Ram Mandir: ರಾಮ ಮಂದಿರ ಉದ್ಘಾಟನೆ ಬಗ್ಗೆ ವೀರೇಂದ್ರ ಸೆಹ್ವಾಗ್ ಹೇಳಿದ್ದೇನು?
ಸೋಮವಾರ ಅಯೋಧ್ಯೆಯ ರಾಮಜನ್ಮಭೂಮಿ ದೇವಸ್ಥಾನದಲ್ಲಿ ಶ್ರೀರಾಮನ ವಿಗ್ರಹವನ್ನು ಅನಾವರಣಗೊಳಿಸುತ್ತಿದ್ದಂತೆ ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿದ್ದು, ಭಾವನಾತ್ಮಕವಾಗಿ ಸಂದೇಶ ನೀಡಿದ್ದಾರೆ.
"ಭಾವನಾತ್ಮಕ ಮತ್ತು ಸಂತೋಷವಾಗಿದೆ, ನಾನು ಶರಣಾಗಿದ್ದೇನೆ, ನಾನು ತೃಪ್ತಿ ಹೊಂದಿದ್ದೇನೆ, ನಾನು ಮೂಕನಾಗಿದ್ದೇನೆ, ನಾನು ಕೇವಲ ರಾಮಮಯ ಆಗಿದ್ದೇನೆ. ಶ್ರೀರಾಮಚಂದ್ರನ ಮಹಿಮೆ. ಬಾಲರಾಮ ಬಂದಿದ್ದಾರೆ. ಇದನ್ನು ಸಾಧ್ಯವಾಗಿಸಿದ ಮತ್ತು ತ್ಯಾಗ ಮಾಡಿದ ಎಲ್ಲರಿಗೂ ಕೃತಜ್ಞತೆಗಳು . ಜೈ ಶ್ರೀ ರಾಮ್," ಮಾಜಿ ಭಾರತೀಯ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಸೆಹ್ವಾಗ್, ಎಕ್ಸ್ನಲ್ಲಿ ಬರೆದಿದ್ದಾರೆ.

ರಾಮನ ಫೋಟೊಗಳನ್ನು ಹಂಚಿಕೊಂಡಿರುವ ತಮ್ಮ ರಾಮಭಕ್ತಿಯನ್ನು ವ್ಯಕ್ತಪಡಿಸಿದ್ದಾರೆ. ಭಾನುವಾರ ಕೂಡ ರಾಮ ಮಂದಿರ ಉದ್ಘಾಟನೆ ಬಗ್ಗೆ ಟ್ವೀಟ್ ಮಾಡಿದ್ದ ಸೆಹ್ವಾಗ್, ಬಹುಶಃ ಇದೇ ಮೊದಲ ಬಾರಿಗೆ ಭಾನುವಾರದಂದು ಸೋಮವಾರಕ್ಕಾಗಿ ಕಾಯಲಾಗುತ್ತಿದೆ ಎಂದು ರಾಮ ಮಂದಿರ ಉದ್ಘಾಟನೆ ನೋಡಲು ಕಾತರರಾಗಿರುವುದಾಗಿ ಎಕ್ಸ್ನಲ್ಲಿ ಹಂಚಿಕೊಂಡಿದ್ದರು.
ಹಲವು ಕ್ರಿಕೆಟಿಗರು ಭಾಗಿ
ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಸಿನಿಮಾ ನಟರು, ಕ್ರಿಕೆಟ್ ತಾರೆಯರು ಭಾಗವಹಿಸಿದ್ದರು. ಭಾರತದ ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರು ಸೋಮವಾರ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಿದ್ದರು. ತೆಂಡೂಲ್ಕರ್ ಸಾಂಪ್ರದಾಯಿಕ ಕುರ್ತಾ ಪೈಜಾಮಾ ಧರಿಸಿ ಗಮನ ಸೆಳೆದರು.
ಕನ್ನಡಿಗ ಅನಿಲ್ ಕುಂಬ್ಳೆ ಕೂಡ ಪತ್ನಿ ಸಮೇತರಾಗಿ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾನದಲ್ಲಿ ಭಾಗವಹಿಸಿದ್ದರು. ವೆಂಕಟೇಶ್ ಪ್ರಸಾದ್, ವಿರಾಟ್ ಕೊಹ್ಲಿ, ಮಿಥಾಲಿ ರಾಜ್ ಕೂಡ ಈ ಸಂದರ್ಭದಲ್ಲಿ ಭಾಗವಹಿಸಿದ್ದರು.
ಭಾರತದ ಒಲಿಂಪಿಕ್ ಪದಕ ವಿಜೇತ ಷಟ್ಲರ್ ಸೈನಾ ನೆಹ್ವಾಲ್ ಅವರು ಭವ್ಯ ಸಮಾರಂಭದಲ್ಲಿ ಭಾಗವಹಿಸಿದ್ದರು. ಎಂಎಸ್ ಧೋನಿ, ವಿರಾಟ್ ಕೊಹ್ಲಿ, ಮಿಥಾಲಿ ರಾಜ್, ಹರ್ಮನ್ಪ್ರೀತ್ ಕೌರ್ ಮತ್ತು ರವಿಚಂದ್ರನ್ ಅಶ್ವಿನ್ ಅವರಂತಹ ಕ್ರೀಡಾಪಟುಗಳನ್ನು ಆಹ್ವಾನಿಸಲಾಗಿತ್ತು.
