಿಲ್ಲ. ಅವುಗಳ ಚಟುವಟಿಕೆ ಮೇಲೆ ನಿರ್ಬಂಧ ಹೇರಲಾಗಿದೆ ಮತ್ತು ವಿದೇಶಿ ದೇಣಿಗೆಗಳನ್ನು ತಡೆಹಿಡಿಯಲಾಗಿದೆ ಎಂದು ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಮುಖ್ಯಸ್ಥೆ ಮಿಷೆಲ್ಲೆ ಬಾಷೆಲೆಟ್ ವಿಷಾದ ವ್ಯಕ್ತಪಡಿಸಿದ್ದಾರೆ.
ಇದಕ್ಕೆ ತೀಕ್ಷ್ಣ ಪ್ರತ್ಯುತ್ತರ ನೀಡಿರುವ ಭಾರತ, ಮಾನವ ಹಕ್ಕುಗಳ ನೆಪದಲ್ಲಿ ಕಾನೂನಿನ ಉಲ್ಲಂಘನೆಯನ್ನು ಸಹಿಸಲು ಸಾಧ್ಯವಿಲ್ಲ. ವಿಶ್ವ ಸಂಸ್ಥೆಯ ಈ ವಿಭಾಗಕ್ಕೆ ವಿಚಾರದ ಬಗ್ಗೆ ಹೆಚ್ಚಿನ ವಿವರದ ದೃಷ್ಟಿಕೋನವನ್ನು ನಿರೀಕ್ಷಿಸಲಾಗಿತ್ತು ಎಂದಿದೆ.
'ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (ಎಫ್ಸಿಆರ್ಎ) ಸಂಬಂಧಿಸಿದಂತೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮಿಷನರ್ ನೀಡಿದ ಕೆಲವು ಹೇಳಿಕೆಗಳನ್ನು ಗಮನಿಸಿದ್ದೇವೆ. ಭಾರತವು ಕಾನೂನಿನ ನಿಯಮ ಮತ್ತು ಸ್ವತಂತ್ರ ನ್ಯಾಯಾಂಗದ ಆಧಾರದಲ್ಲಿ ರಚನೆಯಾಗಿರುವ ಪ್ರಜಾಪ್ರಭುತ್ವ ದೇಶ' ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ.

'ಕಾನೂನುಗಳನ್ನು ರಚಿಸುವುದು ಖಂಡಿತವಾಗಿಯೂ ಸಾರ್ವಭೌಮತ್ವದ ವಿಶೇಷಾಧಿಕಾರ. ಮಾನವ ಹಕ್ಕುಗಳ ನೆಪದಲ್ಲಿ ಕಾನೂನುಗಳ ಉಲ್ಲಂಘನೆಯನ್ನು ಕ್ಷಮಿಸಲು ಸಾಧ್ಯವಿಲ್ಲ' ಎಂದು ಅವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಭಾರತದಲ್ಲಿ ಮಾನವ ಹಕ್ಕುಗಳ ಎನ್ಜಿಒಗಳಿಗೆ ಬರುವ ವಿದೇಶಿ ದೇಣಿಗೆ ಮೇಲೆ ನಿರ್ಬಂಧ ವಿಧಿಸಿರುವುದು ಮತ್ತು ಮಾನವ ಹಕ್ಕು ಕಾರ್ಯಕರ್ತರ ಬಂಧನದಂತಹ ಚಟುವಟಿಕೆಗಳ ಕುರಿತು ಬಾಷೆಲೆಟ್ ಕಳವಳ ವ್ಯಕ್ತಪಡಿಸಿದ್ದರು. ಭಾರತದಲ್ಲಿ ಮಾನವಹಕ್ಕುಗಳ ಪ್ರತಿಪಾದಕರು ಮತ್ತು ಎನ್ಜಿಒಗಳು ತಮ್ಮ ಮಹತ್ವದ ಕಾರ್ಯಚಟುವಟಿಕೆ ನಡೆಸಲು ಹಾಗೂ ಅವರ ಸುರಕ್ಷತೆಗೆ ನೆರವು ನೀಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದ್ದರು.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications