"ಈ ಮೂರ್ಖರಿಂದ ಏನನ್ನೂ ನಿಭಾಯಿಸಲು ಸಾಧ್ಯವಿಲ್ಲ" ಎಂದ ನಟ ಕಿಶೋರ್!
ಜೈ ಶ್ರೀ ರಾಮ್ ನಿಂದ ವಂದೇ ಮಾತರಂ ವರೆಗೆ .. ಎನ್ನುವ ಶೀರ್ಷಿಕೆಯೊಂದಿಗೆ ನಟ ಕಿಶೋರ್ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಬರಹವು ಇದೀಗ ಮಿಶ್ರ ಪ್ರತಿಕ್ರಿಯೆಗೆ ಕಾರಣವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರವನ್ನು ಗುರಿಯಾಗಿಸಿಕೊಂಡು ನಟ ಕಿಶೋರ್ ಅವರು ಈ ಟ್ವೀಟ್ ಮಾಡಿದ್ದಾರೆ. ಈ ಹೊತ್ತಿಗೆ ನಾವು ಅರ್ಥಮಾಡಿಕೊಂಡಿರಬೇಕಿತ್ತು ಈ ಮೂರ್ಖರಿಂದ ಏನನ್ನೂ ನಿಭಾಯಿಸಲು ಸಾಧ್ಯವಿಲ್ಲವೆಂದು... ಅವರು ಮಾಡಬಹುದಾದದ್ದು ಇಷ್ಟೇ ವಿಭಜಿಸು ಇಲ್ಲ ದಿಕ್ಕು ತಪ್ಪಿಸುವುದು ಎಂದು ನಟ ಕಿಶೋರ್ ಹೇಳಿದ್ದಾರೆ.

ಇತರರನ್ನು ಪ್ರೀತಿಯಿಂದ ಸ್ವಾಗತಿಸಲು ಬಳಸುತ್ತಿದ್ದ ಅಭಿವ್ಯಕ್ತಿಯನ್ನು ಹೇಗೆ ಸ್ವಾಧೀನಪಡಿಸಿಕೊಂಡು ಅದನ್ನು ಯುದ್ಧಘೋಷವಾಗಿ, ಮುಸ್ಲಿಮರ ವಿರುದ್ಧ ದ್ವೇಷದ ಅಸ್ತ್ರವಾಗಿ, ಅಧಿಕಾರ ಹಿಡಿಯುವ ಸುಲಭ ಸಾಧನವಾಗಿ ಪರಿವರ್ತಿಸಲಾಗಿದೆಯೋ ಹಾಗೆಯೇ, ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ಪಾತ್ರವಿಲ್ಲದ, ನಿಜವಾದ ದೇಶಭಕ್ತರು ನಿರ್ಮಿಸಿದ ಎಲ್ಲವನ್ನೂ ಮಾರುತ್ತಿರುವ ಅಧಿಕಾರದಲ್ಲಿರುವ ನಿಷ್ಪ್ರಯೋಜಕ ಜನರು ಈಗ ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಬಳಸಿದ ಹಾಡನ್ನು.
ಕಾಲಾಂತರದಲ್ಲಿ ಕೋಮು ಪಕ್ಷಪಾತದ ಕಾದಂಬರಿ ಆನಂದ ಮಠಕ್ಕೆ ತಳಕು ಹಾಕಿಕೊಂಡರೂ ಸಹ, ಸ್ವಾತಂತ್ರ್ಯ ಹೋರಾಟಕ್ಕೆ ಜೀವ ತುಂಬಿದ ಮತ್ತು ಭಾರತದಾದ್ಯಂತ ಜನರನ್ನು ಒಗ್ಗೂಡಿಸಿದ ಹಾಡನ್ನು ಧಾರ್ಮಿಕ ಆಧಾರದ ಮೇಲೆ ದೇಶವನ್ನು ವಿಭಜಿಸಲು, ತಮ್ಮ ರಾಜಕೀಯ ಲಾಭಕ್ಕೆ ಬಳಸಲು ಪ್ರಯತ್ನಿಸುತ್ತಿದ್ದಾರೆ. ಕುಸಿಯುತ್ತಿರುವ ರೂಪಾಯಿ ಮೌಲ್ಯ, ಆರ್ಥಿಕತೆ ಮತ್ತು ಕುಸಿಯುತ್ತಿರುವ ಪ್ರಜಾಪ್ರಭುತ್ವ ಸಂಸ್ಥೆಗಳು, ನಕಲಿ ಜಿಡಿಪಿ ಮತ್ತು ರೈತರಿಗೆ ನೀಡಿದ ನಕಲಿ ಭರವಸೆಗಳು, ಆರೋಗ್ಯ ಮತ್ತು ನಿರುದ್ಯೋಗ, ಅಮೆರಿಕ ಮತ್ತು ಚೀನಾ, ಮಣಿಪುರ ಮತ್ತು ಲಡಾಖ್, ವಿಜ್ಞಾನಿಗಳು ಮತ್ತು ವಿದ್ವಾಂಸರ ಅಕ್ರಮ ಬಂಧನಗಳು ಮುಂತಾದ ಎಲ್ಲಾ ಅಗತ್ಯ ಮತ್ತು ಗಂಭೀರ ಸಮಸ್ಯೆಗಳನ್ನು ನಿರ್ಲಕ್ಷಿಸಿ ಎಂದು ಟೀಕಿಸಿದ್ದಾರೆ.
ಈ ಹೊತ್ತಿಗೆ ನಾವು ಅರ್ಥಮಾಡಿಕೊಂಡಿರಬೇಕಿತ್ತು ಈ ಮೂರ್ಖರಿಂದ ಏನನ್ನೂ ನಿಭಾಯಿಸಲು ಸಾಧ್ಯವಿಲ್ಲವೆಂದು... ಅವರು ಮಾಡಬಹುದಾದದ್ದು ಇಷ್ಟೇ ವಿಭಜಿಸು ಇಲ್ಲ ದಿಕ್ಕು ತಪ್ಪಿಸುವುದು ಎಂದು ಅವರು ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಬರೆದುಕೊಂಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆ: ಇನ್ನು ನಟ ಕಿಶೋರ್ ಅವರು ಈಚೆಗೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಈ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಿದ್ದೇಶ್ ಎನ್ನುವವರು, ಕೋಟಿ ಗಟ್ಟಲೆ ಖರ್ಚು ಮಾಡಿ ಅಧಿವೇಶನ ನಡೆಸ್ತಾರೆ.
ಆದ್ರೆ ಚರ್ಚೆ ಆಗೋ ವಿಷಯ ಮಾತ್ರ ಬರಿ ಇಂತವೆ.....! ಬನ್ನಿ ಸಾರ್ ನಾವು ನೀವು Anti Nationalಗಳು ಪಕ್ಕದ ದೇಶಕ್ಕೆ ಹೋಗೋಣ. ಈ ದೇಶದ ಕಥೆ ಇಷ್ಟೇ ಎಂದು ಬೆಂಬಲ ಸೂಚಿಸಿದ್ದಾರೆ. ಇನ್ನೂ ಕೆಲವರು ನಿಮಗೆ ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗುವುದು ಪಕ್ಕಾ ಎಂದೂ ಹೇಳಿದ್ದಾರೆ.
-
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Viral Video: ಕಡಿಮೆ ಹಣದಲ್ಲಿ ಬದುಕೋದು ಹೇಗೆ ? ಬೆಂಗಳೂರು ಇಂಟರ್ನ್ ಹೇಳಿದ ಟ್ರಿಕ್ಗಳು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ












Click it and Unblock the Notifications