ದೇವಸ್ಥಾನದ ವಿಶೇಷತೆಗಳೇನು?
ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಂತರು ಮತ್ತು ಗಣ್ಯಾತಿಗಣ್ಯರ ಸಮ್ಮುಖದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆಯ ಐತಿಹಾಸಿಕ ಆಚರಣೆ ನಡೆಯಿತು.
ಈ ದೇವಾಲಯವನ್ನು ಸಾಂಪ್ರದಾಯಿಕ ನಾಗರ ಶೈಲಿಯಲ್ಲಿ ನಿರ್ಮಿಸಲಾಗಿದೆ. ಇದರ ಉದ್ದ (ಪೂರ್ವ-ಪಶ್ಚಿಮ) 380 ಅಡಿ, ಅಗಲ 250 ಅಡಿ ಮತ್ತು ಎತ್ತರ 161 ಅಡಿ. ಇದು ಒಟ್ಟು 392 ಕಂಬಗಳು ಮತ್ತು 44 ಬಾಗಿಲುಗಳಿವೆ.
ದೇವಾಲಯದ ಕಂಬಗಳು ಮತ್ತು ಗೋಡೆಗಳು ಹಿಂದೂ ದೇವತೆಗಳು, ದೇವರುಗಳು ಮತ್ತು ದೇವತೆಗಳ ಸಂಕೀರ್ಣವಾದ ಕೆತ್ತನೆಯ ಚಿತ್ರಣಗಳನ್ನು ಕಾಣಬಹುದಾಗಿದೆ. ನೆಲ ಅಂತಸ್ತಿನ ಮುಖ್ಯ ಗರ್ಭಗುಡಿಯಲ್ಲಿ, ಬಾಲರಾಮನ ಮೂರ್ತಿಯನ್ನು ಇಡಲಾಗಿದೆ. ದೇವಾಲಯದ ಮುಖ್ಯ ದ್ವಾರವು ಪೂರ್ವ ಭಾಗದಲ್ಲಿ ನೆಲೆಗೊಂಡಿದೆ, ಇದನ್ನು ಸಿಂಗ್ ದ್ವಾರದ ಮೂಲಕ 32 ಮೆಟ್ಟಿಲುಗಳನ್ನು ಏರುವ ಮೂಲಕ ತಲುಪಬಹುದು. ಮಂದಿರದಲ್ಲಿ ನೃತ್ಯ ಮಂಟಪ, ರಂಗ ಮಂಟಪ, ಸಭಾ ಮಂಟಪ, ಪ್ರಾರ್ಥನಾ ಮಂಟಪ ಮತ್ತು ಕೀರ್ತನ ಮಂಟಪ ಎನ್ನುವ ಒಟ್ಟು ಐದು ಮಂಟಪಗಳಿವೆ.
ದೇವಾಲಯದ ಬಳಿ ಒಂದು ಐತಿಹಾಸಿಕ ಬಾವಿ ಇದೆ, ಇದು ಪ್ರಾಚೀನ ಯುಗದ ಹಿಂದಿನದು ಎಂದು ನಂಬಲಾಗಿದೆ. ದೇವಾಲಯದ ಸಂಕೀರ್ಣದ ನೈಋತ್ಯ ಭಾಗದಲ್ಲಿ, ಕುಬೇರ್ ತಿಲಾದಲ್ಲಿ, ಭಗವಾನ್ ಶಿವನ ಪ್ರಾಚೀನ ದೇವಾಲಯವನ್ನು ಪುನಃಸ್ಥಾಪಿಸಲಾಗಿದೆ, ಜೊತೆಗೆ ಜಟಾಯುವಿನ ಪ್ರತಿಮೆಯನ್ನು ಸ್ಥಾಪಿಸಲಾಗಿದೆ.
ದೇವಾಲಯದ ಅಡಿಪಾಯವನ್ನು 14-ಮೀಟರ್ ದಪ್ಪದ ರೋಲರ್-ಕಾಂಪ್ಯಾಕ್ಟ್ ಕಾಂಕ್ರೀಟ್ (RCC) ಪದರದಿಂದ ನಿರ್ಮಿಸಲಾಗಿದೆ, ಇದು ಕೃತಕ ಬಂಡೆಯ ನೋಟವನ್ನು ನೀಡುತ್ತದೆ. ದೇವಸ್ಥಾನದಲ್ಲಿ ಎಲ್ಲಿಯೂ ಕಬ್ಬಿಣ ಬಳಸುವುದಿಲ್ಲ. ನೆಲದ ತೇವಾಂಶದಿಂದ ರಕ್ಷಣೆಗಾಗಿ, ಗ್ರಾನೈಟ್ ಬಳಸಿ 21 ಅಡಿ ಎತ್ತರದ ಸ್ತಂಭವನ್ನು ನಿರ್ಮಿಸಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications