ವಕ್ಫ್ ತಿದ್ದುಪಡಿ ಕಾಯ್ದೆ; ಪಶ್ಚಿಮ ಬಂಗಾಳದ ಮತ್ತೊಂದು ಜಿಲ್ಲೆಯಲ್ಲೂ ಹಿಂಸಾಚಾರ
ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮುಸ್ಲಿಂ ಸಂಘಟನೆಗಳು ಪಶ್ಚಿಮ ಬಂಗಾಳದ ವಿವಿಧ ಕಡೆಗಳಲ್ಲಿ ಭಾರಿ ಪ್ರತಿಭಟನೆ ಮಾಡುತ್ತಿವೆ. ಮುರ್ಷಿದಾಬಾದ್ನಲ್ಲಿ ಹಿಂಸಾಚಾರ ನಡೆದ ಬಳಿಕ ಇದೀಗ ದಕ್ಷಿಣ 24 ಪರಗಣಗಳಲ್ಲಿ ಕೂಡ ವಕ್ಫ್ (ತಿದ್ದುಪಡಿ) ಕಾಯ್ದೆ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಘರ್ಷಣೆ ನಡೆದಿದೆ. ಪ್ರತಿಭಟನೆ ನಡೆಸುತ್ತಿರುವ ಜಾತ್ಯತೀತ ರಂಗ (ಐಎಸ್ಎಫ್) ಬೆಂಬಲಿಗರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ ನಂತರ ಹಿಂಸೆ ಭುಗಿಲೆದ್ದಿದೆ.
ಸೋಮವಾರ ದಕ್ಷಿಣ 24 ಪರಗಣದ ಭಂಗಾರ್ನಲ್ಲಿ ಭುಗಿಲೆದ್ದ ಘರ್ಷಣೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. ಹಲವು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಐಎಸ್ಎಫ್ ಪಕ್ಷದ ನಾಯಕ ಮತ್ತು ಭಂಗಾರ್ ಶಾಸಕ ನೌಶಾದ್ ಸಿದ್ದಿಕ್ ಅವರು ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧಿ ರ್ಯಾಲಿಯಲ್ಲಿ ಭಾಗವಹಿಸಲು ಮಧ್ಯ ಕೋಲ್ಕತ್ತಾದ ರಾಮಲೀಲಾ ಮೈದಾನದ ಕಡೆಗೆ ಹೋಗುತ್ತಿದ್ದಾಗ ಐಎಸ್ಎಫ್ ಬೆಂಬಲಿಗರನ್ನು ಪೊಲೀಸರು ತಡೆದಿದ್ದರಿಂದ ಆಕ್ರೋಶ ಭುಗಿಲೆದ್ದಿದೆ.

ಪೊಲೀಸ್ ಮೂಲಗಳ ಪ್ರಕಾರ, ಬಸಂತಿ ಹೆದ್ದಾರಿಯ ಭೋಜೆರ್ಹತ್ ಬಳಿ ಪ್ರತಿಭಟನಾಕಾರರನ್ನು ತಡೆಯಲಾಯಿತು, ಅಲ್ಲಿ ಭಾಂಗರ್ ಮತ್ತು ನೆರೆಯ ಪ್ರದೇಶಗಳಾದ ಮಿನಾಖಾನ್ ಮತ್ತು ಸಂದೇಶಖಾಲಿಯಿಂದ ಹೆಚ್ಚಿನ ಸಂಖ್ಯೆಯ ಐಎಸ್ಎಫ್ ಕಾರ್ಯಕರ್ತರು ಸೇರಿದ್ದರು ಎಂದು ಪಿಟಿಐ ವರದಿ ಮಾಡಿದೆ.
ಜನರ ಗುಂಪು ಪೊಲೀಸ್ ಬ್ಯಾರಿಕೇಡ್ಗಳನ್ನು ಮುರಿಯಲು ಪ್ರಯತ್ನಿಸಿದಾಗ ಉದ್ವಿಗ್ನತೆ ಹೆಚ್ಚಾಯಿತು, ಬಳಿಕ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಸಂಘರ್ಷ ಉಂಟಾಯಿತು. "ತಿಭಟನಾಕಾರರು ಕೆಲವು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ್ದು, ಪೊಲೀಸ್ ಅಧಿಕಾರಿಗಳ ಮೇಲೆ ದಾಳಿ ಮಾಡಿದ್ದರಿಂದ ಹಲವು ಸಿಬ್ಬಂದಿ ಗಾಯಗೊಂಡರು" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
ಐಎಸ್ಎಫ್ ಬೆಂಬಲಿಗರು ಪ್ರತಿಭಟನೆಯಲ್ಲಿ ರಸ್ತೆಯಲ್ಲಿ ಕುಳಿತಿದ್ದರಿಂದ ಘರ್ಷಣೆಯು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಹಿರಿಯ ಅಧಿಕಾರಿಗಳು ಸೇರಿದಂತೆ ದೊಡ್ಡ ಪೊಲೀಸ್ ಪಡೆಗಳನ್ನು ನಿಯೋಜಿಸಲಾಯಿತು. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು ಪ್ರತಿಭಟನಾಕಾರರನ್ನು ಚದುರಿಸಲಾಗಿದೆ.
ರಾಮಲೀಲಾ ಮೈದಾನದಲ್ಲಿ ನಡೆದ ರ್ಯಾಲಿಗೆ ಸರಿಯಾದ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯದ ಕಾರಣ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು ಎಂದು ಪಿಟಿಐ ವರದಿ ಮಾಡಿದೆ.
ಹಿಂಸಾಚಾರದ ನಡುವೆಯೂ, ಸಿದ್ದೀಕ್ ರಾಮಲೀಲಾ ಮೈದಾನದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ್ದು, ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ಖಂಡಿಸಿದ್ದಾರೆ. ತಕ್ಷಣ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಈ ಕಾನೂನು ಕೇವಲ ಮುಸ್ಲಿಮರ ಮೇಲಿನ ದಾಳಿಯಲ್ಲ, ಇದು ಸಂವಿಧಾನದ ಮೇಲಿನ ದಾಳಿ. ನಾವು ಈ ಕಾಯ್ದೆಯನ್ನು ಒಪ್ಪುವುದಿಲ್ಲ, ಅಂತಹ ಕಾನೂನುಗಳನ್ನು ಬೆಂಬಲಿಸುವ ಸರ್ಕಾರ ಹೋಗಬೇಕು ಎಂದು ಅವರು ಹೇಳಿದ್ದಾರೆ.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ












Click it and Unblock the Notifications