Adipurush: ಆದಿಪುರುಷ ನೋಡಿದ ನಂತರ ಕಟ್ಟಪ್ಪ ಬಾಹುಬಲಿಯನ್ನು ಕೊಂದಿದ್ಯಾಕೆ ತಿಳಿಯಿತು ಎಂದ ಸೆಹ್ವಾಗ್
600 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ತಯಾರಾದ ಬಹು ನಿರೀಕ್ಷಿತ ಆದಿಪುರುಷ್ ಸಿನಿಮಾ ಜೂನ್ 18ರಂದು ವಿಶ್ವದಾದ್ಯಂತ ಬಿಡುಗಡೆಯಾಗಿದೆ. ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನಿರ್ಮಾಪಕ ಈಗ ನಷ್ಟದ ಭೀತಿಯಲ್ಲಿದ್ದಾರೆ. ಸಿನಿಮಾ ನೋಡಿದ ಹಲವು ಮಂದಿ ರಾಮಾಯಣಕ್ಕೆ ಅವಮಾನ ಮಾಡಿದ್ದಾರೆ ಎಂದು ಹಿಂದೂ ಸಂಘಟನೆಗಳು ಕೂಡ ಚಿತ್ರವನ್ನು ಬ್ಯಾನ್ ಮಾಡುವಂತೆ ಪ್ರತಿಭಟನೆ ಮಾಡಿದ್ದವು.
ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಕೂಡ ಈಗ ಆದಿಪುರುಷ್ ಚಿತ್ರವನ್ನು ಒಂದೇ ಸಾಲಿನಲ್ಲಿ ಚಿತ್ರದ ಬಗ್ಗೆ ತಮ್ಮ ಅನಿಸಿಕೆ ತಿಳಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, "ಆದಿಪುರುಷ್ ನೋಡಿದ ನಂತರ ಕಟ್ಟಪ್ಪ ಬಾಹುಬಲಿಯನ್ನು ಯಾಕೆ ಸಾಯಿಸಿದ್ದು ಎಂದು ನನಗೆ ಅರ್ಥವಾಯಿತು" ಎಂದು ತಮ್ಮದೇ ಶೈಲಿಯಲ್ಲಿ ಹೇಳಿದ್ದಾರೆ.

ಈ ಮೂಲಕ ಚಿತ್ರದ ಬಗ್ಗೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿರೇಂದ್ರ ಸೆಹ್ವಾಗ್ ಟ್ವೀಟ್ಗೆ 50 ಸಾವಿರಕ್ಕೂ ಹೆಚ್ಚು ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೆಲವರು, ಸೆಹ್ವಾಗ್ ಹೇಳಿರುವುದು ಸರಿ ಇದೆ ಎಂದಿದ್ದಾರೆ. ಆದಿಪುರುಷ್ ಚಿತ್ರ ಮೊದಲನೇ ವಾರವೇ ನೆಲಕಚ್ಚಿದ್ದು, ನಿರ್ಮಾಪಕರು ಭಾರಿ ನಷ್ಟ ಅನುಭವಿಸುವ ಭಯದಲ್ಲಿದ್ದಾರೆ.
Adipurush dekhkar pata chala Katappa ne Bahubali ko kyun maara tha 😀
— Virender Sehwag (@virendersehwag) June 25, 2023
ಟೀಸರ್ ಬಿಡುಗಡೆಯಾದಾಗಿನಿಂದ ಒಂದಿಲ್ಲೊಂದು ವಿವಾದ
ಆದಿಪುರುಷ್ ಚಿತ್ರದ ಟೀಸರ್, ಟ್ರೈಲರ್ ಬಿಡುಗಡೆಯದಾಗಿನಿಂದ ಕೂಡ ಒಂದಿಲ್ಲೊಂದು ವಿವಾದ ಚಿತ್ರವನ್ನು ಕಾಡುತ್ತಲೇ ಇದೆ. ಮೊದಲು ರಾವಣನ ಗೆಟಪ್, ಆಂಜನೇಯನ ಅವತಾರದ ಬಗ್ಗೆ ವ್ಯಾಪಕ ಟೀಕೆ ಮಾಡಲಾಗಿತ್ತು. ರಾಮನಿಗೆ ಮೀಸೆ ಇರುವ ಬಗ್ಗೆ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದರು.
ಜೂನ್ 18ರಂದು ವಿಶ್ವದಾದ್ಯಂತ ಚಿತ್ರ ಬಿಡುಗಡೆಯಾಗಿದ್ದು, ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಸೀತೆಯನ್ನು ಭಾರತದ ಮಗಳು ಎನ್ನುವ ಸಂಭಾಷಣೆ ಬಗ್ಗೆ ನೇಪಾಳ ಮೇಯರ್ ಆಕ್ರೋಶ ವ್ಯಕ್ತಪಡಿಸಿದ್ದರು. ಚಿತ್ರದ ಸಂಭಾಷಣೆ ತೆಗೆಯುವವರೆಗೂ ಕಠ್ಮಂಡುವಿನಲ್ಲಿ ಚಿತ್ರದ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದರು.
ಉತ್ತರ ಭಾರತದ ಹಲವು ನಗರಗಳಲ್ಲಿ ಚಿತ್ರದ ವಿರುದ್ಧ ಭಾರಿ ಪ್ರತಿಭಟನೆ ಕೂಡ ವ್ಯಕ್ತವಾಗಿದೆ. ಕೆಟ್ಟ ಸಂಭಾಷಣೆಗಳನ್ನು ಬರೆಯಲಾಗಿದೆ ಎಂದು ಸಂಭಾಷಣೆಕಾರನ ವಿರುದ್ಧ ಕೂಡ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ನಂತರ ಚಿತ್ರದಲ್ಲಿ ಹಲವು ಸಂಭಾಷಣೆಗಳನ್ನು ಬದಲಾವಣೆ ಮಾಡಲಾಗಿದೆ. ಮೊದಲ ವಾರದ ನಂತರ ಚಿತ್ರದ ಟಿಕೆಟ್ ದರವನ್ನು ಕಡಿಮೆ ಮಾಡಲಾಗಿದೆ. ಆದರೂ, ಚಿತ್ರಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬಾಹುಬಲಿ ನಂತರ ಹಿಟ್ ಚಿತ್ರವನ್ನು ಕೊಡುವ ಉತ್ಸಾಹದಲ್ಲಿದ್ದ ಪ್ರಭಾಸ್ ಮತ್ತೊಮ್ಮೆ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದು, ಮುಂದಿನ ಚಿತ್ರ ಸಲಾರ್ ಬಗ್ಗೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಕೆಜಿಎಫ್ ಚಿತ್ರದ ನಂತರ ಪ್ರಶಾಂತ್ ನೀಲ್ ಆಕ್ಷನ್ ಕಟ್ ಹೇಳಿದ್ದಾರೆ.
-
'ಕೆಲಸ ಇಲ್ಲ ಅಂದ್ರೆ ಜೀವನ ಮುಗಿದಿಲ್ಲ': ಲಂಡನ್ನಲ್ಲಿ ಕೆಲಸ ಕಳೆದುಕೊಂಡ ಭಾರತೀಯ ಮಹಿಳೆಯ Video Viral -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ












Click it and Unblock the Notifications