ಪ.ಬಂಗಾಳ ಪಂಚಾಯಿತಿ ಚುನಾವಣೆ: ಭುಗಿಲೆದ್ದ ಹಿಂಸಾಚಾರ
ಕೋಲ್ಕತಾ, ಮೇ 14: ಕರ್ನಾಟಕ ವಿಧಾನಸಭೆ ಚುನಾವಣೆ ಕೆಲವೆಡೆ ಸಣ್ಣಪುಟ್ಟ ಗಲಾಟೆ ಪ್ರಕರಣಗಳ ಹೊರತಾಗಿ ಬಹುತೇಕ ಶಾಂತಿಯುತವಾಗಿ ಮುಕ್ತಾಯವಾಗಿದೆ. ಆದರೆ, ಪಶ್ಚಿಮ ಬಂಗಾಳದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿಯೇ ಭಾರಿ ಹಿಂಸಾಚಾರ ನಡೆದಿದೆ. ಘಟನೆಯಲ್ಲಿ ಇದುವರೆಗೂ ಆರು ಮಂದಿ ಮೃತಪಟ್ಟಿದ್ದಾರೆ.
ಕೂಚ್ ಬಿಹಾರ್, ಬಿಲ್ಕಂಡಾ, ಬೀರ್ಪುರ ಮುಂತಾದೆಡೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ನ ಕಾರ್ಯಕರ್ತರು ಬಿಜೆಪಿ ಮತ್ತು ಇತರೆ ಪಕ್ಷಗಳ ಬೆಂಬಲಿಗರ ಮೇಲೆ ಹಲ್ಲೆ ನಡೆಸಿದ್ದಾರೆ. ಮತ ಚಲಾಯಿಸಲು ಮತಗಟ್ಟೆಗೆ ಬಂದ ಜನರಿಗೆ ಮತಹಾಕದಂತೆ ಬೆದರಿಕೆವೊಡ್ಡಿ ವಾಪಸ್ ಕಳುಹಿಸುತ್ತಿದ್ದಾರೆ. ದುರ್ಗಾಪುರದಲ್ಲಿ ಮತಗಟ್ಟೆ ಮೇಲೆ ಕಚ್ಚಾ ಬಾಂಬ್ ಎಸೆಯಲಾಗಿದೆ.
ತೃಣಮೂಲ ಕಾಂಗ್ರೆಸ್ ಬೆಂಬಲಿಗರು ಲಾಠಿಗಳನ್ನು ಹಿಡಿದು ಮತಗಟ್ಟೆ ಬಳಿ ಕಾವಲು ಕಾಯುತ್ತಿದ್ದಾರೆ. ಬಿಜೆಪಿ ಬೆಂಬಲಿಗರ ಮೇಲೆ ಹಲ್ಲೆ ನಡೆಸುವ ದೃಶ್ಯಗಳು ವಿಡಿಯೋಗಳಲ್ಲಿ ದಾಖಲಾಗಿವೆ. ಪಶ್ಚಿಮ ಬಂಗಾಳದ ಸಚಿವ ರವೀಂದ್ರನಾಥ್ ಘೋಷ್ ಕೂಚ್ ಬಿಹಾರದ ಮತಗಟ್ಟೆಯೊಂದರಲ್ಲಿ ಬಿಜೆಪಿ ಬೆಂಬಲಿಗನ ಮೇಲೆ ಹಲ್ಲೆ ನಡೆಸಿದ್ದಾರೆ.

ಕೆಲವೆಡೆ ಚಾಕುಗಳಿಂದ ಇರಿದ ಘಟನೆಗಳು ನಡೆದಿವೆ. ಟಿಎಂಸಿಯ ನಾಯಕರೇ ಮತಗಟ್ಟೆ ಮುಂಭಾಗದಲ್ಲಿ ಹಲ್ಲೆ ನಡೆಸಿದ ಘಟನೆಗಳು ವರದಿಯಾಗಿವೆ.
#WATCH: Alleged TMC workers barring voters from entering Booth No. 14/79 in Birpara. #WestBengal #PanchayatElections pic.twitter.com/S3OR83QfHp
— ANI (@ANI) 14 May 2018
ಘಟನೆಲ್ಲಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಚುನಾವಣಾ ವರದಿಗಾರಿಕೆಗೆ ತೆರಳಿದ್ದ ಐವರು ಸ್ಥಳೀಯ ಪತ್ರಕರ್ತರು ಸಹ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾಂಗರ್ ಎಂಬಲ್ಲಿ ಮಾಧ್ಯಮದ ವಾಹನವನ್ನು ಜಖಂಗೊಳಿಸಲಾಗಿದ್ದು, ಕ್ಯಾಮೆರಾವನ್ನು ಪುಡಿ ಮಾಡಲಾಗಿದೆ.
ಮುರ್ಷಿಬಾದ್ನಲ್ಲಿ ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ ನಡೆದಿದ್ದು, ಮತಪತ್ರಗಳನ್ನು ಕೆರೆಯೊಂದಕ್ಕೆ ಎಸೆಯಲಾಗಿದೆ. ಅಲ್ಲಿ ಮತದಾನ ಸ್ಥಗಿತಗೊಳಿಸಲಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications