ವೈರಲ್ ವಿಡೀಯೋ: ವಾಜಪೇಯಿ ಶ್ರದ್ಧಾಂಜಲಿ ಸಭೆಯಲ್ಲಿ ನಕ್ಕ ಬಿಜೆಪಿ ನಾಯಕರು!
Recommended Video

ರಾಯ್ಪುರ, ಆಗಸ್ಟ್ 24: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಬಿಜೆಪಿಯ ಇಬ್ಬರು ಪ್ರಭಾವಿ ನಾಯಕರು ಗಹಗಹಿಸಿ ನಗುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಛತ್ತೀಸ್ ಗಢದ ರಾಯ್ಪುರಲ್ಲಿ ಆ.23 ರಂದು ನಡೆಯುತ್ತಿದ್ದ ವಾಜಪೇಯಿ ಶ್ರದ್ಧಾಂಜಲಿ ಸಭೆಯಲ್ಲಿ, ಛತ್ತೀಸ್ ಗಢದ ಕೃಷಿ ಸಚಿವ ಬೃಜ್ಮೋಹನ್ ಅಗರ್ವಾಲ್ ಮತ್ತು ಆರೋಗ್ಯ ಸಚಿವ ಅಜಯ್ ಚಂದ್ರಶೇಖರ್ ಅವರು ಹಾಸ್ಯ ಮಾಡಿಕೊಂಡು ನಗುತ್ತಿದ್ದರು.
A clip of former PM #AtalBihariVajpayee Ji’s “ प्रार्थना सभा”
— Priyanka Gandhi (@PriyankaJi_) August 22, 2018
Organised by Chhattisgarh Govt., just look the faces of Cabinet of BJP.
Shameless creatures 👎 pic.twitter.com/56pE6S2bSB
ಮಾಜಿ ಪ್ರಧಾನಿಯೊಬ್ಬರ ಶ್ರದ್ಧಾಂಜಲಿ ಸಭೆಯಲ್ಲಿ ಅವರದೇ ಪಕ್ಷದ ನಾಯಕರು, ಅದರಲ್ಲೂ ಜವಾಬ್ದಾರಿಯುತ ಸ್ಥಾನದಲ್ಲಿರುವ ಮಂತ್ರಿಗಳು ಹೀಗೆ ನಗುತ್ತಿರುವುದನ್ನು ಹಲವರು ಖಂಡಿಸಿದ್ದಾರೆ.
ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ(93) ಅವರು ಆಗಸ್ಟ್ 16 ರಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೃತರಾದರು.

ಅವರ ಮರಣಾನಂತರ ಅವರ ನೆನಪಿಗಾಗಿ ಛತ್ತೀಸ್ ಗಢ ರಾಜಧಾನಿ ನಯಾ ರಾಯ್ಪುರವನ್ನು ಅಟಲ್ ನಗರ ಎಂದು ಮರುನಾಮಕರಣ ಮಾಡಲು ಛತ್ತೀಸ್ ಗಢ ಸರ್ಕಾರ ನಿರ್ಧರಿಸಿತ್ತು. ಆದರೆ ಅಟಲ್ ಜೀ ಅವರಿಗೆ ಇಷ್ಟೆಲ್ಲ ಗೌರವ ನೀಡಲು ಹೊರಟ ಛತ್ತೀಸ್ ಗಢದ ನಾಯಕರೇ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಹೀಗೆ, ಗಾಂಭೀರ್ಯ ಮರೆತು ನಕ್ಕಿದ್ದು ಸರಿಯೇ ಎಂಬುದು ಈಗಿರುವ ಪ್ರಶ್ನೆ!
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications