ವಿಡಿಯೋ; ಸ್ವಚ್ಛತಾ ಅಭಿಯಾನಕ್ಕೆ ಹೊಸ ರಾಯಭಾರಿ!
ನವದೆಹಲಿ, ಅಕ್ಟೋಬರ್ 20; ಪ್ರಾಣಿ, ಪಕ್ಷಿಗಳ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೋಟ್ಯಾಂತರ ಜನರು ಇಷ್ಟಪಡುತ್ತಾರೆ. ಎಂದೋ ಪೋಸ್ಟ್ ಮಾಡಿದ ವಿಡಿಯೋ ಮತ್ತೆಂದೋ ವೈರಲ್ ಆಗುವ ಮೂಲಕ ಜಾಲತಾಣದಲ್ಲಿ ಮಿಲಿಯನ್ ಗಟ್ಟಲೇ ಜನರು ನೋಡುವಂತಾಗುತ್ತದೆ.
ಐಎಫ್ಎಸ್ ಅಧಿಕಾರಿ ಪ್ರವೀಣ್ ಕಾಸ್ವಾನ್ ಟ್ವೀಟ್ ಮಾಡಿರುವ ವಿಡಿಯೋವೊಂದು 48 ಗಂಟೆಗಳಿಂದ ಸಾಮಾಜಿಕ ತಾಲತಾಣದಲ್ಲಿ ವೈರಲ್ ಆಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಸ್ವಚ್ಚತಾ ಅಭಿಯಾನಕ್ಕೆ ಹೊಸ ರಾಯಭಾರಿ ಸಿಕ್ಕಿದಂತೆ ಆಗಿದೆ.
ಪ್ರವೀಣ್ ಕಾಸ್ವಾನ್ 2020ರ ಆಗಸ್ಟ್ 28ರಂದು ಮಾಡಿದ್ದ ಟ್ವೀಟ್ ಈಗ ವೈರಲ್ ಆಗುತ್ತಿದೆ. ಆನೆಯೊಂದು ಕಸದ ಬುಟ್ಟಿ ಸಮೀಪ ಬಿದ್ದಿರುವ ಕಸವನ್ನು ಎತ್ತಿ ಬುಟ್ಟಿಗೆ ಹಾಕುವ 38 ಸೆಕೆಂಡ್ಗಳ ವಿಡಿಯೋ ಇದಾಗಿದೆ.

ಪ್ರವೀಣ್ ಕಾಸ್ವಾನ್ 'This elephant should be mascot of Swatch Bharat. A forward' ಎಂದು ಬರೆದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಕೇವಲ 30 ಸೆಕೆಂಡ್ ವಿಡಿಯೋವನ್ನು ಇದುವರೆಗೂ 398.2ಕೆ ಜನರು ವೀಕ್ಷಣೆ ಮಾಡಿದ್ದಾರೆ. 5983 ಜನರು ರಿ ಟ್ವೀಟ್ ಮಾಡಿದ್ದಾರೆ. 34.3ಕೆ ಜನರು ಲೈಕ್ ಮಾಡಿದ್ದಾರೆ.
This elephant should be mascot of Swatch Bharat. A forward. pic.twitter.com/1oOeoe1MA9
— Parveen Kaswan, IFS (@ParveenKaswan) August 28, 2020
ಕಂಡ ಕಂಡಲ್ಲಿ ಕಸ ಎಸೆಯುವ ಜನರಿಗಿಂತ ಕಸವನ್ನು ಬುಟ್ಟಿಗೆ ಹಾಕುವ ಆನೆಯ ವಿಡಿಯೋವನ್ನು ನೆಟ್ಟಿಗರು ಇಷ್ಟಪಟ್ಟಿದ್ದಾರೆ. ವಿಡಿಯೋವನ್ನು ವೈರಲ್ ಮಾಡಿದ್ದಾರೆ. ತನ್ನ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂಬುದನ್ನು ಆನೆ ನೋಡಿ ಕಲಿಯಬೇಕು ಎಂದು ಕಮೆಂಟ್ ಹಾಕಿದ್ದಾರೆ.
ಚಿರತೆಯ ಫೋಟೋ ವೈರಲ್; ಬುಧವಾರ ಚಿರತೆಯೊಂದ ಬಾಯಿಯ ಸಮೀಪದಲ್ಲಿ ಮಂಗ ಇರುವ ಫೋಟೋ ಸಾಮಾಜಿಕ ತಾಲತಾಣದಲ್ಲಿ ವೈರಲ್ ಆಗಿದೆ. ಪ್ರವೀಣ್ ಕಾಸ್ವಾನ್ ಅಕ್ಟೋಬರ್ 19ರಂದು ಮಾಡಿರುವ ಟ್ವೀಟ್ ಇದಾಗಿದೆ.
Later leopard played with baby for some time & then killed her also. Wild is raw. It’s real. https://t.co/MUZ4k7rStw
— Parveen Kaswan, IFS (@ParveenKaswan) October 19, 2021
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications