Condom Viral Video: ಕಾಂಡೋಮ್ ಬಗ್ಗೆ ಜಾಗೃತಿ ಮೂಡಿಸಲು ಹೋಗಿ ಎಡವಟ್ಟು, ವೈರಲ್ ವಿಡಿಯೋದಲ್ಲಿ ಏನಿದೆ ?
ಸೋಷಿಯಲ್ ಮೀಡಿಯಾದಲ್ಲಿ ಈಗೆಲ್ಲ ಕೆಲವೊಂದು ವಿಷಯಗಳು ಕ್ಷಣಾರ್ಧದಲ್ಲಿ ವೈರಲ್ ಆಗುವುದಿದೆ. ಇದೀಗ ಕಾಂಡೋಮ್, ಎಚ್ಐವಿ ಹಾಗೂ ಏಡ್ಸ್ ಬಗ್ಗೆ ಜಾಗತಿ ಮೂಡಿಸುವುದಕ್ಕೆ ಹೋಗಿ, ಮುಜುಗರಕ್ಕೆ ಒಳಗಾಗಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋಗೆ ಪುರುಷರ ವಿರೋಧವನ್ನೂ ವ್ಯಕ್ತಪಡಿಸಿದ್ದಾರೆ. ಇಷ್ಟಕ್ಕೂ ವೈರಲ್ ವಿಡಿಯೋದಲ್ಲಿ ಏನಿದೆ ಎನ್ನುವುದನ್ನು ನೋಡೋಣ.
ಇದೀಗ ಸೋಷಿಯಲ್ ಮೀಡಿಯಾದಲ್ಲಿ ಕಾಂಡೋಮ್ ವಿಚಾರಕ್ಕೆ ಸಂಬಂಧಿಸಿದಂತೆ ವಿಡಿಯೋವೊಂದು ಭಾರೀ ವೈರಲ್ ಆಗುತ್ತಿದೆ. ಸಮಸ್ತಿಪುರ ಆಸ್ಪತ್ರೆಯ ವೈರಲ್ ವಿಡಿಯೋ ಭಾರೀ ಸಂಚಲನ ಸೃಷ್ಟಿ ಮಾಡಿದೆ. ವಿಶ್ವ ಏಡ್ಸ್ ದಿನದಂದು ಬಿಹಾರದ ಸಮಸ್ತಿಪುರದ ಸದರ್ ಆಸ್ಪತ್ರೆಯಲ್ಲಿ ಜಾಗೃತಿ ಅಭಿಯಾನ ನಡೆದಿತ್ತು. ಆದರೆ, ಈ ಜಾಗೃತಿ ಅಭಿಯಾನವು ಹಾಸ್ಯದ ಕಾರ್ಯಕ್ರಮವಾಗಿ ಬದಲಾಗಿದೆ. ಇಲ್ಲಿನ ಜನರಲ್ ನರ್ಸಿಂಗ್ ಹೋಮ್ವೊಂದರ ವಿದ್ಯಾರ್ಥಿಗಳು ಆಸ್ಪತ್ರೆ ಆವರಣದಿಂದ ಪ್ರಮುಖ ಬೀದಿಗಳಲ್ಲಿ ಏಡ್ಸ್, ಎಚ್ಐವಿ ಹಾಗೂ ಕಾಂಡೋಮ್ ಜಾಗೃತಿ ಜಾಥಾ ಭಾರೀ ವೈರಲ್ ಆಗಿದೆ.

ಜಾಗೃತಿ ವಿಡಿಯೋ ಹೋಗಿ ಬೇರೆಯದ್ದೇ ಆಗಿದೆ. ಈ ರೀತಿಯಲ್ಲಾ ಯಾರಾದರೂ ಕಾಂಡೋಮ್ ಬಗ್ಗೆ ಜಾಗೃತಿ ಮೂಡಿಸುತ್ತಾರೆಯೇ ಎಂದು ಜನ ಈಗ ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನೆ ಮಾಡುವುದಕ್ಕೆ ಶುರು ಮಾಡಿದ್ದಾರೆ. ಗಂಡ ಅಲೆಮಾರಿಯಾಗಿದ್ದರೆ, ಕಾಂಡೋಮ್ಗಳು ಮಾತ್ರ ಆಸರೆ. ವಿದೇಶಕ್ಕೆ ಹೋಗಬೇಡ... ಏಡ್ಸ್ ತರಬೇಡ ಎಂದು ಈ ವಿದ್ಯಾರ್ಥಿಗಳು ಘೋಷಣೆ ಕೂಗಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಇನ್ನು KHOJ News ಎನ್ನುವ ಸ್ಥಳೀಯ ಮಾಧ್ಯಮ ಮಾಡಿರುವ ಸುದ್ದಿಯ ವಿಡಿಯೋ ಇದಾಗಿದೆ.
ವಿದ್ಯಾರ್ಥಿಗಳು ಎತ್ತಿರುವ ಈ ಘೋಷಣೆಗಳು ಕೇವಲ ಹಾಸ್ಯ ಅಥವಾ ವ್ಯಂಗ್ಯವಾಗಿರಲಿಲ್ಲ, ಬದಲಿಗೆ ಹಾಜರಿದ್ದವರಿಗೆ ಗಂಭೀರ ಸಂದೇಶವನ್ನು ನೀಡಿತು ಎಂದೂ ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ಜಾಗೃತಿ ಮೂಡಿಸುವಂತ ಒಳ್ಳೆಯ ಕೆಲಸವನ್ನು ಇಷ್ಟೊಂದು ಕೆಟ್ಡದಾಗಿ ಯಾರಾದರೂ ಮಾಡಲು ಸಾಧ್ಯವೇ ಎಂದು ಪ್ರಶ್ನೆ ಸಹ ಮಾಡಿದ್ದಾರೆ.
अगर पति आवारा है, कंडोम ही सहारा है
— Einstein Yadav (@GYdv28) December 2, 2025
सदर अस्पताल समस्तीपुर 📍😅 pic.twitter.com/VOYaLWHZ85
ವ್ಯಾಪಕ ಟೀಕೆ: ಇನ್ನು ಕಾಂಡೋಮ್ ಜಾಗೃತಿ ವಿಚಾರದಲ್ಲಿ ಕೂಗಿರುವ ಘೋಷಣೆಗಳಿಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಈ ರೀತಿ ಪುರುಷರನ್ನು ಗುರಿಯಾಗಿಸಿಕೊಂಡು ಹಾಗೂ ಮಹಿಳೆಯರಿಗೂ ಅವಮಾನ ಆಗುವ ರೀತಿಯಲ್ಲಿ ಘೋಷಣೆಗಳನ್ನು ರಚಿಸಿದವರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಪ್ರಚಾರ ಮತ್ತು ಜಾಗೃತಿಯ ಹೆಸರಿನಲ್ಲಿ ಇಷ್ಟೊಂದು ಕೆಟ್ಟ ಸಂದೇಶ ಹಂಚಿಕೊಳ್ಳಬಾರದು. ಅದರಲ್ಲೂ ವಿದ್ಯಾರ್ಥಿಗಳಿಂದ ಈ ರೀತಿಯ ಸ್ಲೋಗನ್ ಹೇಳಿಸಿರುವುದು ತಪ್ಪು ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.
ಒಟ್ಟಾರೆ ಸೋಷಿಯಲ್ ಮೀಡಿಯಾದಲ್ಲಿ ಕಳೆದ ಮೂರು ದಿನಗಳಿಂದಲೂ ಈ ವೈರಲ್ ವಿಡಿಯೋ ಹಲವು ಚರ್ಚೆಗೆ ಕಾರಣವಾಗಿದೆ.
-
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications