ವೈರಲ್ ವಿಡಿಯೋ: ಸಂಸದನ ಪಾದ ತೊಳೆದು ನೀರು ಕುಡಿದ ಬಿಜೆಪಿ ಕಾರ್ಯಕರ್ತ!
Recommended Video

ಗೊಡ್ಡ(ಜಾರ್ಖಂಡ್), ಸೆಪ್ಟೆಂಬರ್ 17: ಇದನ್ನೇನು ಅಭಿಮಾನದ ಪರಾಕಾಷ್ಠೆ ಎನ್ನಬೇಕಾ... ಅಥವಾ ಓವರ್ acting ಅನ್ಬೇಕಾ ಗೊತ್ತಿಲ್ಲ! ಜಾರ್ಖಂಡ್ ನ ಗೊಡ್ಡಾ ಕ್ಷೇತ್ರದ ಬಿಜೆಪಿ ಸಂಸದರ ಪಾದ ತೊಳೆದು, ಆ ನೀರನ್ನು ಕಾರ್ಯಕರ್ತನೊಬ್ಬ ಕುಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ!
ಸಂಸದ ನಿಶಿಕಾಂತ್ ದುಬೆ ಅವರ ಕಟ್ಟಾ ಅಭಿಮಾನಿಯಾಗಿರುವ ಕಾರ್ಯಕರ್ತನೊಬ್ಬ ತನ್ನ ಅಭಿಮಾನವನ್ನು ವ್ಯಕ್ತಪಡಿಸಿದ ರೀತಿಯ ಕುರಿತು ಇದೀಗ ಸಾಕಷ್ಟು ಚರ್ಚೆ ಎದ್ದಿದೆ. ಉದ್ವೇಗಕ್ಕೊಳಗಾದ ಕಾರ್ಯಕರ್ತ ಸಂಸದರ ಪಾದವನ್ನು ತೊಳೆದು, ನಂತರ ಪಾದ ತೊಳೆದ ನೀರನ್ನು ತಾನೇ ತೀರ್ಥದಂತೆ ಸೇವಿಸುವ ಮೂಲಕ ತನ್ನ ಅಭಿಮಾನ ಮೆರೆದಿದ್ದಾನೆ. ಈ ನಡೆಯನ್ನು ಜೊತೆಗಿರುವವರೆಲ್ಲ ಚಪ್ಪಾಳೆ ತಟ್ಟಿ ಮೆಚ್ಚಿದ್ದಾರೆ.
#WATCH BJP worker washes feet of BJP Godda MP Nishikant Dubey and drinks that water, at an event in Jharkhand's Godda (16.09.18) pic.twitter.com/J2YwazQDhg
— ANI (@ANI) September 17, 2018
ಈ ನಡೆಯ ಬಗ್ಗೆ ಎದ್ದ ವ್ಯಂಗ್ಯೋಕ್ತಿಗಳಿಗೆ ಪ್ರತಿಕ್ರಿಯಿಸಿದ ಸಂಸದ ದುಬೆ, 'ಅತಿಥಿಗಳ ಪಾದ ತೊಳೆಯುವುದರಲ್ಲಿ ತಪ್ಪೇನಿದೆ? ಇದಕ್ಕೆ ರಾಜಕೀಯ ಬಣ್ಣ ಹಚ್ಚುವುದೇಕೆ? ನೀವು ಮಹಾಭಾರತದ ಕಥೆಗಳನ್ನು ಓದಿಲ್ಲವೇ?' ಎಂದು ಪ್ರಶ್ನಿಸಿದ್ದಾರೆ.

ಈ ಘಟನೆಯ ನಂತರ ಫೇಸ್ ಬುಕ್ ನಲ್ಲಿ ಸ್ಟೇಟಸ್ ಹಾಕಿರುವ ದುಬೆ, ಇಂದು ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಪವನ್ ಸಿಂಗ್, ಸಾವಿರ ಜನರೆದುರು ನನ್ನ ಪಾದ ತೊಳೆದರು. ನನಗೂ ಇಂಥದೇ ಅವಕಾಶ ಸಿಕ್ಕು, ನಾನೂ ನನ್ನ ಪಕ್ಷದ ಕಾರ್ಯಕರ್ತರ ಪಾದ ತೊಳೆದು, ಆ ನೀರನ್ನು ಕುಡಿಯುವಂತಾಗಲಿ' ಎಂದು ಹಾರೈಸುತ್ತೇನೆ ಎಂದಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications